ಗದಗ | ಹಾಸ್ಟೆಲ್‌ನ ಮೂರು ಕೊಠಡಿಯಲ್ಲಿ 89 ವಿದ್ಯಾರ್ಥಿನಿಯರು; ಅನಾರೋಗ್ಯ ಸಮಸ್ಯೆಗೆ ಬೇಸತ್ತ ಮಕ್ಕಳು

Date:

Advertisements

ಲಕ್ಷ್ಮೇಶ್ವರ ಪ್ರದೇಶದ ಬಡ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ಸರ್ಕಾರ ಪ್ರತ್ಯೇಕವಾಗಿ ಹಾಸ್ಟೆಲ್‌ಗಳನ್ನು ತೆರೆಯುತ್ತಾರೆ. ಈ ವಸತಿ ನಿಲಯಗಳನ್ನು ನಿರ್ವಹಿಸುವಲ್ಲಿ ಉದಾಸೀನ ತೋರುತ್ತಾರೆ. ಹೀಗೆ ಸರ್ಕಾರದ ನಿರ್ಲಕ್ಷಕ್ಕೆ ಒಳಗಾಗಿದೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ.

ಈ ವಿದ್ಯಾಲಯಕ್ಕೆ ಸ್ವಂತ ಕಟ್ಟಡವಿಲ್ಲ. ಸರ್ಕಾರಿ ಪ್ರಾಥಮಿಕ ಶಾಲೆಯ ಮೂರು ಕೊಠಡಿಗಳಲ್ಲಿ 89 ವಿದ್ಯಾರ್ಥಿನಿಯರು ಇದ್ದು, ಜೈಲಿನಲ್ಲಿರುವಂತೆ ಈ ಮಕ್ಕಳು ಇಕ್ಕಟ್ಟಾದ ಸ್ಥಳದಲ್ಲಿ ವಾಸಿಸುತ್ತಿದ್ದಾರೆ. ಆದರೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಶಿಕ್ಷಣಾದಿಕಾರಿಗಳು ಒಮ್ಮೆಯೂ ಇತ್ತ ಗಮನಹರಿಸಿಲ್ಲ.

ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳು ಇಲ್ಲದೇ ಮಕ್ಕಳು ದಿನ ನಿತ್ಯವು ನರಕಯಾತನೆ ಅನುಭವಿಸುತ್ತಿದ್ದಾರೆ. ವಿದ್ಯಾಲಯವು 2012ರಲ್ಲಿ ಸ್ವಂತ ಕಟ್ಟಡ ಇಲ್ಲದೇಸರ್ಕಾರಿ  ಪ್ರಾಥಮಿಕ ಶಾಲೆಯ ಕೊಠಡಿಗಳಲ್ಲಿಯೇ ಆರಂಭೀಸಲಾಗಿದೆ. ವಸತಿ ಶಾಲೆಯಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿನಿಯರು ಇದ್ದಾರೆ.

Advertisements

ಇಲ್ಲಿರುವ 89 ವಿದ್ಯಾರ್ಥಿನಿಯರಿಗೆ ಸರಿಯಾದ ಶೌಚಾಲಯ ಇಲ್ಲ, ಸ್ನಾನಗೃಹ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಇದೆ. ಆಟದ ಮೈದಾನವಿಲ್ಲ, ಸ್ವಂತ ಕಟ್ಟಡ ಇಲ್ಲದೇ ಮೂರೆ ಮೂರು ಕೊಠಡಿಗಳಲ್ಲಿ ವಿದ್ಯಾರ್ಥಿನಿಯರು ಇದ್ದಾರೆ.

ಅನಾರೋಗ್ಯದ ಸಮಸ್ಯೆ ಎದುರಿಸುತ್ತಿರುವ ಮಕ್ಕಳು

ಸರಕಾರಿ ಪ್ರಾಥಮಿಕ ಶಾಲೆಯ ಮೂರು ಕೊಠಡಿಗಳನ್ನು ಕಸ್ತೂರಿಬಾ ಗಾಂಧಿ ವಸತಿ ನಿಲಯಕ್ಕೆ ನೀಡಿದ್ದು, ಒಂದೊಂದು ಕೊಠಡಿಯಲ್ಲಿ ಮೂವತೈದರಿಂದ ನಲವತ್ತು ವಿದ್ಯಾರ್ಥಿನಿಯರನ್ನು ಕುರಿಹಿಂಡಿನ ಹಾಗೆ ಇರಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಓದಲು, ಬರೆದುಕೊಳ್ಳಲು ನಿತ್ಯವು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಜಾಗದ ಅಭಾವದಿಂದ ಒಬ್ಬರಿಗೊಬ್ಬರು ಹತ್ತಿಕೊಂಡು ಮಲಗುವಂತ ಪರಿಸ್ಥಿತಿ ಇದ್ದು, ಇದರಿಂದ ವಿದ್ಯಾರ್ಥಿನಿಯರಲ್ಲಿ ಚರ್ಮದ ಸಮಸ್ಯೆಗಳು, ತುರಿಕೆ, ಗುಳ್ಳೆ, ಡೆಂಗ್ಯೂ ಜ್ವರ ಕಂಡು ಬಂದಿದ್ದು ನಿತ್ಯವು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಳೆ ಬಂದರೆ ಕೊಠಡಿಗಳು ಸೋರುವುದರಿಂದ ಇದರಲ್ಲಿಯೇ ಇರಬೇಕಾದ ಅನಿವಾರ್ಯತೆ ಮಕ್ಕಳದ್ದಾಗಿದೆ.

ಹಗಲು ಕನ್ನಡ ಶಾಲೆಯ ಮೂರು ನಾಲ್ಕನೇ ತರಗತಿಯ ವರ್ಗಗಳು ನಡೆಯುತ್ತಿದ್ದು, ಅದರ ಅರ್ಧ ಭಾಗದಲ್ಲಿ ವಿದ್ಯಾರ್ಥಿನಿಯರಿಗೆ ವಸತಿ ಕಲ್ಲಿಸಲಾಗಿದೆ. ಇದರಿಂದ ವಸತಿ ನಿಲಯದ  ವಿದ್ಯಾರ್ಥಿನಿಯರಿಗೆ ಇನ್ನಷ್ಟು ಕಷ್ಟವಾಗಿದೆ. ಒಂದೇ ಕೊಠಡಿಯಲ್ಲಿ ಕಛೇರಿ ಹಾಗೂ ಅಡುಗೆ ಕೊಠಡಿ ಇದ್ದು, ವಾರ್ಡನ್ ಇದೇ ಕೊಠಡಿಯಲ್ಲಿ ವಾಸಮಾಡುತ್ತಿದ್ದಾರೆ.

ಶೌಚಾಲಯ, ಸ್ನಾನದ ಸಮಸ್ಯೆ

ಈ ಕಸ್ತೂರಬಾ ಗಾಂಧಿ ಬಾಲಿಕಾ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಇರುವುದು ಮೂರೇ ಶೌಚಾಲಯ, ಸ್ನಾನಗೃಹ. ಇದರಿಂದ ವಿದ್ಯಾರ್ಥಿನಿಯರು ಬೆಳೆಗ್ಗೆ ಬೇಗ ಎದ್ದರು ನಿತ್ಯ ಕರ್ಮಗಳು ತೆವಾಗುವುದರಿಂದ ಮಕ್ಕಳು ಶಾಲೆಗೆ ಪ್ರತೀ ನಿತ್ಯ ತಡವಾಗಿ ಹೋಗುತ್ತಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ

ಶುದ್ಧ ಕುಡಿಯುವ ನೀರಿನ ಘಟಕ ಇದ್ದು ಸುಮಾರು ಎಳೆಂಟ ತಿಂಗಳಿಂದ ಕೆಟ್ಟು ನಿಂತಿದೆ. ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಶುದ್ದ ನೀರು ಕುಡಿಯದೇ ಇರುವುದರಿಂದ ವಿದ್ಯಾರ್ಥಿನಿಯರಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿವೆ.

ಸೌಲಭ್ಯಗಳ ಕೊರತೆ

ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯದಲ್ಲಿ ಕಂಪ್ಯೂಟರ್‌ಗಳ ಕೊರತೆ ಇದೆ. ಇದರಿಂದ ವಿದ್ಯಾರ್ಥಿನಿಯರ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ. ಅಧಿಕಾರಿಗಳು ಭೇಟಿ ನೀಡಿದಾಗ ಕಂಪ್ಯೂಟರ್ ಕೊಡಿಸಿ ಎಂದು ಮಕ್ಕಳು ಕೇಳಿದ್ದಾರೆ ಇದಕ್ಕೆ ಅಧಿಕಾರಿಗಳು ಹಾರಿಕೆಯ ಉತ್ತರ ನೀಡುತ್ತಾರೆ. ಪ್ರವಾಸಕ್ಕೆ ಕರೆದುಕೊಂಡು ಹೋಗಿ ಎಂದು ಮಕ್ಕಳು ಕೇಳಿದ್ದಾರೆ ಈ ಯಾವುದೇ ಸೌಲಭ್ಯವಿಲ್ಲ ಎಂದು ಬೇಜವಬ್ದಾರಿಯ ಮಾತುಗಳನ್ನಾಡಿದ್ದಾರೆ ಎಂದು ಮಕ್ಕಳು ಆರೋಪಿಸುತ್ತಾರೆ.

ಈ ವಸತಿ ನಿಲಯದ ಮಹಿಳಾ ವಾರ್ಡನ್ ಗುತ್ತಿಗೆ ಆಧಾರದ ಮೇಲೆ ಸುಮಾರು ಹನ್ನೆರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದರು, ಕೇವಲ‌ ನಾಲ್ಕು ಸಾವಿರ ರೂ. ಸಂಬಳ ಕೊಡುತ್ತಿದ್ದಾರೆ. ಇವರಿಗೆ ಯಾವುದೇ ಇಫ್, ಪಿಎಫ್ ಸೌಲಭ್ಯಗಳಿಲ್ಲದೆ ಆರ್ಥಿಕ ಅಭದ್ರತೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಕುರಿತು ಈದಿನ.ಕಾಮ್ ನೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು, “ಸ್ವಂತ ಕಟ್ಟಡ ಇಲ್ಲದೆ ಇಕ್ಕಟ್ಟಾದ ಜಾಗದಲ್ಲಿ ಕಲಿತಿದ್ದಿವಿ, ಒಬ್ಬರಿಗೊಬ್ಬರು ಹತ್ತಿ ಮಲ್ಕೊಂತಿವಿ, ಇದರಿಂದ ಮೈಯ್ಯಾಗೆಲ್ಲ ಹುರುಕು, ತಿಂಡಿ ಬಿಡುತ್ತದೆ, ಜ್ವರ ಕಾಡುತ್ತಿವೆ. ನಮಗೆ ಸ್ವಂತ ಕಟ್ಟಡ ಆದರೆ, ಈ ಎಲ್ಲ ಸಮಸ್ಯೆ ಬಗಿಹರಿತ್ತವೆ,” ಎನ್ನುತ್ತಾರೆ.

ಪಾಲಕರಾದ ಸಕ್ಕೂಭಾಯಿ ಲಮಾಣಿ ಈ ದಿನ. ಕಾಮ್ ನೊಂದಿಗೆ ಮಾತನಾಡಿ, “ನಮ್ಮ ಮಕ್ಕಳಿಗೆ ಚೆನ್ನಾಗಿ ಶಿಕ್ಷಣ ಕೊಡುತ್ತಾರೆ, ಇಲ್ಲಿ ಅವರ ಆರೋಗ್ಯ ಚನ್ನಾಗಿ ಇರುತ್ತದೆ ಎಂದು ಇರಿಸಿದ್ದೀವಿ. ನಾವು ಕೆಲಸಕ್ಕಾಗಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗುತ್ತೇವೆ. ಆದರೆ, ಇಲ್ಲಿ ಅನಾರೋಗ್ಯದಿಂದ ನಮ್ಮ ಮಕ್ಕಳು ಪದೆ ಪದೇ ನಮಗೆ ಪೋನ್ ಮಾಡಿ ಸಮಸ್ಯೆ ಆಗುತ್ತಿದೆ ಎಂದು ಹೇಳುತ್ತಾರೆ. ಈ ರೀತಿ ಆದರೆ ನಮ್ಮ ಮಕ್ಕಳ ಆರೋಗ್ಯದ ಗತಿ ಏನಾಗುತ್ತದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ನಮ್ಮ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ,” ಎಂದು ಬೇಸರ ವ್ಯಕ್ತಪಡಿಸಿದರು.

ವಾರ್ಡನ್ ಎನ್.ಎಸ್. ಗೌಡರ್ ಮಾತನಾಡಿ,”ಕಟ್ಟಡ ನಿರ್ಮಾಣಕ್ಕೆ ಜಾಗ ಇದ್ದು, ಕಾಮಗಾರಿ ಆರಂಭಿಸಿಲ್ಲ. ಸ್ವಂತ ಕಟ್ಟಡ ಇಲ್ಲದೆ ಇಕ್ಕಟ್ಟಾದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಇದ್ದಾರೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ‌. ಒಂದೇ ಕೊಠಡಿಯಲ್ಲಿ ನಾನು ಇರೋದು, ಅಲ್ಲಿಯೇ ಅಡುಗೆ ಕೋಣೆ ಇದೆ. ಇಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಶೌಚಾಲಯ, ಸ್ನಾನಗೃಹಗಳ ಸಂಖ್ಯೆ ಹೆಚ್ಚುಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಇದೆ ಇದನ್ನು ಆದಷ್ಟು ಬೇಗ ಸರಿ ಪಡಿಸಬೇಕು. ಈ ಕುರಿತು ಅಧಿಕಾರಿಗಳಿಗೆ ಎಷ್ಟೋಸಲ ತಿಳಿಸಿದರೂ ಪ್ರಯೋಜನವಾಗಿಲ್ಲ.” ಎಂದು ಹೇಳಿದರು.

ಈ ವಸತಿ ಶಾಲೆಯ ವಿದ್ಯಾರ್ಥಿನಿಯರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನು ನಾನು ಕಣ್ಣಾರೆ ಕಂಡಿರುವೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ವಿದ್ಯಾರ್ಥಿನಿಯರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಡಿಸಿ ಕಛೇರಿಯ ಮುಂದೆ ಉಗ್ರ ಪ್ರತಿಭಟಿಸಲಾಗುವುದು ಎಂದು ಕರವೇ ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕ ಚೇತನ ಕಣವಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಈದಿನ.ಕಾಮ್‌ಗೆ ಡಿಡಿಪಿಐ, ಎಂ.ಎ. ರಡ್ಡೇರ ಪ್ರತಿಕ್ರಿಯಿಸಿ, “ಐದು ಎಕರೆ ಭೂಮಿಯನ್ನು ಈಗಾಗಲೇ ಖರೀದಿ ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕೂಡ ಸಲ್ಲಿಸಿದ್ದೇವೆ. ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ಅಲ್ಲಿಯ ಸಮಸ್ಯೆಗಳನ್ನು ಬಗೆಹರಿಸಲಾಗುವುದು,” ಎಂದಿದ್ದಾರೆ.

ಒಟ್ಟಿನಲ್ಲಿ ತಂದೆ-ತಾಯಿ ತಮ್ಮ ಮಕ್ಕಳು ಒಳ್ಳೆಯ ವಿದ್ಯಾಭಯಾಸ ಮಾಡಲಿ ಒಳ್ಳೆಯ ಆರೋಗ್ಯಹೊಂದಲಿ ಎಂದು ಸರ್ಕಾರಿ ವಸತಿ ನಿಲಯಗಳಿಗೆ ಸೇರಿಸುತ್ತಾರೆ. ಆದರೆ, ಇಲ್ಲಿ ಕಲಿಯುವ ಮಕ್ಕಳು ಪ್ರತೀ ದಿನ ಇಂತಹ ಸವಾಲುಗಳನ್ನು ಎದುರಿಸಬೇಕಾದ ಸ್ಥಿತಿ ಸರ್ಕಾರಿ ಹಾಸ್ಟೇಲ್‌ಗಳದ್ದು. ಇನ್ನಾದರೂ ಈ ಮಕ್ಕಳ ಸಮಸ್ಯೆಗೆ ಪರಿಹಾರ ಸಿಗುವುದೇ ಕಾದುನೋಡಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X