ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ: ಸಿದ್ದರಾಮಯ್ಯ

Date:

Advertisements

ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾವೇರಿ ಜಿಲ್ಲೆಯ ಚಿಕ್ಕ ಬಾಸುರಲ್ಲಿ ಲಿಂಗಾಯತ ಸಂಘ ಬೆಂಗಳೂರು ವತಿಯಿಂದ ಆಯೋಜಿಸಿರುವ ಶಿವಯೋಗಿ ಸಿದ್ದರಾಮೇಶ್ವರರ 851 ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಸರ್ಕಾರ ಎಲ್ಲ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು” ಎಂದರು.

Advertisements

“ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣನವರ ಸಮಕಾಲೀನರು. ವಚನ ಸಾಹಿತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 12 ನೇ ಶತಮಾನದಲ್ಲಿ ಶರಣರು ವಚನಗಳನ್ನು ರಚಿಸಿ ಜೀವನದ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಜೀವನ ಮೌಲ್ಯಗಳನ್ನು ಮಾವು ಅರಿಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತವಾದರೂ ಹುಟ್ಟು ಸಾವುಗಳ ಮಧ್ಯೆ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ನಮ್ಮ ಬದುಕಿನ ಅವಧಿಯಲ್ಲಿ ನಮ್ಮ ಬದುಕನ್ನು ನಾವು ಸಾರ್ಥಕಗೊಳಿಸಿಕೊಂಡಿದ್ದೇವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ವಚನ ಸಾಹಿತ್ಯ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ

“ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಮಾತ್ರವಲ್ಲದೆ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ. ಧರ್ಮಾಚರಣೆ, ಆಧ್ಯಾತ್ಮ ಜನರ ಭಾಷೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಜನರಿಗೆ ಓದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಜನರ ಭಾಷೆಯಲ್ಲಿ ಇದನ್ನು ತಿಳಿಸಿದ್ದು ಬಸವಣ್ಣ” ಎಂದರು.

“ಶರಣ ಸಾಹಿತ್ಯದಲ್ಲಿ ಬಸವಣ್ಣ, ಚೆನ್ನಬಸವಣ್ಣ, ಅಕ್ಕಮಹಾದೇವಿ ಅಲ್ಲಮಪ್ರಭು, ಸಿದ್ದರಾಮೇಶ್ವರರು ಪ್ರಮುಖರು. ಬಸವಾದಿ ಶರಣರು ಮುಖ್ಯ ವಾಗಿ ನೀಡಿದ ಮೌಲ್ಯ ಕಾಯಕ ಮತ್ತು ದಾಸೋಹ. ಸತ್ಯವೇ ಸ್ವರ್ಗ, ಮಿತ್ಯವೆ ನರಕ ಎಂದ ಶರಣರು, ಮೌಢ್ಯಗಳನ್ನು ತಿರಸ್ಕರಿಸಿದ್ದರು. ಬಸವಾದಿ ಶರಣರು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ. ಕಂದಾಚಾರ, ಮೂಢನಂಬಿಕೆ, ಮೌಢ್ಯಗಳನ್ನು ತಿರಸ್ಕಾರ ಮಾಡಿದ್ದಾರೆ” ಎಂದು ಹೇಳಿದರು.

“ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹಾಸನದಲ್ಲಿ ಸುಮಾರು 40,000 ಶಾಖೆಗಳಿದ್ದು, ಅನುದಾನ ಕೋರಿರುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಇದೇ ವೇಳೆ ಸಿಎಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X