ಧರ್ಮಸ್ಥಳದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ; ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Date:

Advertisements

ಅನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಸ್ಥಾಪಿಸಲಾಗಿದ್ದರೂ ಕೂಡ, ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ಇಂದು(ಜ.16) ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಬೆಂಗಳೂರು ಮೂಲದ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ತಡೆದ ಕೆಲವರು, ಅವರ ವಿವರಗಳನ್ನು ಕೇಳಿದ್ದಾರೆ. ಪಂಚೆ ಧರಿಸಿ ತಿಲಕ ಹಾಕಿ ಯುವತಿ ಜೊತೆ ಸುತ್ತಾಡುತ್ತಿದ್ದ ಯುವಕನನ್ನು ವಿಚಾರಿಸಿದಾಗ ಆತ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧರ್ಮಸ್ಥಳ ಠಾಣೆಯ ಪೊಲೀಸರು, ಜೋಡಿಯನ್ನು ಬಳಿಕ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.

Advertisements

JODI IN D

ಜೋಡಿಯು ನೀಡಿದ ಮಾಹಿತಿಯನ್ನಾಧರಿಸಿ ಪೊಲೀಸರು ಅವರ ಪೋಷಕರೊಂದಿಗೆ ಮಾತನಾಡಿದ್ದು, ಬಳಿಕ ಅವರನ್ನು ಧರ್ಮಸ್ಥಳ ಪೊಲೀಸರು ಮನೆಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಬಂಟ್ವಾಳ | ರಿಕ್ಷಾ ಹಿಂದೆ ಗನ್‌ನೊಂದಿಗೆ ಗಾಂಧಿ ಹಂತಕ ಗೋಡ್ಸೆ ಹೆಸರು: ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆ್ಯಂಟಿ ಕಮ್ಯೂನಲ್ ವಿಂಗ್(Anti Communal Wing) ಅನ್ನು ಪೊಲೀಸ್ ಇಲಾಖೆ ರಚಿಸಿದ್ದರೂ ಕೂಡ, ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಅನೇಕ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. ಕೆಲವು ಘಟನೆಗಳಲ್ಲಿ ಹಲ್ಲೆ ಕೂಡ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ದುರುದ್ದೇಶ ಇಲ್ಲದಿದ್ದರೆ ಕುಂಕುಮ ಹಾಕಿಕೊಂಡು ಬರುವಾಗ ಅಗತ್ಯವೇನಿತ್ತು?
    ಹಿರಿಯರಿಗೆ ಹೇಳದೆ ಬಂದಿದ್ದಲ್ಲವೇ? ಇದು ಅನೈತಿಕ ಪೊಲೀಸ್ ಗಿರಿ ಹೇಗೆ ಆಗುತ್ತದೆ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X