ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು: ಸಿಎಂ ಸಿದ್ದರಾಮಯ್ಯ

Date:

Advertisements

“ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904 ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕ್ರಮ ವಹಿಸಬೇಕು ಎಂದರು. 96-97 ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಎಸ್.ಟಿಗೆ ಸೇರಿಸಲು ಪ್ರಯತ್ನಿಸಿದ್ದರು ಎಂದು ಮರೆಯಬಾರದು” ಎಂದು ಇದೇ ವೇಳೆ ಸಿಎಂ ನೆನಪಿಸಿಕೊಂಡರು.

Advertisements

“ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲು ಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು” ಎಂದ ಸಿಎಂ “ಈ ಸಾಲಿನಲ್ಲಿ ಅಂಬಿಗರ ಚೌಡಯ್ಯ ಮೊದಲನೇ ಸಾಲಿನಲ್ಲಿ ನಿಲ್ಲುತ್ತಾರೆ. ಅದಕ್ಕೆ ಬಸವಣ್ಣನವರು ಇವರಿಗೆ ನಿಜಶರಣ ಎಂದು ಕರೆದರು” ಎಂದು ಸಿಎಂ ವಿವರಿಸಿದರು.

“ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು. ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂಬ ಎರಡು ತತ್ವಗಳನ್ನು ನೀಡಿದ್ದಾರೆ. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೊಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ. ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು” ಎಂದರು.

“ಅಂಬಿಗರ ಚೌಡಯ್ಯನವರ ಹಾದಿಯಲ್ಲಿ ನಡೆಯುವುದು ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ. ಅವರ ವಿಚಾರಗಳನ್ನು ಜನರಿಗೆ ತಿಳಿಸಲು ಜಯಂತ್ಯುತ್ಸವವನ್ನು ಆಚರಿಸಲಾಗುತ್ತದೆ” ಎಂದರು.

ಇದನ್ನು ಓದಿದ್ದೀರಾ? ರಾಮಮಂದಿರ | ತಪ್ಪನ್ನು ನಾವು ತಪ್ಪು ಅಂತಾನೇ ಹೇಳುತ್ತೇವೆ, ಅದರಲ್ಲಿ ಮುಲಾಜಿಲ್ಲ: ಅವಿಮುಕ್ತೇಶ್ವರಾನಂದ ಸ್ವಾಮೀಜಿ

“ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ. ಹಿಂದುಳಿದ ಸಮಾಜದೊಂದಿಗೆ ಸದಾ ಇರುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಅಂಬಿಗರ ಚೌಡಯ್ಯನವರ ಬಗ್ಗೆ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪನವರ ಕವಿತೆಯನ್ನು ಸಿಎಂ ವಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X