ಬೆಂಗಳೂರು | ಪೊಲೀಸರ ಸಮ್ಮುಖದಲ್ಲಿಯೇ ಕೊಲೆ ಆರೋಪಿಯ ಮನೆಗೆ ಬೆಂಕಿ

Date:

Advertisements

ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಬಂದೋಬಸ್ತ್‌ನಲ್ಲಿರುವಾಗಲೇ ಕೊಲೆ ಆರೋಪಿಯ ಮನೆಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಕನಕಪುರ ರಸ್ತೆಯ ಗೊಲ್ಲಹಳ್ಳಿಯಲ್ಲಿ ನಡೆದಿದೆ.

ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ. ಆದರೆ, ಸುಮಾರು ₹2 ಲಕ್ಷ ನಷ್ಟವಾಗಿದೆ. ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 436 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏನಿದು ಪ್ರಕರಣ?

Advertisements

ಗೊಲ್ಲಹಳ್ಳಿಯ ಎಂ.ರವೀಶ (38) ಅವರನ್ನು ಗೊಲ್ಲಹಳ್ಳಿಯ ಅವರ ಸೋದರಸಂಬಂಧಿ ಎನ್.ರವಿಕುಮಾರ್ (40) ಅಲಿಯಾಸ್ಮಸಾಜ್ರವಿ ಬುಧವಾರ ಕೊಲೆ ಮಾಡಿದ್ದಾರೆ.

ಮಸಾಜ್ ರವಿ ಅವರ ತಾಯಿಯ ಬಗ್ಗೆ ಕುಡಿದ ಅಮಲಿನಲ್ಲಿ ರವೀಶ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಕುಪಿತಗೊಂಡ ಮಸಾಜ್ ರವಿ, ರವೀಶಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ರವೀಶನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ರವಿಯನ್ನು ಕೋಡಿಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರವೀಶನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ರವೀಶನ ಕುಟುಂಬಸ್ಥರು ಪ್ರತಿಜ್ಞೆ ಮಾಡಿದರು ಎಂದು ತಿಳಿದುಬಂದಿದೆ.

ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರಿಂದ ಪ್ರತೀಕಾರದ ದಾಳಿಯ ನಿರೀಕ್ಷೆ ಇದ್ದ ಹಿನ್ನೆಲೆ, ಕೊಲೆ ಆರೋಪಿಯ ಮನೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.

ಏಳು ಪೊಲೀಸ್ ಸಿಬ್ಬಂದಿ ಮನೆಗೆ ಕಾವಲು ಕಾಯುತ್ತಿದ್ದರು. ಹಿಂಬದಿಯಿಂದ ಮನೆಯ ಕಾಂಪೌಂಡ್ಗೆ ನುಗ್ಗಿದ ದುಷ್ಕರ್ಮಿಗಳು ಗುರುವಾರ ರಾತ್ರಿ ಬಿದಿರಿನಿಂದ ತಯಾರಿಸಿದ ರೇಷ್ಮೆ ಹುಳು ಸಾಕಣೆ ತಟ್ಟೆಗಳಿಗೆ ಬೆಂಕಿ ಹಚ್ಚಿದ್ದಾರೆ. ನಂತರ ಬೆಂಕಿ ಮನೆಗೆ ವ್ಯಾಪಿಸಿದೆ. ಬೆಂಕಿ ನಂದಿಸಲು ಪೊಲೀಸ್ ಸಿಬ್ಬಂದಿಗೆ ಸ್ಥಳೀಯರ ಸಹಾಯ ಸಿಗಲಿಲ್ಲ.

ಕೊಲೆ ಆರೋಪಿಯ ಮನೆಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಶುಕ್ರವಾರ ಕೋಡಿಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 436 ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; ಸುಟ್ಟು ಕರಕಲಾದ 4 ಬೈಕ್‌ಗಳು

ಕೊಲೆ ಪ್ರಕರಣ ಮತ್ತು ಬೆಂಕಿಯ ಕಿಡಿಗೇಡಿತನಕ್ಕೆ ಸಂಬಂಧವಿದೆ. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ. ಸುಮಾರು 2 ಲಕ್ಷ ರೂಪಾಯಿ ನಷ್ಟವಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X