ಧಾರವಾಡ | ಬಾಲ್ಯವಿವಾಹ ತಡೆಗೆ ಸಮಿತಿಗಳು ಕ್ರಿಯಾಶೀಲವಾಗಲಿ: ಶೇಖರಗೌಡ ರಾಮತ್ನಾಳ

Date:

Advertisements

ಬಾಲ ಕಾರ್ಮಿಕ, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆದು, ಮಕ್ಕಳನ್ನು ರಕ್ಷಿಸಲು ತಹಶೀಲ್ದಾರ್ ನೇತೃತ್ವದ ತಾಲೂಕು ಮಟ್ಟದ ಅಧಿಕಾರಿಗಳ ತಂಡ ನಿರಂತರ ತಪಾಸಣೆ ಕೈಗೊಳ್ಳಬೇಕು ಎಂದು‌ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಧಾರವಾಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಧಾರವಾಡ ತಾಲೂಕು‌ ಮಟ್ಟದ ಹಲವು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

“ಮಕ್ಕಳಿಗೆ ಸಂವಿಧಾನಾತ್ಮಕವಾಗಿ ಸಿಗುವ ಹಕ್ಕು ದೊರೆಯುವಂತೆ ಮಾಡುವುದು ಎಲ್ಲರ ಕರ್ತವ್ಯ. ಮಕ್ಕಳ ಪ್ರಯಾಣಕ್ಕೆ ಸುರಕ್ಷಿತ ಸಾರಿಗೆ, ಶಾಲೆ, ವಸತಿ ನಿಲಯಗಳಲ್ಲಿ ಉತ್ತಮ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದು ಹೇಳಿದರು.

Advertisements

“ಪೋಕ್ಸೊ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಸಮಾಜದಲ್ಲಿ ಹೆಚ್ಚು ಅರಿವು ಮೂಡಿಸಬೇಕು. ಶಾಲಾ ಮಕ್ಕಳಲ್ಲಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳ ಕುರಿತು ಮಾಹಿತಿ ದೊರೆತ ಕೂಡಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಕ್ರಮ‌ ಕೈಗೊಳ್ಳಬೇಕು” ಎಂದು ಶೇಖರಗೌಡ ಅವರು ತಿಳಿಸಿದರು.

“ತಮ್ಮ ಕರ್ತವ್ಯದ ನಿರ್ಲಕ್ಷ್ಯದಿಂದ ಮಕ್ಕಳಿಗೆ ಹಾನಿ ಆಗದಂತೆ ಜವಾಬ್ದರಿಯಿಂದ ಅಧಿಕಾರಿಗಳು ಕೆಲಸ ಮಾಡಬೇಕು. ವಿಶೇಷವಾಗಿ ಶಿಥಿಲವಾದ ಶಾಲಾ ಕಟ್ಟಡಗಳ, ವಸತಿಶಾಲೆ ಕಟ್ಟಡಗಳ ಬಗ್ಗೆ ಪರಿಶೀಲಿಸಬೇಕು. ದುರಸ್ತಿ ಇದ್ದರೆ ಕೂಡಲೇ ಸರಿ ಮಾಡಿಸಬೇಕು” ಎಂದು ಹೇಳಿದರು.

“ಬಾಲ್ಯವಿವಾಹಗಳ ಬಗ್ಗೆ ಎಚ್ಚರವಹಿಸಬೇಕು. ಸಾಮೂಹಿಕ ವಿವಾಹಗಳ ಅನುಮತಿಸುವಾಗ ನೋಂದಾಯಿತರ ದಾಖಲಾತಿಗಳ ಸಮಗ್ರ ಪರಿಶೀಲನೆ ಆಗಬೇಕು. ಪಾಲಕರಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಪ್ಪದೇ ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದರಾಮಯ್ಯ ಐದು ವರ್ಷ ಅಧಿಕಾರ ಪೂರೈಸುತ್ತಾರೆ: ಸಚಿವ ರಾಜಣ್ಣ

ಧಾರವಾಡ ತಹಶೀಲ್ದಾರ್ ದೊಡ್ಡಪ್ಪ ಹೂಗಾರ, ತಾಲೂಕು ಪಂಚಾಯತ್ ಇಒ ಗಂಗಾಧರ ಕಂದಕೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ, ತಾಲೂಕು ಆರೋಗ್ಯಾಧಿಕಾರಿ ಡಾ. ಕೆ ಎನ್ ತನುಜಾ ಸೇರಿದಂತೆ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ, ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಎಲ್ಲ ಇಲಾಖಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X