ಶ್ರೀರಾಮಚಂದ್ರನನ್ನು ರಾಜಕೀಯವಾಗಿ ಬಳಸಿಕೊಂಡಿರುವುದಕ್ಕೆ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿ ಮಾತನಾಡಿದರು.

“ನಾವೆಲ್ಲರೂ ಶ್ರೀರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ. ಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

“ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ” ಎಂದು ಹೇಳಿದರು.

ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ

“ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಲ್ಲಿಯೂ ಪೂಜೆ ನಡೆಯಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X