ರೈಲ್ವೆ ಪ್ರಯಾಣಿಕನಿಗೆ ಮನಬಂದಂತೆ ಹಲ್ಲೆಗೈದ ಟಿಟಿಇ: ವಿಡಿಯೋ ವೈರಲ್

Date:

Advertisements

ಕೆಲದಿನಗಳ ಹಿಂದೆ ವಿಮಾನ ಪ್ರಯಾಣ ವಿಳಂಬವಾಯಿತೆಂದು ಆಕ್ರೋಶಗೊಂಡ ಪ್ರಯಾಣಿಕನೋರ್ವ ಇಂಡಿಗೋ ವಿಮಾನದ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ, ರೈಲ್ವೆ ಪ್ರಯಾಣಿಕನೋರ್ವನಿಗೆ ಮನಬಂದಂತೆ ಟಿಕೆಟ್ ಪರಿಶೀಲನಾ ಅಧಿಕಾರಿ(ಟಿಟಿಇ)ಯೋರ್ವ ಹಲ್ಲೆಗೈದ ಘಟನೆ ನಡೆದಿದೆ.

ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.

ರೈಲ್ವೆ ಗಾಡಿ ಸಂಖ್ಯೆ 15203 ಬರೌನಿ-ಲಕ್ನೋ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದ್ದು, ರಾಜೇಶ್ ಸಾಹು ಎಂಬ ನೆಟ್ಟಿಗ ಈ ವಿಡಿಯೋವನ್ನು ಪೋಸ್ಟ್ ಮಾಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

Advertisements

ವಿಡಿಯೋದಲ್ಲಿ ಪ್ರಯಾಣಿಕನಿಗೆ ಮಾತ್ರವಲ್ಲದೇ, ಹಲ್ಲೆ ಮಾಡುತ್ತಿದ್ದ ಬಗ್ಗೆ ವಿಡಿಯೋ ಮಾಡುತ್ತಿದ್ದವನಿಗೂ ಹಲ್ಲೆಗೆ ಯತ್ನಿಸಿರುವುದು ದಾಖಲಾಗಿದೆ.

ವಿಡಿಯೋ ಹಂಚಿಕೊಂಡು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಇಲಾಖೆಗೆ ಟ್ಯಾಗ್ ಮಾಡಿರುವ ರಾಜೇಶ್ ಸಾಹು, “ಪ್ರಯಾಣಿಕರ ಮೇಲೆ ಟಿಟಿಇಯವರಿಗೆ ಹೀಗೆ ಹೊಡೆಯುವ ಸ್ವಾತಂತ್ರ್ಯವಿದೆಯೇ? ಗೂಂಡಾಗಳಿಗೆ ಟಿಟಿ ಎಂಬ ಹೆಸರಿದೆಯೇ? ಇಂತಹ ವ್ಯವಸ್ಥೆಯಲ್ಲಿ ಇಂಥವರು ಯಾಕಿದ್ದಾರೆ?” ಎಂದು ಪ್ರಶ್ನಿಸಿದ್ದು, ”ವಿಡಿಯೋದಲ್ಲಿ ಸ್ಪಷ್ಟವಾದ ದಾಖಲೆ ಇದೆ. ಕ್ರಮ ಕೈಗೊಳ್ಳಿ. ಜನರನ್ನು ಕೀಟಗಳೆಂದು ಪರಿಗಣಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಈ ವಿಡಿಯೋ ಈಗ ವೈರಲಾಗಿದ್ದು, ಟಿಟಿಇಯನ್ನು ಸೇವೆಯಿಂದಲೇ ವಜಾಗೊಳಿಸಿ ಎಂಬ ಆಗ್ರಹ ಕೇಳಿಬಂದಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೈಲ್ವೆ ಅಧಿಕಾರಿಗಳು, “ಪ್ರಯಾಣಿಕನ ಮೇಲೆ ಟಿಟಿಇ ಹಲ್ಲೆಗೈದಿರುವ ಘಟನೆಯ ವಿಡಿಯೋ ನಮ್ಮ ಗಮನಕ್ಕೆ ಬಂದಿದೆ. ತಪ್ಪಿತಸ್ಥ ಅಧಿಕಾರಿಯನ್ನು ಈಗಾಗಲೇ ಸೇವೆಯಿಂದ ಅಮಾನತು ಮಾಡಲಾಗಿದೆ. ತನಿಖೆಗೆ ಆದೇಶಿಸಿದ್ದೇವೆ. ಎಲ್ಲ ರೀತಿಯ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನು ಈ ಘಟನೆಯ ವಿಡಿಯೋವನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ, ಆಮ್ ಆದ್ಮಿ ಪಕ್ಷದ ವಕ್ತಾರೆ ಸ್ವಾತಿ ಮಲಿವಾಲ್ ಕೂಡ ಹಂಚಿಕೊಂಡಿದ್ದು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಟ್ಯಾಗ್ ಮಾಡಿ, ”ದಯವಿಟ್ಟು ವಿಷಯದ ಬಗ್ಗೆ ಗಮನಹರಿಸಿ ಮತ್ತು ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X