ತುಮಕೂರು | 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್ ವಾರ್ಡನ್‌ ಅಮಾನತು

Date:

Advertisements

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆಕೆಯ ಚಲನವಲನ ಹಾಗೂ ಆರೋಗ್ಯದ ಬಗ್ಗೆ ಗಮನವಹಿಸದ ಹಾಸ್ಟೆಲ್‌ ವಾರ್ಡನ್‌ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ವಿದ್ಯಾರ್ಥಿನಿ ತುಮಕೂರು ಜಿಲ್ಲೆಯ ಮಧುಗಿರಿಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆ 7 ತಿಂಗಳ ಗರ್ಭಿಣಿಯಾಗಿರುವುದು ಈಗ ಗೊತ್ತಾಗಿದೆ. ಆಕೆಯನ್ನು ಸರಿಯಾಗಿ ಗಮನಿಸದೆ, ಆಕೆ ಗರ್ಭಿಣಿಯಾಗಿದ್ದರು ಆ ಬಗ್ಗೆ ತಿಳಿದುಕೊಳ್ಳದ ವಾರ್ಡನ್‌ನನ್ನು ಅಮಾನತು ಮಾಡಲಾಗಿದೆ.

ಇತ್ತೀಚೆಗೆ, ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತನ್ನ ತಾಯಿಯೊಂದಿಗೆ ವಿದ್ಯಾರ್ಥಿನಿ ಆಸ್ಪತ್ರೆಗೆ ಹೋದಾಗ, ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಆಕೆಗೆ ಪರಿಚಿತನಿದ್ದ ಯುವಕನೇ ಆಕೆ ಗರ್ಭಿಣಿಯಾಗಲು ಕಾರಣವೆಂದು ಹೇಳಲಾಗಿದೆ.

Advertisements

ಬಾಲಕಿಯ ಚಲನವಲನವನ್ನು ಗಮನಿಸದೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಹಾಸ್ಟೆಲ್ ವಾರ್ಡನ್‌ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಸಿಇಒ ಜಿ ಪ್ರಭು ಆದೇಶ ಹೊರಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X