ರಾಯಚೂರು | ಕಂದಾಯ ಇಲಾಖೆಯ ಎಲ್ಲ ದಾಖಲೆಗಳ ಗಣಕೀರಣ: ಸಚಿವ ಕೃಷ್ಣ ಬೈರೇಗೌಡ

Date:

Advertisements

ಕಂದಾಯ ಇಲಾಖೆ ಎಲ್ಲಾ ದಾಖಲೆಗಳನ್ನು ಗಣಕೀರಣಗೊಳಿಸಿ ಮುಂದಿನ ಆರು ತಿಂಗಳಲ್ಲಿ ಜನರಿಗೆ ಆಗುತ್ತಿರುವ ತೊಂದರ ನಿವಾರಿಸಲು ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳ 31ತಾಲೂಕಗಳಲ್ಲಿ ಮೊದಲ ಹಂತದಲ್ಲಿ ಕಂದಾಯ ದಾಖಲೆಗಳನ್ನು ಡಿಜಿಲೀಕರಣಗೊಳಿಸುವ ಯೋಜನೆ ರೂಪಿಸಲಾಗಿದೆ. ನಂತರದ ದಿನಗಳಲ್ಲಿ ರಾಜ್ಯ ಎಲ್ಲಾ ಜಿಲ್ಲೆಗಳ, ತಾಲೂಕಗಳ ಜಮೀನಿನ ಮುಟ್ಯೇಷನ್ ಸೇರಿದಂತೆ, ಭೂ ದಾಖಲೆಗಳು ಲಭ್ಯವಾಗುವಂತೆ ಮಾಡಲಾಗುತ್ತದೆ.

ಬೆಳೆ ಸಮೀಕ್ಷೆ ಸೇರಿದಂತೆ ಭೂ ಸರ್ವೆ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಸಾರ್ವಜನಿಕರಿಗೆ ತೀವ್ರತೊಂದರೆಯಾಗುತ್ತಿದ್ದು ಶಾಶ್ವತ ಪರಿಹಾರ ಒದಗಿಸಲು ಕೆಲಸ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಬರ ಮತ್ತು ಅತಿವೃಷ್ಟಿಯಾದಾಗ ಪರಿಹಾರ ವಿತರಣೆಯಲ್ಲಿ ಸಾಕಷ್ಟು ನ್ಯೂನತೆಗಳಾಗುತ್ತಿರುವ ದೂರುಗಳು ಕೇಳಿಬರುತ್ತಿವೆ.ಯಾರದೋ ಜಮೀನಿನ ಪರಿಹಾರ ಇನ್ಯಾರಿಗೋ ನೀಡುವದು, ಹಾನಿಯಾದ ಬೆಳೆಯೇ ಬೇರೆ, ನಷ್ಟ ಇನ್ಯಾವದೋ ಬೆಳೆಯದು ನೀಡಲಾಗುತ್ತಿದೆ.

Advertisements

ಬೆಳೆ ಸಮೀಕ್ಷ ನಡೆಸಿದರೂ ಶೇ.20ರಷ್ಟು ಅರ್ಹರಿಗೆ ಪರಿಹಾರ ದೊರೆಯದೇ ಹೋಗುತ್ತಿರುವ ದೂರುಗಳ ಹಿನ್ನಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಬೆಳೆ ನಷ್ಟ ಪರಿಹಾರ ನೀಡಲು 4663 ಕೋಟಿ ರೂ. ಹಣd ಅವಶ್ಯಕತೆಯಿದೆ. ಕುಡಿಯುವ ನೀರು, ಬೆಳೆ ನಷ್ಟ ಸೇರಿ ಇತರೆ ಅವಶ್ಯಕತೆಗಳಿಗೆ 18,175 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಪರಿಹಾರ ಕೇಳಲಾಗಿದೆ. ಕೇಂದ್ರ ಇಂದಿಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನಿಯಮಗಳನ್ನು ಬದಲಿಸಿ ರೈತರಿಗೆ ವಾಸ್ತವಿಕ ಪರಿಹಾರ ಒದಗಿಸಲು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಮಾತ್ರ ನಿಯಮಗಳನ್ನು ಪರಿಷ್ಕರಿಸಲು ಅಧಿಕಾರವಿದೆ ಎಂದರು.

ಈಸಂದರ್ಭದಲ್ಲಿ ಶಾಸಕ ಹಂಪಯ್ಯನಾಯಕ, ಬಸನಗೌಡ ದದ್ದಲ್, ಕಂದಾಯ ಅಧಿಕಾರಿ ಸುನೀಲ್‌ಕುಮಾರ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೇರಿ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X