ಕೆಎಸ್‌ಆರ್‌ಟಿಸಿಗೆ ‘ನಿಷ್ಫಲ ಶುಲ್ಕ’ ಅಡಿ ಪರಿಹಾರ ಪಡೆವ ಅರ್ಹತೆ ಇಲ್ಲ: ಹೈಕೋರ್ಟ್

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಸಾರಿಗೆ ಸಂಸ್ಥೆಗಳ ಬಸ್‌ಗಳು ಅಪಘಾತಕ್ಕೀಡಾಗಿ, ದುರಸ್ತೆಗೆ ಕಳಿಸಿದರೆ, ಅವುಗಳ ಆದಾಯ ನಷ್ಟಕ್ಕೆ ‘ಐಡಲ್ ಶುಲ್ಕ’ (ನಿಷ್ಫಲ ಶುಲ್ಕ) ಅಡಿಯಲ್ಲಿ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ. ಅಂತಹ ಪರಿಹಾರ ಪಡೆಯಲು ಸಾರಿಗೆ ಸಂಸ್ಥೆಗಳು ಅರ್ಹವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಆದಾಯ ನಷ್ಟಕ್ಕೆ ಪರಿಹಾರ ನೀಡಲು ನ್ಯಾಯಮಂಡಳಿ ನೀಡಿದ ಆದೇಶವನ್ನು ಪ್ರಶ್ನಿಸಿ ‘ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್’ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್‌ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ಕುಮಾರ್ ವಿಚಾರಣೆ ನಡೆಸಿದ್ದಾರೆ. “ಬಸ್ ಅಪಘಾತಕ್ಕೀಡಾಗಿ ಹಾನಿಗೊಳಗಾದರೆ ಮತ್ತು ದುರಸ್ತಿಗಾಗಿ ಗ್ಯಾರೇಜ್‌ನಲ್ಲಿ ಇರಿಸಿದರೆ, ಸಾರಿಗೆ ಸಂಸ್ಥೆಗಳು ಕಾನೂನಿನ ಪ್ರಕಾರ ಹಾನಿಗೆ ಸಂಬಂಧಿದಂತೆ ಪರಿಹಾರ ಪಡೆಯಬಹುದು. ಆದರೆ, ಆದಾಯದ ನಷ್ಟಕ್ಕೆ ಪರಿಹಾರ ಪಡೆಯಲು ಅರ್ಹರಲ್ಲ” ಎಂದು ಹೇಳಿದ್ದಾರೆ.

ಕೆಎಸ್‌ಆರ್‌ಟಿಸಿ ಪರವಾಗಿ ವಾದ ಮಂಡಿಸಿದ ವಕೀಲರು, “ಅಪಘಾತಗಳ ಕಾರಣ, ಬಸ್‌ಗಳನ್ನು ದುರಸ್ತಿಗಾಗಿ ವರ್ಕ್‌ಶಾಪ್‌ಗಳಿಗೆ ಕರೆದೊಯ್ಯಲಾಗುತ್ತದೆ. ದುರಸ್ತಿ ಅವಧಿಯಲ್ಲಿ ಅವು ಸಂಚರಿಸಲು ಸಾಧ್ಯವಿಲ್ಲ. ಆದ್ದರಿಂದ, ಕೆಎಸ್‌ಆರ್‌ಟಿಸಿಯು ‘ಆದಾಯ ನಷ್ಟ’ ಅಡಿಯಲ್ಲಿ ಪರಿಹಾರ ಪಡೆಯಲು ಅರ್ಹವಾಗಿದೆ” ಎಂದು ಹೇಳಿದರು.

Advertisements

ವಿಮಾ ಕಂಪನಿಯ ಪರ ವಾದ ಮಂಡಿಸಿದ ವಕೀಲರು, “ನಿಗದಿತ ಮಾರ್ಗಗಳಲ್ಲಿ ಇತರ ಬಸ್‌ಗಳನ್ನು ನಿಯೋಜಿಸಿರುವುದರಿಂದ ಕೆಎಸ್‌ಆರ್‌ಟಿಸಿ ಆದಾಯ ಕಳೆದುಕೊಳ್ಳುವುದಿಲ್ಲ. ಹೀಗಾಗಿ, ಕೆಎಸ್‌ಆರ್‌ಟಿಸಿ ‘ಐಡಲ್ ಚಾರ್ಜ್‌ಗಳು/ಆದಾಯ ನಷ್ಟ’ ಅಡಿಯಲ್ಲಿ ಪರಿಹಾರ ಪಡೆಯಲು ಅರ್ಹತೆ ಹೊಂದಿಲ್ಲ” ಎಂದು ವಿವರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X