ರನ್‌ವೇಯಲ್ಲೇ ಊಟ ಮಾಡಿದ ವಿಮಾನ ಪ್ರಯಾಣಿಕರು: ವಿಡಿಯೋ ವೈರಲ್; ‘ಇಂಡಿಗೋ’ ಸಂಸ್ಥೆಗೆ ನೋಟಿಸ್

Date:

Advertisements

ವಿಮಾನ ಹಾರಾಟ ಆರಂಭಿಸಲು ವಿಳಂಬವಾದ ಕಾರಣಕ್ಕಾಗಿ ಇಂಡಿಗೋ ವಿಮಾನದ ಕೋ-ಪೈಲಟ್ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೈದಿದ್ದ ವಿಡಿಯೋ ವೈರಲ್ ಆದ ನಂತರ, ಇಂಡಿಗೋ ಸಂಸ್ಥೆಗೆ ಸಂಬಂಧಿಸಿದ ಮತ್ತೊಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲಾಗಿದೆ.

ಮಂಜಿನ ಕಾರಣಕ್ಕಾಗಿ ಕೆಲ ಗಂಟೆಗಳ ಕಾಲ ವಿಮಾನಯಾನ ವಿಳಂಬವಾದ ಕಾರಣ ಹಾಗೂ ನಿಗದಿತ ಸ್ಥಳವನ್ನು ಹೊರತುಪಡಿಸಿ ಬೇರೆಡೆ ವಿಮಾನವನ್ನು ತೆಗೆದುಕೊಂಡು ಹೋದ ಹಿನ್ನೆಲೆಯಲ್ಲಿ, ವಿಮಾನ ಪ್ರಯಾಣಿಕರು ರನ್ ವೇಯಲ್ಲಿಯೇ ಕುಳಿತು ರಾತ್ರಿ ಊಟ ಮಾಡುತ್ತಿರುವ ದೃಶ್ಯವು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಈ ಬೆಳವಣಿಗೆ ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ. ಘಟನೆಯ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋ ಸಂಸ್ಥೆ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

Advertisements

ಗೋವಾದಿಂದ ದೆಹಲಿಗೆ ಹಾರಾಟ ನಡೆಸಬೇಕಿದ್ದ ಇಂಡಿಗೋ ವಿಮಾನವು ಜನವರಿ 14 ರಂದು ಅಂದಾಜು 18 ಗಂಟೆಗಳ ಕಾಲ ವಿಳಂಬವಾಯಿತು. ಅಲ್ಲದೆ, ದೆಹಲಿಯ ಬದಲಿಗೆ ಮುಂಬೈಗೆ ಈ ವಿಮಾನವನ್ನು ಕೊಂಡೊಯ್ಯಲಾಯಿತು ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೆಲವು ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಇಂಡಿಗೋ ಘಟನೆ | ವಿಮಾನ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ವಿಳಂಬದಿಂದ ನಿರಾಶೆಗೊಂಡ ಇಂಡಿಗೋ ವಿಮಾನ ಸಂಖ್ಯೆ 6E2195 ವಿಮಾನದ ಪ್ರಯಾಣಿಕರು ವಿಶ್ರಾಂತಿ ತೆಗೆದುಕೊಳ್ಳಲು ಒತ್ತಡ ಹೇರಿದ್ದರಿಂದ ಇಂಡಿಗೋ ವಿಮಾನದ ಪಕ್ಕದ ರನ್‌ವೇಯಲ್ಲಿ ಕುಳಿತು ಊಟ ಮಾಡಲು ಕುಳಿತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ವೈರಲಾಗಿರುವ ವೀಡಿಯೊಗಳಲ್ಲಿ ಕೆಲವು ಪ್ರಯಾಣಿಕರು ಊಟವನ್ನು ಮಾಡುತ್ತಿದ್ದರೆ, ಇತರರು ರನ್‌ವೇಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದು ಕಂಡು ಬಂದಿದೆ. ಈ ವಿಮಾನವು ಜನವರಿ 15 ರಂದು (ಸೋಮವಾರ) ಬೆಳಗ್ಗೆ 5:12ಕ್ಕೆ ಮುಂಬೈಗೆ ಬಂದಿಳಿದಿದ್ದವು ಎಂದು ವರದಿಯಾಗಿದೆ.

ಭಾರೀ ಟೀಕೆಗಳ ನಂತರ ಈ ಕುರಿತು ಇಂಡಿಗೋ ಸಂಸ್ಥೆ ಸ್ಪಷ್ಟೀಕರಣ ನೀಡಿದ್ದು, “ಈ ಬೆಳವಣಿಗೆಗೆ ನಾವು ವಿಷಾದಿಸುತ್ತೇವೆ. ನಮ್ಮ ಸಂಸ್ಥೆಯ ವಿಮಾನದ ಮೂಲಕ ಪ್ರಯಾಣ ಮಾಡುವವರ ಪ್ರಯಾಣಕ್ಕೆ ಅಡ್ಡಿಪಡಿಸುವುದು ನಮ್ಮ ಉದ್ದೇಶವಲ್ಲ. ಆದರೂ, ಕೆಲವೊಮ್ಮೆ, ಕೆಲವು ಕಾರ್ಯಾಚರಣೆಯ ಕಾರಣಗಳಿಂದಾಗಿ, ಇಂತಹ ವಿಳಂಬಗಳು ವಿಮಾನಯಾನ ಸಂಸ್ಥೆಯ ನಿಯಂತ್ರಣವನ್ನೂ ಕೂಡ ಮೀರಿವೆ. ನೀವು ಇದನ್ನು ಅರ್ಥ ಮಾಡಿಕೊಳ್ಳುತ್ತೀರಿ ಎಂದು ನಿರೀಕ್ಷಿಸುತ್ತೇವೆ” ಎಂದು ಏರ್‌ಲೈನ್ಸ್ ಹೇಳಿದೆ.

ವಿಮಾನ ನಿಲ್ದಾಣವನ್ನು ರೈಲ್ವೆಯಂತೆ ಪರಿವರ್ತಿಸುತ್ತೇನೆ ಎಂದಿದ್ದ ಪ್ರಧಾನಿಯವರ ಹಳೆಯ ಹೇಳಿಕೆ ವೈರಲ್!

ಇಂಡಿಗೋ ಏರ್‌ಲೈನ್ಸ್ ವಿರುದ್ಧ ಟೇಕ್-ಆಫ್‌ ಮತ್ತು ಲ್ಯಾಂಡಿಂಗ್‌ನಲ್ಲಿ ನಿರಂತರ ವಿಳಂಬದ ಬಗ್ಗೆ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಹತಾಶೆಯನ್ನು ಹೊರಹಾಕುತ್ತಿದ್ದಾರೆ. ಮಂಜಿನ ಕಾರಣದಿಂದಾಗಿ ಈ ರೀತಿಯ ಬೆಳವಣಿಗೆಯಾಗಿರುವುದಾಗಿ ನಿನ್ನೆ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿಕೆ ನೀಡಿದ್ದರು.

ಈ ಎಲ್ಲ ಬೆಳವಣಿಗೆಗಳ ನಂತರ, ರೈಲ್ವೆಯನ್ನು ವಿಮಾನ ನಿಲ್ದಾಣದಂತೆ ಪರಿವರ್ತಿಸುತ್ತೇನೆ, ಹವಾಯಿ ಚಪ್ಪಲಿ ಧರಿಸಿದ ಸಾಮಾನ್ಯ ನಾಗರಿಕರು ಕೂಡ ಹವಾಯಿ ಜಹಾಜ್‌(ವಿಮಾನ)ದಲ್ಲಿ ಪ್ರಯಾಣಿಸಲು ಸಾಧ್ಯವಾಗಬೇಕು ಎಂದು ಪ್ರಧಾನಿಯವರು ನೀಡಿದ್ದ ಹಳೆಯ ಹೇಳಿಕೆಯು ಈಗ ವೈರಲ್ ಆಗುತ್ತಿದೆ.

ttw

ಈ ಬಗ್ಗೆ ಪೋಸ್ಟ್ ಹಾಕುತ್ತಿರುವ ನೆಟ್ಟಿಗರು, “ಮೋದಿಜೀಯವರು ಈ ಹಿಂದೆ ನೀಡಿದ್ದ ಭರವಸೆಯನ್ನು ಇಂಡಿಗೋ ಸಂಸ್ಥೆಯವರು ಈಡೇರಿಸಿದ್ದಾರೆ. ಸಾಮಾನ್ಯವಾಗಿ ರೈಲ್ವೆ ನಿಲ್ದಾಣಗಳಲ್ಲಿ ನೆಲದಲ್ಲೇ ಕುಳಿತು ಊಟ ಮಾಡುವಂತೆಯೇ, ಇಂಡಿಗೋದವರು ಕೂಡ ಪ್ರಯಾಣಿಕರನ್ನು ರನ್‌ವೇಯಲ್ಲಿ ಕುಳ್ಳಿರಿಸಿ ಊಟ ನೀಡಿದ್ದಾರೆ. ಮೋದಿ ಹೈ ತೊ ಮುಮ್ಕಿನ್ ಹೈ” ಎಂದು ವ್ಯಂಗ್ಯವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X