ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.
(ರೈಲು ಸಂಖ್ಯೆ-06577/06578) ಎಸ್ಎಂವಿಟಿ ಬೆಂಗಳೂರು-ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು ನಡುವೆ ವಿಶೇಷ ಎಕ್ಸ್ ಪ್ರೆಸ್ (ಟಿಒಡಿ) ಒಂದು ಟ್ರಿಪ್ ಸಂಚರಿಸಲಿದೆ.
(ರೈಲು ಸಂಖ್ಯೆ-06577) ಎಸ್ಎಂವಿಟಿ ಬೆಂಗಳೂರು-ತಿರುಚಿರಾಪಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಜ.12 ರಂದು ಮಧ್ಯಾಹ್ನ 2:30 ಗಂಟೆಗೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಅದೇ ದಿನ ರಾತ್ರಿ 11.30 ಗಂಟೆಗೆ ತಿರುಚ್ಚಿರಾಪಳ್ಳಿ ನಿಲ್ದಾಣವನ್ನು ತಲುಪಲಿದೆ.
ಈ ರೈಲು ಬಂಗಾರಪೇಟೆ, ಸೇಲಂ, ನಮಕ್ಕಲ್, ಕರೂರ್ ಮತ್ತು ತಿರುಚಿರಾಪಳ್ಳಿ ಕೋಟೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಇದೆ ರೈಲು (06578 ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು) ಪುನಃ ಜನವರಿ 13ರಂದು ತಿರುಚ್ಚಿರಾಪಳ್ಳಿ ನಿಲ್ದಾಣದಿಂದ ಬೆಳಗಿನ ಜಾವ 4.45 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 12 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.
ಈ ರೈಲು ಕರೂರ್, ನಮಕ್ಕಲ್, ಸೇಲಂ ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಈ ಸುದ್ದಿ ಓದಿದ್ದೀರಾ? ಜ.10ರಂದು 201 ಜನರಿಗೆ ಕೊರೋನಾ ದೃಢ: ಮೈಸೂರು ಜಿಲ್ಲೆಯಲ್ಲಿ ಓರ್ವ ಸಾವು
ಈ ರೈಲು ಎಸಿ ಟು ಟೈರ್ (2), ಎಸಿ ತ್ರಿ ಟೈರ್ (6), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (2) ಮತ್ತು ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ 20 ಬೋಗಿಗಳು ಒಳಗೊಂಡಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ವೆಬ್ಸೈಟ್ (https://enquiry.indianrail.gov.in) ಅಥವಾ 139ಗೆ ಡಯಲ್ ಮಾಡಿ ಅಥವಾ ತಮ್ಮ ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದೆ. ಹಾಗೂ ಎಸಿ ಬೋಗಿಗಳಲ್ಲಿ ಬೆಡ್ ಶೀಟು ಮತ್ತು ಹೊದಿಕೆಯ ಸೌಲಭ್ಯ ಒದಗಿಸಲಾಗುವುದಿಲ್ಲ ಎಂದಿದೆ.