ಲಲಿತ್ ಮೋದಿ ನ್ಯಾಯಾಂಗ ನಿಂದನೆ ಪ್ರಕರಣ; ಸುಪ್ರೀಂ ಕೋರ್ಟ್‌ ಛೀಮಾರಿ

Date:

Advertisements

ನ್ಯಾಯಾಧೀಶರ ಬಗ್ಗೆ ಕ್ಷುಲ್ಲಕವಾಗಿ ಬರೆದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಲಲಿತ್ ಮೋದಿ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ಬೇಷರತ್ ಕ್ಷಮೆ ಯಾಚಿಸುವಂತೆ ಸೂಚಿಸಿದೆ.

ಐಪಿಎಲ್‌ನ ಮಾಜಿ ಆಯುಕ್ತ ಲಲಿತ್ ಮೋದಿ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ (ಏಪ್ರಿಲ್ 13) ಛೀಮಾರಿ ಹಾಕಿ ಭೇಷರತ್ ಕ್ಷಮೆ ಯಾಚಿಸುವಂತೆ ಹೇಳಿದೆ.

ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ನ್ಯಾಯಾಂಗ ನಿಂದನೆಯ ಪೋಸ್ಟ್ ಮಾಡಿರುವ ಲಲಿತ್ ಮೋದಿ ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ಮತ್ತು ರಾಷ್ಟ್ರೀಯ ಸುದ್ದಿಪತ್ರಿಕೆಗಳಲ್ಲಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

Advertisements

ಅಲ್ಲದೆ, ಭಾರತದ ನ್ಯಾಯಾಂಗಕ್ಕೆ ಸಂಬಂಧಿಸಿದ ಅಂತಹ ಪೋಸ್ಟ್‌ಗಳನ್ನು ಭವಿಷ್ಯದಲ್ಲಿ ಹಾಕುವುದಿಲ್ಲ ಎಂದು ಕ್ಷಮೆ ಯಾಚಿಸಿರುವ ಬಗ್ಗೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಲು ಸೂಚಿಸಿದೆ.

‘ಲಲಿತ್ ಮೋದಿ ಕಾನೂನಿಗಿಂತ ಮೇಲಲ್ಲ. ಇಂತಹ ನ್ಯಾಯಾಂಗ ನಿಂದನೆ ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ನೇತೃತ್ವದ ನ್ಯಾಯಪೀಠವು ಎಚ್ಚರಿಸಿದೆ.

“ಅವರು ಸಲ್ಲಿಸಿದ ಅಫಿಡವಿಟ್ ಗಮನಿಸಿದ್ದೇವೆ. ಅವರು ಕೊಟ್ಟಿರುವ ವಿವರಣೆಯಿಂದ ನಮಗೆ ತೃಪ್ತಿಯಾಗಿಲ್ಲ. ಸ್ಪಷ್ಟನೆಯೂ ಸಹ ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತರುತ್ತದೆ ಎನ್ನುವುದು ನಮ್ಮ ದೃಷ್ಟಿಕೋನ. ವಕೀಲ ಸಿಂಘ್ವಿ ಅವರು ಎಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಪ್ರಮುಖ ದಿನಪತ್ರಿಕೆಗಳಲ್ಲಿ ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ ಹಾಗೂ ಕೋಲ್ಕತ್ತಾದ ಆವೃತ್ತಿಗಳಲ್ಲಿ ಭೇಷರತ್ ಕ್ಷಮೆ ಯಾಚಿಸಲಾಗುವುದು ಎಂದು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ” ಎಂದು ಪೀಠ ಹೇಳಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಪೀಠ ಏಪ್ರಿಲ್ 24ಕ್ಕೆ ಮುಂದೂಡಿದೆ.

ಲಲಿತ್ ಮೋದಿ ವಿರುದ್ಧ ಸಿಯು ಸಿಂಗ್ ಅವರು ಪ್ರಕರಣ ದಾಖಲಿಸಿದ್ದರು. “ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ಗಳಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಹೊಂದಿರುವ ಲಲಿತ್ ಮೋದಿ 2023 ಮಾರ್ಚ್ 30ರಂದು ಮಾಡಿದ ಟ್ವೀಟ್‌ನಲ್ಲಿ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಾರೆ. ನಂತರ ನ್ಯಾಯಾಂಗದ ಶಿಕ್ಷೆ ತಪ್ಪಿಸಿಕೊಳ್ಳಲು ನೆಪ ಮಾತ್ರಕ್ಕೆ ಕ್ಷಮೆಯಾಚಿಸಿದ್ದಾರೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಸಿಯು ಸಿಂಗ್ ಪರವಾಗಿ ಹಿರಿಯ ವಕೀಲ ರಣ್‌ಜೀತ್ ಕುಮಾರ್ ವಾದ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಮುಸ್ಲಿಂ ಮೀಸಲಾತಿ ರದ್ದು ತೀರ್ಮಾನ ತೀರ ಕಳಪೆ, ದೋಷಪೂರಿತ ನಿರ್ಧಾರ ಎಂದ ಸುಪ್ರೀಂ ಕೋರ್ಟ್

ಹಿರಿಯ ವಕೀಲ ಎ ಎಂ ಸಿಂಘ್ವಿ ಅವರು ಲಲಿತ್ ಮೋದಿ ಪರ ವಾದ ಮಂಡಿಸುತ್ತಲೇ ನ್ಯಾಯಪೀಠ ತೀವ್ರ ತರಾಟೆಗೆ ತೆಗೆದುಕೊಂಡು, “ನ್ಯಾಯಾಧೀಶರು ಇಂತಹವರ ಪಾಕೆಟ್‌ನಲ್ಲಿದ್ದಾರೆ ಎನ್ನುವ ಹೇಳಿಕೆಯ ಅರ್ಥವೇನು? ನ್ಯಾಯಾಂಗ ಅಷ್ಟು ದುರ್ಬಲ ಎಂದು ಅವರು ಅಂದುಕೊಂಡಿದ್ದಾರೆಯೆ? ನ್ಯಾಯಾಲಯಕ್ಕೆ ಕ್ಷಮೆ ಕೇಳಿರುವುದು ಎಲ್ಲಿದೆ? ಮೊದಲಿಗೆ ನೀವು ಬೇಷರತ್ ಕ್ಷಮೆ ಯಾಚಿಸಿ. ಇಲ್ಲದಿದ್ದರೆ ನ್ಯಾಯಾಂಗ ನಿಂದನೆಯಾಗಲಿದೆ. ಕ್ಷಮೆಯನ್ನು ಸಾರ್ವಜನಿಕವಾಗಿ ಮುಂದಿಡಬೇಕು. ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆಯಿದೆ ಎಂದು ಅವರು ಹೇಳಬೇಕು” ಎಂದು ಛೀಮಾರಿ ಹಾಕಿದೆ.

“ನ್ಯಾಯಾಲಯಕ್ಕೆ ಕಾಗದದಲ್ಲಿ ಕ್ಷಮೆ ಯಾಚಿಸಿದರೆ ಒಪ್ಪಿಕೊಳ್ಳುವುದಿಲ್ಲ. ಸಾರ್ವಜನಿಕವಾಗಿ ಅಂತಹ ಹೇಳಿಕೆ ನೀಡಿದ್ದರೆ, ಕ್ಷಮೆಯೂ ಸಾರ್ವಜನಿಕವಾಗಿಯೇ ಕೇಳಬೇಕು. ಯಾರು ಬೇಕಾದರೂ ನ್ಯಾಯಾಂಗದ ಮೇಲೆ ಆರೋಪ ಹೊರಿಸಬಹುದು ಎಂದುಕೊಂಡಿದ್ದಾರೆ, ನಾವು ಅದನ್ನು ಸಹಿಸುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಾಲಯದ ಆದೇಶವನ್ನು ‘ಸ್ಪಷ್ಟವಾಗಿ’ ಕೇಳಿರುವುದಾಗಿ ಸಿಂಘ್ವಿ ಹೇಳಿದ್ದಾರೆ. ಆದೇಶಿಸಿದ ರೀತಿಯಲ್ಲಿಯೇ ಕ್ಷಮೆ ಯಾಚನೆಯ ಭರವಸೆಯನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ.

“ಲಲಿತ್ ಮೋದಿ ಏನನ್ನು ಬೇಕಾದರೂ ಖರೀದಿಸಬಹುದು ಎಂದು ಅಂದುಕೊಂಡಿರುವಂತಿದೆ. ಆದರೆ ಕಾನೂನು ಮತ್ತು ನ್ಯಾಯವ್ಯವಸ್ಥೆಗಿಂತ ಅವರು ಮೇಲಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X