ರಾಮಮಂದಿರಕ್ಕೆ ಮೊದಲು ದಲಿತ ಅರ್ಚಕರನ್ನು ನೇಮಿಸಿ: ಸಚಿವ ಕೆ ಎನ್ ರಾಜಣ್ಣ

Date:

Advertisements

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಇನ್ನೇನು ಕೆಲವೇ ದಿನಗಳು ಉಳಿದಿದೆ. ಇದರ ಬೆನ್ನಲ್ಲೇ, “ರಾಮಮಂದಿರಕ್ಕೆ ಮೊದಲು ದಲಿತರನ್ನು ಬಿಟ್ಟುಕೊಂಡು, ದಲಿತ ಅರ್ಚಕರನ್ನು ನೇಮಿಸಿ” ಎಂದು ಸಹಕಾರ ಸಚಿವ ರಾಜಣ್ಣ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿಂದು ಹೈಕಮಾಂಡ್ ನಾಯಕರ ಭೇಟಿಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ, ‘ರಾಮಮಂದಿರ ಲೋಕಾರ್ಪಣೆಯಾದ ಮೇಲೆ ರಾಮಮಂದಿರಕ್ಕೆ ಹೋಗುತ್ತೇವೆ’ ಎಂದು ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಬಿಜೆಪಿಗರು ಹಿಂದೂಗಳನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ, ಜಾಗೀರು ಕೊಡಲಾಗಿದೆಯಾ” ಎಂದು ಪ್ರಶ್ನಿಸಿದ್ದಾರೆ.

“ವೋಟಿಗಾಗಿ ಪದೇಪದೆ ಹಿಂದೂ ಹಿಂದೂ ಎಂದು ಬಿಜೆಪಿ ಜಪ ಮಾಡುತ್ತಿದೆ. ಡಾ.ಬಿ.ಆರ್​ ಅಂಬೇಡ್ಕರ್ ಅವರು ಹಿಂದೂವಾಗಿ ಸಾಯುವುದಿಲ್ಲ ಎಂದಿದ್ದೇಕೆ? ಹಿಂದೂಗಳು ತಮ್ಮ ಸ್ವಾರ್ಥಕ್ಕೆ ಎಲ್ಲ ಬಳಕೆ ಮಾಡಿಕೊಳ್ಳುತ್ತಾರೆ ಎಂದು ಈ ರೀತಿ ತಿಳಿಸಿದ್ದರು. ರಾಮಮಂದಿರಕ್ಕೆ ಮೊದಲು ದಲಿತರನ್ನು ಬಿಡಿ, ಅಲ್ಲಿ ಒಬ್ಬ ದಲಿತ ಅರ್ಚಕನನ್ನು ನೇಮಿಸಲು ಹೇಳಿ. ದಲಿತರು ಹಿಂದೂಗಳಿಗೆ ಏನು ಮಾಡಿದ್ದಾರೆ” ಎಂದು ಪ್ರಶ್ನೆ ಮಾಡಿದರು.

Advertisements

ಇದನ್ನು ಓದಿದ್ದೀರಾ? ಸೋಷಿಯಲ್ ಮೀಡಿಯಾದಲ್ಲಿ ಸಿಎಂ, ಸಿಎಂ ಪತ್ನಿಯ ಅವಾಚ್ಯ ನಿಂದನೆ: ಎಫ್‌ಐಆರ್ ದಾಖಲು

ಇದೇ ವೇಳೆ, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ನಾನು, ಹೆಚ್​.ಸಿ ಮಹದೇವಪ್ಪ, ಈಶ್ವರ್ ಖಂಡ್ರೆ ಸೇರಿ ಐವರು ಸಚಿವರು ಸೇರಿ ಭೇಟಿಯಾಗಿದ್ದೇವೆ. ಲೋಕಸಭಾ ಎಲೆಕ್ಷನ್​ ಕುರಿತು ನಮ್ಮಲ್ಲಿ ಉತ್ಸಾಹ ಇನ್ನಷ್ಟು ಇಮ್ಮಡಿಗೊಂಡಿದ್ದು ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲಬೇಕಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X