ಮೈಸೂರು | ಹುಲಿ ಪತ್ತೆಗೆ ನಿರಂತರ ಕಾರ್ಯಾಚರಣೆ; ಒತ್ತಡಕ್ಕೆ ಸಿಲುಕಿದ ಅರಣ್ಯ ಸಿಬ್ಬಂದಿ

Date:

Advertisements

ಮೈಸೂರು ಮತ್ತು ಮಂಡ್ಯದಲ್ಲಿ ಆನೆಗಳು, ಚಿರತೆಗಳು ಮತ್ತು ಹುಲಿಗಳ ಹಾವಳಿ ಹೆಚ್ಚಾಗಿದೆ. ಮಾನವ-ಪ್ರಾಣಿ ಸಂಘರ್ಷವನ್ನು ತಡೆಯಲು ಕಳೆದ ಎರಡು ತಿಂಗಳಲ್ಲಿ ನಡೆದ ಪ್ರಾಣಿಗಳ ರಕ್ಷಣಾ ಕಾರ್ಯಾಚರಣೆಯಿಂದಾಗಿ ಅರಣ್ಯ ಅಧಿಕಾರಿಗಳು ಸವಾಲಿನ ಪರಿಸ್ಥಿತಿ ಎದುರಿಸಿದ್ದಾರೆ.

ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಮಾಧ್ಯಗಳಿಗೆ ಮಾತನಾಡಿ, “ಆನೆ ಕಾರ್ಯಪಡೆ ಮತ್ತು ಚಿರತೆ ಕಾರ್ಯಪಡೆಯ ಸಿಬ್ಬಂದಿ ಮತ್ತು ಸ್ಥಳೀಯ ಅರಣ್ಯ ಅಧಿಕಾರಿಗಳು ದಣಿದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವ ಆವಾಸಸ್ಥಾನಗಳ ಬಳಿ ಕಂಡುಬರುವ ಕಾಡು ಪ್ರಾಣಿಗಳಿಂದ ನಿವಾಸಿಗಳನ್ನು ರಕ್ಷಿಸಲು ಇಲಾಖೆ ತರಬೇತಿಯ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಚಿರತೆ ಮತ್ತು ಆನೆ ಕಾರ್ಯಾಪಡೆಗಳಲ್ಲಿ ಸಹಾಯಕ ಸಿಬ್ಬಂದಿ ಸೇರಿದಂತೆ ಸುಮಾರು 100 ಮಂದಿ ಸಿಬ್ಬಂದಿ ಇದ್ದಾರೆ. ಅವರೆಲ್ಲರೂ ಸವಾಲುಗಳ ನಡುವೆಯೂ ತೀವ್ರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸಂಘರ್ಷದ ಪ್ರದೇಶಗಳಲ್ಲಿ ಹಗಲಿರುಳು ಅನೇಕ ದಿನಗಳ ಕಾಲ ಉಳಿಯುವ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. ಇದೆಲ್ಲವೂ ಕಾಡು ಪ್ರಾಣಿಗಳನ್ನು ರಕ್ಷಣೆ ಮತ್ತು ಮಾನವ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಸಿಬ್ಬಂದಿಗಳು ತಮ್ಮ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

“ಮೈಸೂರು ಹೊರವಲಯದ ಬ್ಯಾತಹಳ್ಳಿಯಲ್ಲಿ ಟಿ-7 ಎಂಬ ಹುಲಿ ಪತ್ತೆಯಾದ ಒಂದು ತಿಂಗಳ ಕಾರ್ಯಾಚರಣೆಯ ನಂತರ, ಸಿಬ್ಬಂದಿ ನವೆಂಬರ್ ಕೊನೆಯ ವಾರದಿಂದ ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಕಳೆದರು. ಈಗ ಶ್ರೀರಂಗಪಟ್ಟಣದ ಬಳಿ ಮತ್ತೊಂದು ಹುಲಿ ಪತ್ತೆಯಾಗಿದೆ” ಎಂದರು.

“ಮಾನವ ಆವಾಸಸ್ಥಾನಗಳ ಬಳಿ ಚಿರತೆಗಳು, ಹುಲಿಗಳು ಮತ್ತು ಆನೆಗಳನ್ನು ನೋಡುವುದು ಗ್ರಾಮಸ್ಥರನ್ನು ಮಾತ್ರವಲ್ಲದೆ ಅರಣ್ಯ ಸಿಬ್ಬಂದಿಯನ್ನೂ ಕಾಡುತ್ತದೆ. ಏಕೆಂದರೆ ಕಾರ್ಯಾಚರಣೆ ವಿಳಂಬವಾದರೆ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುತ್ತದೆ. ಹಾಗಾಗಿ ಇಡೀ ತಂಡದ ಬೆಂಬಲದೊಂದಿಗೆ ನಾವು ಇತ್ತೀಚಿನ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತಿದ್ದೇವೆ” ಎಂದು ಮಾಲತಿ ಹೇಳಿದರು.

“ಮಂಡ್ಯದ ಶ್ರೀರಂಗಪಟ್ಟಣದ ಬಳಿ ಹುಲಿ ಕಾಣಿಸಿಕೊಂಡ ಎರಡು ದಿನಗಳ ಬಳಿಕ, ಹುಲಿಯನ್ನು ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಸೆರೆಹಿಡಿಯಲಾಗಿದೆ. ಆ ಹುಲಿ ಟಿ-9 ಎಂಬ ಸುಮಾರು ಎರಡೂವರೆ ವರ್ಷದ ಹುಲಿಯಾಗಿದೆ” ಎಂದು ಮಾಲತಿ ದೃಢಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆದ್ದಾರಿ ಬದಿ ತ್ಯಾಜ್ಯಕ್ಕೆ ಬೆಂಕಿ; ಸಾಲು ಮರಗಳಿಗೆ ಕಂಟಕ

“ಮಂಗಳವಾರ ಚನ್ನಹಳ್ಳಿ ಬಳಿ ಹುಲಿ ಕಾಣಿಸಿಕೊಂಡಿತ್ತು. ಈ ಹುಲಿಯನ್ನು ಬಲೆಗೆ ಬೀಳಿಸಲು ನಾವು ನಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ತುಮಕೂರು ಪಂಜರವನ್ನು ಸ್ಥಾಪಿಸಲಾಗುತ್ತಿದ್ದು, ಹುಲಿಯನ್ನು ಬಲೆಗೆ ಬೀಳಿಸಲು ಬಲೆಗಳನ್ನು ಬಳಸಲಾಗುವುದು” ಎಂದು ಅವರು ಹೇಳಿದರು.

“ಹುಲಿಯ ಚಲನೆಯನ್ನು ಗಮನಿಸಲು ಥರ್ಮಲ್ ಡ್ರೋನ್ ಬಳಸಲಾಗುತ್ತಿದೆ. ಇದರಿಂದ ಅದು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡುತ್ತದೆ. ಗೆಂಡೆಹೊಸಹಳ್ಳಿ, ಬಿದರಹಳ್ಳಿಹುಂಡಿ, ಮಹದೇವಪುರ, ಚನ್ನಹಳ್ಳಿ ಗ್ರಾಮಸ್ಥರಿಗೆ ಹುಲಿ ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಹುಲಿಯ ಗುರುತುಗಳು ಪತ್ತೆಯಾದ ಬಳಿಕ ಅಪಾಯವನ್ನು ತಪ್ಪಿಸಲು ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ” ಎಂದು ಸಿಎಫ್ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X