ತುಮಕೂರು | ಗುಂಪುಗಾರಿಕೆ ಸೃಷ್ಟಿಸುವ ಮುದ್ದಹನುಮೇಗೌಡರಿಗೆ ಪಕ್ಷನಿಷ್ಠೆಯಿಲ್ಲ: ನಾರಾಯಣಗೌಡ

Date:

Advertisements

ಮುದ್ದಹನುಮೇಗೌಡರು ಅಲೆಮಾರಿ ರಾಜಕಾರಣಿ. ಗುಂಪುಗಾರಿಕೆ ಸೃಷ್ಟಿಸುವ ಅವರಿಗೆ ಪಕ್ಷ ನಿಷ್ಠೆಯಿಲ್ಲ‌ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಸದಸ್ಯ ಎಚ್‌ಬಿಎಸ್ ನಾರಾಯಣಗೌಡ ಆರೋಪಿಸಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಮುದ್ದಹನುಮೇಗೌಡರು ಕೇವಲ ಕಾಂಗ್ರೆಸ್ ಪಕ್ಷದ ಟಿಕೆಟ್ ಬಯಸಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಮಾಜಿ ಸಂಸದರ ನಿಲುವು‌ ಖಂಡನೀಯ” ಎಂದರು.

Advertisements

“ಎಸ್‌ಪಿಎಂ ಅವರು ಮೊದಲಿಗೆ ಜೆಡಿಎಸ್ ಪಕ್ಷ, ಆನಂತರ ಕಾಂಗ್ರೆಸ್, ಬಳಿಕ ಬಿಜೆಪಿ. ಈಗ ಮತ್ತೆ ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ಜೆಡಿಎಸ್ ಪಕ್ಷದಲ್ಲೇ ಅವರಿಗೆ ಸಿ ಫಾರಂ ನೀಡಿದ್ದರು. ಆ ನಂತರ ಕಾಂಗ್ರೆಸ್ ಪಕ್ಷ ಸೇರಿ ಸಂಸದರಾದರು. ಅವರಿಗೆ ಕಾಂಗ್ರೆಸ್ ಪಕ್ಷದ ನಿಷ್ಠೆ ಇದ್ದಿದ್ದರೆ ಸಂಸದರಾಗಿ ಅಧಿಕಾರ ಹೊಂದಿದವರು ಪಕ್ಷವನ್ನು ಬಿಟ್ಟು ಬಿಜೆಪಿಗೆ ಹೋಗುತ್ತಿರಲಿಲ್ಲ. ಬಿಜೆಪಿಗೆ ಸೇರ್ಪಡೆಯಾದ ಅವರು ಮತ್ತೆ ಲೋಕಸಭಾ ಚುಣಾವಣೆಗೆ ಅಭ್ಯರ್ಥಿ ಆಕಾಂಕ್ಷಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಇವರೊಬ್ಬ ಸ್ಪಷ್ಟ ನಿಲುವಿಲ್ಲದ ರಾಜಕಾರಣಿ” ಎಂದು ವ್ಯಂಗ್ಯವಾಡಿದರು.

“ಜಿಲ್ಲೆಯಲ್ಲಿ ಅನೇಕ ಹಿರಿಯ ನಾಯಕರಿದ್ದಾರೆ. ಅದರಲ್ಲಿ ಡಾ.ಜಿ ಪರಮೇಶ್ವರ್ ಕೂಡ ಒಬ್ಬರು. ಜಿಲ್ಲೆಯಲ್ಲಿ ಅವರಿಗೆ ಹೆಸರಿದೆ. ನಾನೂ ಕೂಡ ಅವರ ಅಭಿಮಾನಿ. ಅವರನ್ನು ಚುನಾವಣೆ ಕಣಕ್ಕಿಳಿಸಿದರೂ ನಾವು ಗೆಲ್ಲಿಸುತ್ತೇವೆ ಅಥವಾ ಆರ್ ನಾರಾಯಣ್ ಅವರಂತಹ ಧೀಮಂತ ನಾಯಕರಿಗೆ ಲೋಕಸಭಾ ಅಭ್ಯರ್ಥಿಯನ್ನಾಗಿ ಜಿಲ್ಲೆಗೆ ಕಣಕ್ಕಿಳಿಸಲಿ” ಎಂದು ಬೆಂಬಲ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅನಂತ ಕುಮಾರ್ ಹೇಳಿಕೆಯಿಂದ ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ: ಕಾಂಗ್ರೆಸ್‌ ಮುಖಂಡ ದೀಪಕ್

“ಹಿಂದೆ ಕಾಂಗ್ರೆಸ್ಸಿನಲ್ಲಿದ್ದಾಗ ನೋಡಿದರೆ ಪಕ್ಷ ಸಂಘಟನೆಗೆ ಬದಲು ಕಾರ್ಯಕರ್ತರಲ್ಲೇ ಗುಂಪುಗಾರಿಕೆಗಳನ್ನು ಸೃಷ್ಟಿಸುತ್ತಿದ್ದರು. ಇದರಿಂದ ಪಕ್ಷದ ಬಲವರ್ಧನೆ ಹೇಗೆ ಸಾಧ್ಯವಾಗುತ್ತದೆ. ಈಗ ಪಕ್ಷಕ್ಕೆ ಬಂದರೂ ಗುಂಪುಗಾರಿಕೆ ಮಾಡುವುದರಲ್ಲಿ ಅನುಮಾನವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X