ಉತ್ತರ ಪ್ರದೇಶ | ಕಾನ್ಪುರ ಐಐಟಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ; ಒಂದು ತಿಂಗಳಲ್ಲಿ 3ನೇ ಸಾವು

Date:

Advertisements

ಕಾನ್ಪುರದ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಐಐಟಿ) ಕಾಲೇಜಿನಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಗುರುವಾರ ಸಾವನ್ನಪ್ಪಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಐಟಿಯಲ್ಲಿ ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಓದುತ್ತಿದ್ದ ಜಾರ್ಖಂಡ್‌ನ ದುಮ್ಕಾ ಮೂಲದ ಪ್ರಿಯಾಂಕಾ ಜೈಸ್ವಾಲ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಒಂದು ತಿಂಗಳಲ್ಲಿ ಕಾನ್ಪುರ ಐಐಟಿ ಕ್ಯಾಂಪಸ್‌ನಲ್ಲಿ ನಡೆದ 3ನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

Advertisements

ಪ್ರಿಯಾಂಕಾ ಅವರು ಕಳೆದ ವರ್ಷ ಡಿಸೆಂಬರ್ 29 ರಂದು ಸಂಸ್ಥೆಗೆ ಪ್ರವೇಶ ಪಡೆದಿದ್ದರು ಎಂದು ತಿಳಿದುಬಂದಿದೆ. ಸಂಸ್ಥೆಗೆ ಸೇರಿದ 20 ದಿನಗಳಲ್ಲಿಯೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆತ್ಮಹತ್ಯೆಯ ಬಗ್ಗೆ ಮಾಹಿತಿ ಬಂದಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಅವರ ಕೊಠಡಿಯ ಬಾಗಿಲು ಒಳಗಿನಿಂದ ಲಾಕ್‌ ಆಗಿತ್ತು. ಬಾಗಿಲನ್ನು ಒಡೆದು ಪರಿಶೀಲಿಸಿದಾಗ, ಅವರು ಮೃತಪಟ್ಟಿರುವುದು ಕಂಡುಬಂದಿತು” ಎಂದು ಕಾನ್ಪುರ ಹೆಚ್ಚುವರಿ ಡಿಸಿಪಿ ಆಕಾಶ್ ಪಟೇಲ್ ತಿಳಿಸಿದ್ದಾರೆ.

“ಫೋರೆನ್ಸಿಕ್ ತಂಡವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದೆ. ಪ್ರಾಥಮಿಕ ತನಿಖೆ ಮತ್ತು ಇತರ ವಿವರಗಳನ್ನು ಪಡೆದ ಬಳಿಕ ಆಕೆಯ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಬಹುದು” ಎಂದು ಅವರು ಹೇಳಿದ್ದಾರೆ.

“2023ರ ಡಿಸೆಂಬರ್‌ನಲ್ಲಿ ಸಂಸ್ಥೆಗೆ ಪ್ರವೇಶ ಪಡೆದಿದ್ದ ಪ್ರಿಯಾಂಕಾ ಅವರ ಅಕಾಲಿಕ ಮತ್ತು ದುರದೃಷ್ಟಕರ ಸಾವು ತೀವ್ರ ದುಃಖ ತಂದಿದೆ. ಕಾನ್ಪುರ ಐಐಟಿ ಸಂತಾಪ ವ್ಯಕ್ತಪಡಿಸುತ್ತದೆ. ಆಕೆಯ ಸಾವಿಗೆ ಸಂಭವನೀಯ ಕಾರಣವೇನು ಎಂದು ತಿಳಿಯಲು ಸಂಸ್ಥೆಯು ಪೊಲೀಸ್ ತನಿಖೆಗಾಗಿ ಕಾಯುತ್ತಿದೆ. ಆಕೆಯ ಸಾವಿನಿಂದ ಸಂಸ್ಥೆಯು ಭರವಸೆಯ ಯುವ ವಿದ್ಯಾರ್ಥಿಯನ್ನು ಕಳೆದುಕೊಂಡಿದೆ” ಎಂದು ಕಾನ್ಪುರ ಐಐಟಿ ಹೇಳಿದೆ.

ಜನವರಿ 11 ರಂದು, ಇನ್ಸ್ಟಿಟ್ಯೂಟ್‌ನ ಎರಡನೇ ವರ್ಷದ ಎಂ.ಟೆಕ್ ವಿದ್ಯಾರ್ಥಿ ವಿಕಾಸ್ ಕುಮಾರ್ ಮೀನಾ (31) ತನ್ನ ಹಾಸ್ಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ ತನ್ನ ಕೋರ್ಸ್‌ನಲ್ಲಿ ಮುಂದುವರೆಯುವುದನ್ನು ‘ತಾತ್ಕಾಲಿಕವಾಗಿ’ ನಿರ್ಬಂಧಿಸಲಾಗಿತ್ತು ಎಂದು ಹೇಳಲಾಗಿದೆ.

ಅದಕ್ಕೂ ಹಿಂದೆ, ಡಿಸೆಂಬರ್ 19 ರಂದು, ಪೋಸ್ಟ್‌ಡಾಕ್ಟರಲ್ ಸಂಶೋಧಕಿ ಪಲ್ಲವಿ ಚಿಲ್ಕಾ (34) ಅವರು ಕ್ಯಾಂಪಸ್‌ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X