ಗ್ಯಾರಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಗ್ಯಾರಂಟಿಗಳ ಜಾರಿಗೆ ಸಮಿತಿ ರಚನೆ ಬಗ್ಗೆ ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ” ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರಂಟಿ ಜಾರಿ ಸಮಿತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು” ಎಂದು ಆರೋಪಿಸಿದ್ದಾರೆ.
“ಗ್ಯಾರಂಟಿ ಜಾರಿಗೆ ಮುಖ್ಯಮಂತ್ರಿ ಆದಿಯಾಗಿ, 34 ಕ್ಯಾಬಿನೆಟ್ ಸಚಿವರು, ಆರ್ಥಿಕ, ರಾಜಕೀಯ, ಮಾಧ್ಯಮ ಸಲಹೆಗಾರರು, ಜಿಲ್ಲಾಡಳಿತಗಳು ಸೇರಿದಂತೆ ಇಡೀ ಆಡಳಿತ ಯಂತ್ರವೇ ಇರುವಾಗ ಪ್ರತ್ಯೇಕ ಸಮಿತಿಯ ಅಗತ್ಯ ಏನಿದೆ” ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚುನಾವಣೆಗಾಗಿ ಅಪೂರ್ಣಗೊಂಡ ರಾಮಮಂದಿರ ಉದ್ಘಾಟಿಸುತ್ತಿರುವ ಮೋದಿ: ಸಿಎಂ ಸಿದ್ದರಾಮಯ್ಯ
“ಸಂಪುಟ ದರ್ಜೆ ಸ್ಥಾನಮಾನದ ಅಧ್ಯಕ್ಷರು, ರಾಜ್ಯ ಸಚಿವ ಸ್ಥಾನಮಾನದ ಐವರು ಉಪಾಧ್ಯಕ್ಷರು ಸೇರಿದಂತೆ 31 ಸದಸ್ಯರ ಸಮಿತಿಯ ಸಂಬಳ ಸಾರಿಗೆ ಖರ್ಚಿನಿಂದ ರಾಜ್ಯ ಸರ್ಕಾರಕ್ಕೆ 16 ಕೋಟಿ ರೂಪಾಯಿ ಹೊರೆಯಾಗಲಿದೆ. ತಮ್ಮ ಪಕ್ಷದ ಅತೃಪ್ತ ಶಾಸಕರನ್ನ, ಪ್ರಮುಖ ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕೆಲಸಕ್ಕೆ ಬಳಸಿಕೊಳ್ಳಲು ರಾಜ್ಯದ ಸಾರ್ವಜನಿಕ ಹಣ ಏಕೆ ದುರ್ಬಳಕೆ ಮಾಡುತ್ತೀರಿ ಸಿಎಂ ಸಿದ್ದರಾಮಯ್ಯನವರೇ?” ಎಂದು ಕೇಳಿದ್ದಾರೆ.
“ಗ್ಯಾರಂಟಿ ಜಾರಿಯೇ ಹೊರೆಯಾಗಿ ಅಭಿವೃದ್ಧಿಗೆ ಹಣ ಇಲ್ಲದಿರುವಾಗ ಕಂಡ ಕಂಡವರಿಗೆ ಗೂಟದ ಕಾರು ಕರುಣಿಸಲು ರಾಜ್ಯದ ಖಜಾನೆ ಏನು ಕಾಂಗ್ರೆಸ್ ಪಕ್ಷದ ಆಸ್ತಿ ಎಂದುಕೊಂಡಿದ್ದೀರಾ? ಸಚಿವರು, ಆಡಳಿತ ಯಂತ್ರದ ಮೂಲಕ ಗ್ಯಾರಂಟಿ ಜಾರಿ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಸುಮ್ಮನೆ ರಾಜ್ಯದ ಬೊಕ್ಕಸವನ್ನ ಪೋಲು ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.
ಕೇವಲ ಒಂದು ವರ್ಗಕ್ಕೆ ಸೇರಿದ ಮಂದಿರ ಕಟ್ಟಲು ನೂರಾರು ಕೋಟಿ ದೇಶದ ಜನಸಾಮಾನ್ಯರ ಹಣ ಖರ್ಚು ಮಾಡಲು,,ಆ ಹಣ ನಿಮ್ಮ ಪಕ್ಷದವರು ಬೆವರು ಸುರಿಸಿ ದುಡಿದ ಹಣವೆ,,, ಪ್ರಶ್ನೆ ಮಾಡುವ ತಾಕತ್ತು ನಿಮಗಿದೋ