ಕಲಬುರಗಿ | ಬಿಕ್ಕಟ್ಟಿನ ಸ್ಥಿತಿಯಲ್ಲಿವೆ ಅಂಗನವಾಡಿ ಕೇಂದ್ರಗಳು

Date:

Advertisements

ಅಂಗನವಾಡಿ ಕೇಂದ್ರಗಳು ಸಮುದಾಯದ ಆರೋಗ್ಯ ಕಾಪಾಡಲು ಹಾಗೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶವುಳ್ಳ ಆಹಾರ ಒದಗಿಸುವ ಸೇವೆ ನೀಡುವ ದೃಢವಾದ ವೇದಿಕೆಗಳಾಗಿವೆ. ಅಂಗನವಾಡಿಗಳು ಮಗುವಿನ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ಹಾಕುವ ಸಮುದಾಯ ಸ್ಥಳಗಳಾಗಿವೆ. ಅಂಗನವಾಡಿ ಕೇಂದ್ರಗಳ ಸೇವಾ ವಿತರಣೆಯು ಸಮುದಾಯದ ಒಳಗೊಳ್ಳುವಿಕೆಯ ಮೇಲೆ ಅವಲಂಬಿತವಾಗಿದೆ. ಮೂಲಸೌಕರ್ಯ ಲಭ್ಯತೆ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯ ಸಾಮರ್ಥ್ಯ ಕೂಡ ಮುಖ್ಯವಾಗುತ್ತದೆ.

ಸ್ಥಳೀಯವಾಗಿ ಇಷ್ಟೆಲ್ಲ ಸೇವೆ ಒಗಿಸವು ಅಂಗನವಾಡಿ ಕೇಂದ್ರಗಳು ಕಲಬುರಗಿ ಜಿಲ್ಲೆಯಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿವೆ. ಜಿಲ್ಲೆಯ ಆಳಂದ ತಾಲ್ಲೂಕಿನ ಕೊಡಲಹಂಗರಗಾ ಗ್ರಾಮದ ಅಂಗನವಾಡಿ ಕೇಂದ್ರಗಳ ಸ್ಥಿತಿಯಂತೂ ಹೇಳತೀರದಂತಿದೆ.

ಗ್ರಾಮದ ಅಂಗನವಾಡಿ ಕೇಂದ್ರ ಸಂ.2ರಲ್ಲಿ ವಿದ್ಯುತ್ ಸಮಸ್ಯೆಯಿಂದ ಮಕ್ಕಳು ಬೇಸಿಗೆಯ ಬೇಗೆಯಲ್ಲಿ ಬಳಲುವಂತಾಗಿದೆ. ಕೇಂದ್ರದಲ್ಲಿ ಫ್ಯಾನ್‌ ಇದ್ದರೂ, ಅದನ್ನು ಉಪಯೋಗಿಸಲಾಗುತ್ತಿಲ್ಲ. ಅಡುಗೆ ಕೋಣೆ ಮಳೆಗಾಲದಲ್ಲಿ ಸೋರುತ್ತದೆ. ಶೌಚಾಲಯ ಇದ್ದರೂ, ಅದಕ್ಕೆ ನೀರಿನ ವ್ಯವಸ್ಥೆ ಇಲ್ಲ. ಅಂಗನವಾಡಿಗೆ ಕಾಂಪೌಡ್ ಗೊಡೆಯೂ ಇಲ್ಲ. ಸಣ್ಣ ಮಕ್ಕಳು ರಸ್ತೆಗೆ ಹೋದರೆ, ಅನಾಹುತ ಎದುರಾಗುವ ಭೀತಿ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಡುತ್ತಲೇ ಇದೆ.

Advertisements

“ಅಂಗನವಾಡಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ಧೋರಣೆ ತಳೆದಿದೆ. ಮಕ್ಕಳ ಪೋಷಕರು ಸಮಸ್ಯೆಗಳ ಬಗ್ಗೆ ನಮ್ಮನ್ನು ಪ್ರಶ್ನಿಸುತ್ತಾರೆ. ಅದರೆ, ನಾವು ಏನು ಮಾಡಲಾಗದ ಪರಿಸ್ಥಿತಿಯಲ್ಲಿದ್ದೇವೆ” ಎಂದು ಈದಿನ.ಕಾಮ್‌ ಜೊತೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆ ಉಮಾದೇವಿ ಹೇಳುತ್ತಾರೆ.

ಇನ್ನು, ಗ್ರಾಮದ ಅಂಗನವಾಡಿ ಕೇಂದ್ರ ಸಂ.3ರಲ್ಲಿ ಅಂಗನವಾಡಿಗೆ ಸ್ವತ ಕಟ್ಟಡವೇ ಇಲ್ಲ. 13 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿದೆ. ಹಲವು ಸಂದರ್ಭಗಳಲ್ಲಿ ಸರಿಯಾಗಿ ಬಾಡಿಗೆ ಪಾವತಿಸದೆ, ಕಟ್ಟಡದ ಮಾಲೀಕರು ಖಾಲಿ ಮಾಡಿಸಿರುವ ಪ್ರಹಸನಗಳೂ ನಡೆದಿವೆ. ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಅಂಗನವಾಡಿ ಸ್ಥಳಾಂತರವಾಗುತ್ತಲೇ ಇದೆ.

“ಕೆಲವು ಸಂದರ್ಭಗಳಲ್ಲಿ ಬಾಡಿಗೆ ಮನೆಗಳು ಸಿಗದೆ, ನನ್ನ ಸ್ವಂತ ಮನೆಯಲ್ಲಿ ಅಂಗನವಾಡಿ ಕೇಂದ್ರ ನಡೆಸಿದ್ದೇನೆ. ಮಕ್ಕಳಿಗೆ ಪೂರ್ವ ಶಾಲಾ ಶಿಕ್ಷಣ ಅತಿ ಮುಖ್ಯ. ಆದರೆ, ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲದಿರುವುದು ಬೇಸರ ತಂದಿದೆ” ಎಂದು ಅಂಗನವಾಡಿ ಕಾರ್ಯಕರ್ತೆ ರೇಣುಕಾ ಹೇಳಿದ್ದಾರೆ.

ಈದಿನ.ಕಾಮ್‌ ಜೊತೆ ಮಾತನಾಡಿದ ಗ್ರಾಮದ ಅಂಗನವಾಡಿ ಕೇಂದ್ರ ಸಂ.1ರ ಕಾರ್ಯಕರ್ತೆ ಸುನೀತಾ, “ಅಂಗನವಾಡಿಗೆ ಸ್ವಂತ ಕಟ್ಟಡವಿದೆ. ಆದರೆ, ಒಂದೇ ಕೋಣೆ ಇರುವ ಕಾರಣ ಬಾಡಿಗೆ ಮನೆ ಮೊರೆ ಹೋಗುವ ಪರಿಸ್ಥಿತಿ ಎದುರಾಗಿದೆ. ಇರುವ ಕಟ್ಟಡವು ಮಳೆಗಾಲದಲ್ಲಿ ಸೋರುತ್ತದೆ. ಮಳೆ ಸುರಿಯುವ ಸಮಯದಲ್ಲಿ ನೀರು ಸೋರುವ ಜಾಗಕ್ಕೆ ಬಕೆಟ್‌ಗಳನ್ನು ಇಟ್ಟು, ಮಕ್ಕಳಿಗೆ ಪಾಠ ಮಾಡಬೇಕಾದ ಪರಿಸ್ಥಿತಿ ಇದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X