ಸಂಕ್ರಾಂತಿ ಹಬ್ಬ | ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ ಕೆಎಸ್‌ಆರ್‌ಟಿಸಿ: ಖಾಸಗಿ ಬಸ್ ದರ ದುಪ್ಪಟ್ಟು

Date:

Advertisements

ಸಂಕ್ರಾಂತಿ ಹಬ್ಬದ ಹಿನ್ನೆಲೆ, ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವ ಜನರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 400 ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ.

ಹಬ್ಬದ ಹಿನ್ನೆಲೆ, ಸಂಭ್ರಮಾಚರಣೆ ಮಾಡಲು ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಜನ ಕಾಯುತ್ತಿದ್ದಾರೆ. ಅಲ್ಲದೇ ಕೆಲವು ಊರುಗಳಿಗೆ ತೆರಳುವ ಬಸ್‌ಗಳು ಕೂಡ ತುಂಬಿದ್ದು, ಜನರು ಆರಾಮವಾಗಿ ಪ್ರಯಾಣ ಬೆಳೆಸಲು ತೊಂದರೆ ಉಂಟಾಗಿದೆ.

ಕೆಎಸ್‌ಆರ್‌ಟಿಸಿ ಶಿವಮೊಗ್ಗ, ಬೆಂಗಳೂರು, ಉಡುಪಿ, ಬಳ್ಳಾರಿ, ಬೆಳಗಾವಿ ಕಡೆಗೆ ಹೆಚ್ಚಿನ ಜನ ಪ್ರಯಾಣಿಸುತ್ತಿದ್ದು, ಬಸ್‌ ವ್ಯವಸ್ಥೆ ಮಾಡಲಾಗಿದೆ.

Advertisements

ಖಾಸಗಿ ಬಸ್‌ಗಳ ದುಪ್ಪಟ್ಟು ದರ

ಹಬ್ಬ-ಹರಿದಿನ ಹಾಗೂ ರಜಾ ದಿನಗಳನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ಗಳು ದುಪ್ಪಟ್ಟು ದರ ನಿಗದಿ ಮಾಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ.

ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಜನವರಿ 15ರಂದು ರಜೆ ಇದೆ. ಜನವರಿ 14 ರಂದು ರವಿವಾರ ರಜೆಯಿದೆ. ಇನ್ನು ಜನವರಿ 13ರಂದು ತಾರೀಕು ಎರಡನೇ ಶನಿವಾರದ ಹಿನ್ನೆಲೆ ರಜೆಯಿದೆ. ಮೂರು ದಿನ ರಜೆ ಸಿಕ್ಕ ಹಿನ್ನೆಲೆ, ಜನರು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ.

ಆದರೆ, ಖಾಸಗಿ ಬಸ್‌ಗಳ ದರ ದುಪ್ಪಟ್ಟಿದ್ದು, ಇದರಿಂದ ಜನರು ಪರದಾಡುವಂತಾಗಿದೆ. ಸಾಮಾನ್ಯ ದಿನಗಳಲ್ಲಿ ₹400 ರಿಂದ ₹700 ವರೆಗೂ ಇರುವ ಖಾಸಗಿ ಬಸ್‌ ಟಿಕೆಟ್‌ ದರ ಹಬ್ಬ ಹರಿದಿನ ಅಥವಾ ರಜಾದಿನ ಬಂದರೆ ₹1500 ರಿಂದ ₹3000ವರೆಗೂ ದರ ಇದೆ.

ಈ ಸುದ್ದಿ ಓದಿದ್ದೀರಾ? ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕಿ ಪ್ರಭಾ ಅತ್ರೆ ನಿಧನ

ಬೆಂಗಳೂರು-ಶಿವಮೊಗ್ಗ ಖಾಸಗಿ ಬಸ್ ದರ ₹1,000-₹1,250 ಇದೆ. ಬೆಂಗಳೂರು-ಹುಬ್ಬಳಿ ₹1,700-₹2,500, ಬೆಂಗಳೂರು-ಮಂಗಳೂರು ₹1,300-₹2,000, ಬೆಂಗಳೂರು-ಕಲಬುರುಗಿ ₹1,600-₹2200, ಬೆಂಗಳೂರು-ಮಡಿಕೇರಿ ₹1,150-₹1,600, ಬೆಂಗಳೂರು-ಧಾರವಾಡ ₹1,200-₹1,550, ಬೆಂಗಳೂರು-ಬೆಳಗಾವಿ ₹1,300-₹1,800, ಬೆಂಗಳೂರು–ಚಿಕ್ಕಮಗಳೂರು ₹1,100-₹1,300, ಬೆಂಗಳೂರು–ಬೀದರ್ ₹1,600-₹2,000 ದರ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X