ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

Date:

Advertisements

ಮಹಾರಾಷ್ಟ್ರದ ಸೋಲಾಪುರದಲ್ಲಿ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಫೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಗ್ಗೆ 9.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ‌ ಡಾ. ಉಮೇಶ್ ಜಾಧವ, ಶಾಸಕರಾದ ಬಸವರಾಜ ಮತ್ತಿಮೂಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕಲಬುರಗಿ‌ ಮಹಾನಗರ ಪಾಲಿಕೆಯ ಮಹಾಪೌರರಾದ ವಿಶಾಲ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಛ ನೀಡಿ ಪ್ರಧಾನಮಂತ್ರಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ ಗುತ್ತೇದಾರ, ಮಾಲಿಕಯ್ಯ ಗುತ್ತೇದಾರ, ಅಮರನಾಥ ಪಾಟೀಲ, ಬಿ.ಜೆ‌.ಪಿ. ಪಕ್ಷದ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಇದ್ದರು. ನಂತರ ಪ್ರಧಾನಮಂತ್ರಿಗಳು ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.

Advertisements

ಇಂದು ಮಧ್ಯಾಹ್ನ 2.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X