ರಾಹುಲ್‌ ಗಾಂಧಿಯಿಂದ ‘ನ್ಯಾಯ’ದ ನಿರೀಕ್ಷೆಯಲ್ಲಿ ಅಸ್ಸಾಂ ಕಾಂಗ್ರೆಸ್‌ನಿಂದ ಅಮಾನತಾದ ನಾಯಕಿ

Date:

Advertisements

ರಾಹುಲ್‌ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಅಸ್ಸಾಂ ತಲುಪಿದೆ. ಈ ವೇಳೆ, ಅಸ್ಸಾಂ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನ್ಯಾಯ ಮತ್ತು ನ್ಯಾಯದ ಚರ್ಚೆಗಾಗಿ ರಾಹುಲ್‌ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.

ಯಾತ್ರೆಯ ಮಾರ್ಗದಲ್ಲಿ ಶಿವಸಾಗರ ಜಿಲ್ಲೆಯ ಅಮ್ಗುರಿಯಲ್ಲಿ ಅಂಗಿತಾ ದತ್ತಾ ಅವರ ನೇತೃತ್ವದಲ್ಲಿ ಧರಣಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ ಬಳಿಕ ತಮ್ಮನ್ನು 2023ರ ಏಪ್ರಿಲ್‌ನಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ನಮಗೆ ನ್ಯಾಯ ಬೇಕೆಂದು ಆಕೆ ಧರಣಿ ನಡೆಸಿದ್ದಾರೆ.

“ನಾನು ನ್ಯಾಯವನ್ನು ಪಡೆಯಲು ಇಲ್ಲಿಗೆ ಬಂದಿದ್ದೇನೆ. ರಾಹುಲ್‌ ಗಾಂಧಿ ಅವರು ತಮ್ಮ ನ್ಯಾಯ ಯಾತ್ರೆಯನ್ನು ಪ್ರಾರಂಭಿಸಿದಾಗ ನನಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಮತ್ತು ಪಕ್ಷದ ಸದಸ್ಯತ್ವಕ್ಕಾಗಿ ನಾನು ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸುತ್ತೇನೆ” ಎಂದು ದತ್ತಾ ಹೇಳಿದ್ದಾರೆ.

Advertisements

ಆದರೆ, ರಾಹುಲ್‌ ಗಾಂಧಿ ಅವರ ಬೆಂಗಾವಲು ಪಡೆ ರಾಹುಲ್‌ ಸುತ್ತ ಇದ್ದಿದ್ದರಿಂದ ಅವರನ್ನು ಭೇಟಿ ಮಾಡಲು ಆಕೆಗೆ ಅವಕಾಶ ಸಿಗಲಿಲ್ಲ ಎಂದು ಆಕೆಯ ಬೆಂಬಲಿಗರು ಹೇಳಿದ್ದಾರೆ. “ನನ್ನ ಅಮಾನತಿನ ನಂತರ ಈ 10 ತಿಂಗಳಲ್ಲಿ ನಾನು ಯಾವುದೇ ರಾಜಕೀಯ ಪಕ್ಷವನ್ನು ಸೇರಲಿಲ್ಲ. ಆದರೆ ಈ ದೇಶದ ಜನರಿಗೆ ನ್ಯಾಯವನ್ನು ಕೇಳಲು ಹೊರಟ ನಾಯಕನಿಂದ ನನಗೆ ಯಾವುದೇ ನ್ಯಾಯ ಸಿಗಲಿಲ್ಲ” ಎಂದು ದತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದತ್ತಾ ಬೆಂಬಲಿಗರು ಯಾತ್ರೆಯ ಮಾರ್ಗದುದ್ದಕ್ಕೂ ‘ಅಸ್ಸಾಂ ಮಗಳಿಗೆ ನ್ಯಾಯ ಬೇಕು’ ಎಂಬ ಪೋಸ್ಟರ್‌ಗಳನ್ನು ಹಾಕಿದ್ದರು. ದತ್ತಾ ಅವರ ಧರಣಿ ಬಗ್ಗೆ ಪಕ್ಷದ ರಾಜ್ಯ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿಳಿದಿತ್ತು ಎಂದು ದತ್ತಾ ಬೆಂಬಲಿಗರು ಹೇಳಿದ್ದಾರೆ.

ದತ್ತಾ ಅವರ ಮನವಿ ಪಡೆಯಲಾಗದ ರಾಹುಲ್‌ ಗಾಂಧಿಯನ್ನು ಬಿಜೆಪಿ ಟೀಕಿಸಿದೆ. “ನ್ಯಾಯ ಎಲ್ಲರಿಗೂ ಸಿಗಬೇಕು. ಲೈಂಗಿಕ ಕಿರುಕುಳದ ಪ್ರಕರಣಗಳಲ್ಲಿ ಪಕ್ಷವು ತಮ್ಮ ಮಾರ್ಗಸೂಚಿಗಳಿಗೆ ಬದ್ಧವಾಗಿರಬೇಕು. ನ್ಯಾಯಕ್ಕಾಗಿ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ಸದಸ್ಯರಿಗೆ ಯಾಕೆ ನ್ಯಾಯ ಕೊಡಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಬಿಜೆಪಿ ನಾಯಕ ನಳಿನ್ ಕೊಹ್ಲಿ ಹೇಳಿರುವುದಾಗಿ ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X