ಲೋಕಸಭೆ | ಗುಂಡೂರಾವ್, ಕೃಷ್ಣಭೈರೇಗೌಡರಿಗೆ ರಾಜ್ಯದಲ್ಲೇ ಮುಂದುವರಿಯಲು ಹೈಕಮಾಂಡ್ ಸೂಚನೆ

Date:

Advertisements

ರಾಜ್ಯದಲ್ಲಿ ಹಿರಿಯ ಸಚಿವರನ್ನು ಲೋಕಸಭೆ ಚುನಾವಣೆಗೆ ಕಣಕ್ಕಿಳಿಸುವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿಭಿನ್ನ ನಿಲುವು ತಾಳಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.‌

ರಾಜ್ಯದಲ್ಲಿ ಪ್ರಮುಖ ಎಂಟು ಸಚಿವರನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಐಸಿಸಿಗೆ ಸರ್ವೆ ರಿಪೋರ್ಟ್ ಸಲ್ಲಿಸಿದ್ದರು. ಮೊನ್ನೆಯಷ್ಟೇ ರಾಜ್ಯಕ್ಕೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಈ ಬಗ್ಗೆ ಆಪ್ತವಾಗಿ ಚರ್ಚೆ ಕೂಡ ನಡೆಸಿದ್ದರು.

ಈ ನಿಟ್ಟಿನಲ್ಲಿ ಬಹುತೇಕ ಸಚಿವರು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಲೋಕಸಭೆ ಸ್ಪರ್ಧೆಗೆ ನಿರಾಸಕ್ತಿ ವ್ಯಕ್ತಪಡಿಸಿದ್ದರು. ‘ಪಕ್ಷ ಹೇಳಿದರೆ ಸ್ಫರ್ಧೆ ಮಾಡಬೇಕಾಗುತ್ತದೆ’ ಎಂದು ಸುರ್ಜೇವಾಲ ಅವರು ಸಚಿವರಿಗೆ ಸ್ಪಷ್ಟವಾಗಿ ಹೇಳಿ ಕಳಿಸಿದ್ದರು.

Advertisements

ಇದೀಗ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಹೈಕಮಾಂಡ್ ವಿಭಿನ್ನ ನಿಲುವನ್ನು ತಳೆದಿದ್ದು, ಸಚಿವರ ಲೋಕಸಭೆ ಸ್ಪರ್ಧೆಯ ವಿಚಾರವನ್ನು ಆಡಳಿತಾತ್ಮಕ ದೃಷ್ಟಿಯಿಂದ ಚರ್ಚೆ ನಡೆಸಿದೆ. ವಿಶೇಷವಾಗಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಹಾಗೂ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡರನ್ನ ರಾಜ್ಯ ರಾಜಕಾರಣದಲ್ಲೇ ಮುಂದುವರಿಸಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ರಾಜ್ಯದ ಆರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯವೈಖರಿ ಉತ್ತಮವಾಗಿದೆ. ಎರಡೂ ಕೂಡ ಮಹತ್ವದ ಇಲಾಖೆಗಳಾಗಿದ್ದು, ಇಬ್ಬರು ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭೆಗೆ ಕಣಕ್ಕಿಳಿಸಿ ಅನಗತ್ಯ ಗೊಂದಲ ಸೃಷ್ಟಿ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಕುರಿತಂತೆ ದೆಹಲಿಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಕೃಷ್ಣಬೈರೇಗೌಡರ ಜೊತೆ ಚರ್ಚೆ ನಡೆಸಿರುವ ಹೈಕಮಾಂಡ್ ನಾಯಕರು, ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವಂತೆ ಸಲಹೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬದುಕಿನಲ್ಲಿ ಬದಲಾವಣೆ ತರಲು ಯುವನಿಧಿ ಜಾರಿಗೆ ತಂದಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್

ಪ್ರಮುಖ ಖಾತೆ ಹೊಂದಿರುವ ಎಲ್ಲ ಸಚಿವರನ್ನ ಲೋಕಸಭೆಗೆ ಕಣಕ್ಕಿಳಿಸಿದರೆ ಆಡಳಿತಾತ್ಮಕವಾಗಿ ಸಮಸ್ಯೆಯಾಗಬಹುದು. ಆರು ತಿಂಗಳಿಗೆ ಸಚಿವರೆಲ್ಲ ಇಲಾಖೆ ಕಾರ್ಯ ಬಿಟ್ಟು ಚುನಾವಣೆಯಲ್ಲಿ ಧುಮುಕಿದರೆ ಜನರು ಸರ್ಕಾರದ ಬಗ್ಗೆ ಬೇರೆ ರೀತಿಯ ವ್ಯಾಖ್ಯಾನ ಮಾಡಬಹುದು. ಅಲ್ಲದೇ ಕೋವಿಡ್ ಉಲ್ಬಣಗೊಂಡರೆ, ಪ್ರತಿಪಕ್ಷಗಳಿಗೆ ಆಹಾರವಾಗಬೇಕಾಗುತ್ತದೆ. ಹೀಗಾಗಿ ಜವಾಬ್ದಾರಿಯುತವಾಗಿ ಇಲಾಖೆ ಆಡಳಿತದ ಕಡೆ ಹೆಚ್ಚು ಗಮನ ಹರಿಸುವುದರೊಂದಿಗೆ, ಚುನಾವಣೆಗೆ ಸಹಾಕರ ನೀಡುವಂತೆ ಗುಂಡೂರಾವ್, ಹಾಗೂ ಕೃಷ್ಣಬೈರೇಗೌಡರಿಗೆ ಎಐಸಿಸಿ ನಾಯಕರು ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಲೋಕಸಭೆಗೆ ಕಣಕ್ಕಿಳಿಸುವ ಎಂಟು ಸಚಿವರ ಪಟ್ಟಿಯಿಂದ ಇಬ್ಬರು ಪ್ರಮುಖ ಖಾತೆಯ ಸಚಿವರನ್ನ ಕೈಬಿಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ತುಮಕೂರು ಕ್ಷೇತ್ರದಲ್ಲೂ ಕೆ.ಎನ್ ರಾಜಣ್ಣ ಕಣಕ್ಕಿಳಿಸುವ ಬದಲು ಮುದ್ದಹನುಮೇಗೌಡರನ್ನ ಪಕ್ಷಕ್ಕೆ ಸೇರಿಸಿಕೊಂಡು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X