ದಕ್ಷಿಣ ಕನ್ನಡ | ಹಾಲು ಉತ್ಪಾದನೆಯಲ್ಲಿ ತೀವ್ರ ಕುಸಿತ; ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಳ

Date:

Advertisements

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವಾಗಿರುವ ನಂದಿನಿಗೆ ಒಳಪಡುವ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಹಾಲು ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ ಎಂದು ಒಕ್ಕೂಟದ ಎಂಡಿ ವಿವೇಕ ಡಿ. ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕುಲಶೇಖರದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

“ಉಭಯ ಜಿಲ್ಲೆಗಳಲ್ಲಿನ ಹಾಲು ಹಾಗೂ ಹಾಲಿನ ಉತ್ಪಾದನೆಗಳಿಗಾಗಿ ಬೇಡಿಕೆ ಪೂರೈಸಲು ಸದ್ಯ ಹೊರ ಜಿಲ್ಲೆಗಳನ್ನು ಅವಲಂಬಿಸಲಾಗುತ್ತಿದೆ. ಈ ಅವಲಂಬನೆಯನ್ನು ತಪ್ಪಿಸಿ, ಸ್ಥಳೀಯ ಹೈನುಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಹಲವು ತಂತ್ರಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ” ಎಂದರು.

Advertisements

“ಮಿಶ್ರ ಕರು ತಳಿ ಯೋಜನೆ ಮೂಲಕ ಹಸು ಖರೀದಿದಾರರಿಗೆ ಸುಮಾರು ₹3,500ರಷ್ಟು ಸಹಾಯಧನ, ಒಂದು ಎಕರೆ ಪ್ರದೇಶದಲ್ಲಿ ಹಸಿರು ಹುಲ್ಲು ಬೆಳೆಯುವವರಿಗೆ ₹20,000 ಸಬ್ಸಿಡಿ, ಎರಡ್ಮೂರು ಹಸುಗಳನ್ನು ಸಾಕುವವರಿಗೆ, ಮತ್ತಷ್ಟು ಹೆಚ್ಚುವರಿ ಹಸು ಸಾಕಲು ಸಬ್ಸಿಡಿ ಜತೆಗೆ ಬೇಸಿಗೆಯಲ್ಲಿ ಪಶು ಆಹಾರವಾದ ಸೈಲೇಜ್ (ಹಸಿ ಜೋಳವನ್ನು ಹಸಿರು ಎಲೆಗಳೊಂದಿಗೆ ಕತ್ತರಿಸಿ ತಯಾರಿಸುವ ಪಶು ಆಹಾರ) ಖರೀದಿಗೆ ಒಕ್ಕೂಟ ಯೋಜನೆ ರೂಪಿಸುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸ್ವಚ್ಛತೆಗೆ ಆದ್ಯತೆ ನೀಡಿ: ಎನ್‌ಜಿಟಿ ಅಧ್ಯಕ್ಷ

“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯುವಜನರು ಹೈನುಗಾರಿಕೆಯಲ್ಲಿ ನಿರಾಸಕ್ತಿ ಹೊಂದಿರುವುದೇ, ಹಾಲಿನ ಉತ್ಪನ್ನಗಳ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X