ಬೆಂಗಳೂರು | ಬೀದಿ ವ್ಯಾಪಾರಿಗಳಿಗೆ ಮಾರ್ಷಲ್‌ಗಳ ಕಿರುಕುಳ; ಆರೋಪ

Date:

Advertisements

ಜಯನಗರ ನಾಲ್ಕನೇ ಬ್ಲಾಕ್‌ ಬೀದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮಾರ್ಷಲ್‌ಗಳು ನೀಡುತ್ತಿರುವ ಕಿರುಕುಳ ತಡೆದು, ನಮ್ಮ ಜೀವನೋಪಾಯಕ್ಕೆ ರಕ್ಷಣೆ ನೀಡಬೇಕು ಎಂದು ಅಲ್ಲಿಯ ಬೀದಿ ವ್ಯಾಪಾರಿಗಳು‌ ಬೆಂಗಳೂರು ದಕ್ಷಿಣ ವಲಯ ಬಿಬಿಎಂಪಿ ಆಯುಕ್ತರಿಗೆ ಮನವಿ ಸಲ್ಲಿಸಿದರು.

“ನಮ್ಮ ಒಕ್ಕೂಟದ 27ನೇ ಕ್ರಾಸ್‌, 27ನೇ ಎ ಕ್ರಾಸ್, ಮುಖ್ಯರಸ್ತೆಯಲ್ಲಿ 65 ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದಾರೆ. ಹಾಗೆಯೇ 9ನೇ ಮುಖ್ಯರಸ್ತೆಯಲ್ಲಿ 30 ಮಂದಿ ವ್ಯಾಪಾರಿಗಳು ಹಾಗೂ 10ನೇ ಮುಖ್ಯರಸ್ತೆಯಲ್ಲಿ 12 ಮಂದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. 2023ರ ನವೆಂಬರ್ 7ರಿಂದ ಬಿಬಿಎಂಪಿ ಮಾರ್ಷಲ್‌ಗಳೆಂದು ಹೇಳಿಕೊಂಡು ಕೆಲವರು ಬಂದು, ಅಲ್ಲಿನ ವ್ಯಾಪಾರಿಗಳ ಜೀವನೋಪಾಯದ ಹಕ್ಕಿಗೆ ಅಡ್ಡಿ ಮಾಡುತ್ತಿದ್ದಾರೆ. ಅವರು ಯಾರೆಂದು ನಮಗೆ ಗೊತ್ತಿಲ್ಲ. ಅವರ ಬಳಿ ಯಾವ ಆದೇಶವು ಇಲ್ಲ” ಎಂದು ಬೀದಿ ವ್ಯಾಪಾರಿಗಳು‌ ಆರೋಪಿಸಿದ್ದಾರೆ.

“ನಮ್ಮಲ್ಲಿ ಎಲ್ಲರ ಬಳಿ ನಾವು ವ್ಯಾಪಾರ ಮಾಡುತ್ತಿರುವ ಬಗ್ಗೆ, ಸರ್ಕಾರ ಒಂದಲ್ಲ ಒಂದು ರೀತಿಯ ಗುರುತಿನ ಚೀಟಿ ಇದೆ. ಇನ್ನೂ ಕೆಲವರ ಬಳಿ ಬಿಬಿಎಂಪಿ 2000ನೇ ಇಸವಿಯಲ್ಲಿ ನೀಡಿದ ಪರವಾನಗಿ ಪ್ರತಿ ಇದೆ. ಇನ್ನು ಕೆಲವರ ಬಳಿ ಕೇಂದ್ರ ಸರ್ಕಾರ ಡಾ ಪಿಎಂ ಸ್ವಾನಿಧಿ ಯೋಜನೆಯಡಿ ಸಾಲ ಸಿಕ್ಕಿದೆ. ಕೆಲವರು 2017ರ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟಿತ್ತು. ಆದರೆ ಬಿಬಿಎಂಪಿ ಅವರ ಗುರುತಿನ ಚೀಟಿ ಕಲೆ ಹಾಕಿದೆ. ಅವರ ಅರ್ಜಿ ಸಂಖ್ಯೆ ಇದೆ. ಕೆಲವರಿಗೆ ಮಾತ್ರ 2017ರ ಸಮೀಕ್ಷೆಯಲ್ಲಿ ಕೈ ಬಿಡಲಾಯಿತು. ಆದರೆ ಅವರೂ ಕೂಡ ಗುರುತಿನ ಚೀಟಿಗಾಗಿ ಅರ್ಜಿ ಹಾಕಿದ್ದಾರೆ” ಎಂದರು.

Advertisements

“ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ ಕಾಯ್ದೆ 2014ರ ಕಲಂ 3(3) ಪುಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರನ್ನೂ ಎತ್ತಂಗಡಿ ಮಾಡುವಂತಿಲ್ಲ” ಎಂದು ತಿಳಿಸಿದ್ದಾರೆ.

“ಜಯನಗರ ನಾಲ್ಕನೇ ಕ್ರಾಸ್‌ನಲ್ಲಿ ವ್ಯಾಪಾರ ಮಾಡುತ್ತಿದ್ದ ಎಲ್ಲ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರೆಸುವಂತೆ ರಕ್ಷಣೆ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆಯಾಗದಂತೆ ಸೂಕ್ತ ಆದೇಶ ನೀಡಬೇಕು. ನಮಗೆ ಕಿರುಕುಳ ನೀಡುತ್ತಿರುವ ಮಾರ್ಷಲ್‌ಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂಗ್ರೆಸ್‌ನವರು ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ

“ಬೀದಿ ವ್ಯಾಪಾರಿಗಳ(ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ತರಬೇತಿ (ಕಾರ್ಯಾಗಾರ ) ನೀಡಬೇಕು. ಬೀದಿ ವ್ಯಾಪಾರಿಗಳ ಕಾನೂನು ಕಲಂ 3ರ ಪ್ರಕಾರ ತಕ್ಷಣ ಪಟ್ಟಣ ವ್ಯಾಪಾರ ಸಮಿತಿಯಡಿ ಸಮೀಕ್ಷೆ ನಡೆಸಬೇಕು. ಜಯನಗರ 4ನೇ ಬಡಾವಣೆ ಬೀದಿ ವ್ಯಾಪಾರಿಗಳ ಸಮಸ್ಯೆ ಪರಿಹಾರ ಮಾಡುವುದಕ್ಕಾಗಿ ಕೂಡಲೇ ಪಟ್ಟಣ ವ್ಯಾಪಾರ ಸಮಿತಿ ಸಭೆ ಕರೆಯುವಂತೆ ಆದೇಶಿಸಿ ಕೂಡಲೇ ನಮ್ಮ ಹಕ್ಕಿನ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X