ಬಾಗಲಕೋಟೆ | ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ: ಸಿಎಂ ಸಿದ್ದರಾಮಯ್ಯ

Date:

Advertisements

ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಬಹು ಸಂಖ್ಯಾತರನ್ನು  ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಢ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು  ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ, ಇವರು ಸ್ಟ್ರಾಂಗ್ ಇದ್ದಾರೆ. ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ಕರೆಕೊಟ್ಟರು.

ಈ ಕಾರ್ಯಕ್ರಮದಲ್ಲಿ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಡಾ. ಮಾತೆ ಗಂಗಾದೇವಿ, ಉಪಾಧ್ಯಕ್ಷ ಮಹದೇಶ್ವರ ಸ್ವಾಮೀಜಿ, ಬಸವಯೋಗಿ ಸ್ವಾಮೀಜಿ, ಶಾಸಕ ವಿಜಯಾನಂದ ಕಾಶಪ್ಪನವರ್, ಸಚಿವ ಬೈರತಿ ಸುರೇಶ್, ಶಾಸಕ ಎಂ.ನರೇಂದ್ರ ಸ್ವಾಮಿ, ಎಚ್.ವೈ. ಮೇಠಿ, ರಾಘವೇಂದ್ರ ಹಿಟ್ನಾಳ್ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X