ಬಾಗಲಕೋಟೆ | ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಪ್ರತಿಭಟನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ಮತ್ತು ಏಕವಚನದಲ್ಲಿ ನಿಂದಿಸಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ.

ಶಾಸಕ ಜೆ.ಟಿ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೀಳಗಿಯ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಬಸವಪ್ರಭು ಸರಣಾಡಗೌಡ್ರು, “ರಾಮಮಂದಿರ ಕಟ್ಟುತ್ತೇವೆಂದು ಬಿಜೆಪಿಗರು ರಾಮನನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಆದರೆ, ನಾವು ನಿಜವಾದ ಹಿಂದುಗಳು. ನಾವು ಕೆಲಸ ಮಾಡುತ್ತೇವೆ. ನಮ್ಮ ಕೆಲಸ ನೋಡಿ ಮತ ನೀಡಿ ಅಂತ ಜನರನ್ನು ಕೇಳುತ್ತೇವೆ” ಎಂದರು.

Advertisements

ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಸ್.ಆರ್ ಪಾಟೀಲ್, ಶ್ರೀಮಂತ ಬಸಪ್ರಭು ಸರನಾಡಗೌಡ, ಹನಮಂತ ಕಾಖಂಡಕಿ, ಅದೃಷ್ಯಪ್ಪ ದೇಸಾಯಿ, ಬಸವರಾಜ್ ಹಳ್ಳದಮಣಿ, ಅಬುಷಮಾ ಕಾಜೀ, ಅನಿಲ್ ಗಚ್ಚಿನಮಣಿ, ಮಹಾದೇವ್ ಹಾದಿಮನಿ, ಸಿದ್ದು ಸಾರಾವಾರಿ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಧರ್ಮ – ಸಂಸ್ಕೃತಿ – ಆಚಾರ – ವಿಚಾರ – ಇತಿಹಾಸಗಳ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ , ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ರಾಹುಲ್ ಗಾಂಧಿಯವರನ್ನು ಕೆಲವು ತಿಂಗಳುಗಳ ಹಿಂದೆ ‘ಮೂರ್ಖರ ನಾಯಕ ‘ ಎಂದು ಝರಿದಿದ್ದರು.

    ರಾಹುಲ್ ಗಾಂಧಿಯವರನ್ನು ‘ ಮೂರ್ಖ ‘ ಎಂದು ಹೀಗಳಿಯುವುದು ಅವರ ಮಾತಿನ ಮುಖ್ಯ ಉದ್ದೇಶವಿದ್ದಿರಬೇಕು. ಆದರೆ ಟೀಕಿಸುವ ಭರದಲ್ಲಿ ಅವರಾಡಿದ ‘ಮೂರ್ಖರ ನಾಯಕ ‘ ಎಂಬ ಅತ್ಯಂತ ಕೆಟ್ಟ ಪದ ರಾಹುಲ್ ಗಾಂಧಿಯವರನ್ನು ಮೆಚ್ಚಿ ಬೆಂಬಲಿಸುವ ಕೋಟ್ಯಂತರ ಜನರ ಮನಸ್ಸನ್ನು ಘಾಸಿಗೊಳಿಸಿತು.

    ರಾಹುಲ್ ಗಾಂಧಿಯವರನ್ನು ಮಾತ್ರವಲ್ಲ , ಅವರ ಕೋಟ್ಯಂತರ ಬೆಂಬಲಿಗರನ್ನು ಮೂರ್ಖರು ಎಂದು ಝರಿದ ಮೋದಿ ಅವರ ಈ ಮಾತುಗಳನ್ನು ಸುಸಂಸ್ಕೃತರೆಲ್ಲರೂ ಖಂಡಿಸಲೇಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X