ಲೋಕಸಭೆ ಚುನಾವಣೆ | ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡ ಬರದವರು ಅಸಮರ್ಥ ಸಚಿವರಾಗುತ್ತಾರೆ: ಬಿ ನಾಗೇಂದ್ರ

Date:

Advertisements

ಜವಾಬ್ದಾರಿ ಕೊಟ್ಟ ಲೋಕಸಭೆ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರದೇ ಇದ್ದಲ್ಲಿ ಅವರು ಅಸಮರ್ಥ ಸಚಿವರಾಗುತ್ತಾರೆ. ಡಾ. ಜಿ ಪರಮೇಶ್ವರ್ ಹೇಳಿದ್ದು ನಿಜ, ಎಲ್ಲರ ಕಾರ್ಯಕ್ಷಮತೆಯನ್ನು ಹೈಕಮಾಂಡ್‌ ಗಮನಿಸುತ್ತದೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.

ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮೀಟಿಂಗ್‌ನಲ್ಲಿ ಸಚಿವರಿಗೆ ಎಚ್ಚರಿಕೆ ಕೊಡಲಾಗಿದೆ. ಮಂತ್ರಿಗಿರಿ ಕೊಟ್ಟು ಆಯಾ ಕ್ಷೇತ್ರದ ಲೋಕಸಭೆ ಅಭ್ಯರ್ಥಿ ಗೆಲ್ಲಿಸಿಕೊಂಡ ಬರದೇ ಇದ್ದರೆ ಹೇಗೆ? ಗೆಲ್ಲಿಸಿಕೊಂಡು ಬರದೇ ಹೋದರೆ ಕೊಟ್ಟ ಕುದುರೆ ಏರದವನು ಶೂರನು ಅಲ್ಲ ವೀರನು ಅಲ್ಲ ಎನ್ನುವಂತಾಗುತ್ತದೆ” ಎಂದರು

ಗೆಲ್ಲಿಸಿಕೊಂಡು ಬರದೇ ಇದ್ದರೆ ಸಚಿವ ಸ್ಥಾನ ಕಳೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದಾಗ, “ಸಮರ್ಥರಲ್ಲ ಅವರು ಅಸಮರ್ಥರು ಅಷ್ಟೇ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಸಚಿವರ ಜೊತೆಗೆ ಆಯಾ ಶಾಸಕರ ಜವಾಬ್ದಾರಿಯೂ ಆಗಿರುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಸಚಿವರಾದ ಮೇಲೆ ಬಳ್ಳಾರಿ ಗೆಲ್ಲಿಸಿಕೊಂಡು ಬರುವ ಸಂಕಲ್ಪ ತೊಟ್ಟಿದ್ದೇನೆ. ಸಚಿವ ಹೇಳಿದ ಅಭ್ಯರ್ಥಿ ಫೈನಲ್ ಅಲ್ಲ, ಸ್ಥಳೀಯ ಶಾಸಕರ ಅಭಿಪ್ರಾಯ ಕಡ್ಡಾಯವಾಗಿದೆ. ನಾವು ಬಳ್ಳಾರಿ ಗೆದ್ದು ಸೋನಿಯಾ ಗಾಂಧಿಯವರಿಗೆ ಉಡುಗೊರೆಯಾಗಿ ಕೊಡುತ್ತೇವೆ ಎಂದು ಹೇಳಿದರು.

ಬಳ್ಳಾರಿಯಿಂದ ಐದು ಜನ ಟಿಕೆಟ್ ಆಕಾಂಕ್ಷಿ ಇದ್ದಾರೆ. ವೆಂಕಟೇಶ್ ಪ್ರಸಾದ್, ಮುರುಳಿ ಕೃಷ್ಣ, ಉಗ್ರಪ್ಪ, ಗುಜ್ಜಲ್ ನಾಗರಾಜ ಅರ್ಜಿ ಹಾಕಿದ್ದಾರೆ. ಆದರೆ, ನಾವು ಒಮ್ಮತ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ನಾಗೇಂದ್ರ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X