ದಕ್ಷಿಣ ಕನ್ನಡ | ಕೋಳಿ ಫಾರಂ ಕಟ್ಟಡ ಕುಸಿತ; 5,000ಕ್ಕೂ ಅಧಿಕ ಕೋಳಿಗಳು ಸಾವು

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕೊಳ್ನಾಡು ಗ್ರಾಮದ ದೇವಸ್ಯದಲ್ಲಿ ಕೋಳಿ ಫಾರಂ ಕಟ್ಟಡ ದಿಢೀರ್ ಕುಸಿದಿದ್ದು, 5,000ಕ್ಕೂ ಅಧಿಕ ಕೋಳಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಇದರಿಂದ ₹6 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಿದ್ದಾರೆ.

ಯಜ್ಞನಾಥ ಶೆಟ್ಟಿ ಮಾಲೀಕತ್ವದ ಕೋಳಿ ಫಾರಂ ಕಟ್ಟಡ ಏಕಾಏಕಿ ಕುಸಿದು ಬಿದ್ದಿದ್ದು, ಕಟ್ಟಡ ಕುಸಿದ ಶಬ್ದ ಕೇಳಿಸಿಕೊಂಡ ಮಾಲೀಕರು ಮತ್ತು ಸ್ಥಳೀಯರು ಸ್ಥಳಕ್ಕೆ ಬರುವಷ್ಟರಲ್ಲಿ ಐದು ಸಾವಿರಕ್ಕೂ ಅಧಿಕ ಕೋಳಿಗಳು ಮೃತಪಟ್ಟಿದ್ದವು. ಕೋಳಿಫಾರಂ ಕಟ್ಟಡ ದಿಢೀರನೆ ಕುಸಿದು ಬಿದ್ದ ಘಟನೆಯಿಂದ ಮಾಲೀಕರು ಆಘಾತಗೊಂಡಿದ್ದಾರೆ.

ತಾಲೂಕು ಪಂಚಾಯತ್‌ ಮಾಜಿ ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಕೊಳ್ನಾಡು ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಅಸ್ಮಾ ಹಸೈನಾರ್, ಮಾಜಿ ಸದಸ್ಯ ಯೂಸುಫ್ ತಾಳಿತ್ತನೂಜಿ, ಸಾಮಾಜಿಕ ಕಾರ್ಯಕರ್ತ ಹಸೈನಾರ್ ಸೇರಿದಂತೆ ಹಲವು ಮಂದಿ ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದ್ದಾರೆ. ಒಮ್ಮಿಂದೊಮ್ಮೆಲೆ ಕಟ್ಟಡ ಕುಸಿದು ಬೀಳಲು ಕಾರಣವೇನೆಂದು ತಿಳಿದುಬಂದಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಪರೀಕ್ಷಾ ಕೇಂದ್ರಿತ ಶಿಕ್ಷಣ ವ್ಯವಸ್ಥೆ ತೊಲಗಲಿ: ಪರಿಸರವಾದಿ ಸಿ ಯತಿರಾಜು

“ಸುಮಾರು ಎರಡು ಕಿ.ಮೀ ದೂರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದೆವು. ಕೋಳಿ ಫಾರಂ ಕುಸಿದ ಸುದ್ದಿ ಹರಡುತ್ತಿದ್ದಂತೆ ನಾನೂ ಅಲ್ಲಿಗೆ ಧಾವಿಸಿದರೆ, ಹೆಂಚಿನ ಮಾಡು ಸಹಿತ ಕಟ್ಟಡ ನೆಲಕ್ಕುರುಳಿತ್ತು. ಅಷ್ಟೊಂದು ಕೋಳಿಗಳು ಸತ್ತು ಬಿದ್ದದ್ದನ್ನು ಕಂಡು ಮನ‌ ಕಲಕಿತು” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X