ಅಸ್ಸಾಂನಲ್ಲಿ ‘ನ್ಯಾಯ್‌ ಯಾತ್ರೆ’ | ಕೆಲವೇ ಮೀಟರ್ ಮಾರ್ಗ ಬದಲಿಸಿದ್ದಕ್ಕೆ ರಾಹುಲ್‌ ವಿರುದ್ಧ ಎಫ್‌ಐಆರ್‌

Date:

Advertisements

ಅಸ್ಸಾಂನಲ್ಲಿ ಸಾಗಿದ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯು ಅನುಮತಿಸಲಾಗಿದ್ದ ಮಾರ್ಗದಲ್ಲಿ ತೆರಳದೆ, ಬೇರೆ ಮಾರ್ಗದಲ್ಲಿ ತೆರಳಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಕೆ.ಬಿ ಬೈಜು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅಸ್ಸಾಂನ ಜೋರ್ಹತ್ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಯಾತ್ರೆಯು ಜೋಹರ್ತ್‌ ಜಿಲ್ಲಾಡಳಿತ ಸೂಚಿಸಿದ್ದ ನಿಯಮಗಳನ್ನು ಅನುಸರಿಸಿಲ್ಲ. ರಸ್ತೆ ಸುರಕ್ಷತಾ ನಿಮಯಗಳನ್ನು ಪಾಲಿಸಿಲ್ಲ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಯಾತ್ರೆಯಲ್ಲಿ ಅಸ್ಸಾಂ ಜನರನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ‘ಅಸ್ಸಾಂ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ’ ಎಂದಿದ್ದರು. ಇದರಿಂದಾಗಿ, ರಾಹುಲ್‌ ಗಾಂಧಿ ಮತ್ತು ರಾಜ್ಯದಲ್ಲಿ ಯಾತ್ರೆಯಲ್ಲಿ ಸಂಘಟಿಸಿದ್ದ ಬೈಜು ವಿರುದ್ಧ ಬಿಜೆಪಿ ಸರ್ಕಾರ ಪ್ರಕರಣ ದಾಖಲಿಸಿದೆ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

Advertisements

ಪ್ರಕರಣ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ದೇಬಬ್ರತ ಸೈಕಿಯಾ, “ಯಾತ್ರೆಯ ಯಶಸ್ಸಿನಿಂದ ಬಿಜೆಪಿ ವಿಚಲಿತವಾಗಿದೆ. ಹೀಗಾಗಿಯೇ, ಈ ಎಫ್‌ಐಆರ್ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಪಿಡಬ್ಲ್ಯುಡಿ ಪಾಯಿಂಟ್‌ನಲ್ಲಿ ‘ಟ್ರಾಫಿಕ್ ಡೈವರ್ಶನ್’ಅನ್ನು ನಿರ್ವಹಿಸುವ ಪೊಲೀಸರು ಇರಲಿಲ್ಲ. ನಿಯೋಜಿತ ಮಾರ್ಗವು ತುಂಬಾ ಚಿಕ್ಕದಾಗಿತ್ತು. ನಾವು ದೊಡ್ಡ ಜನಸಮೂಹ ಹೊಂದಿದ್ದೆವು. ಆದ್ದರಿಂದ, ನಾವು ಕೆಲವೇ ಮೀಟರ್‌ಗಳವರೆಗೆ ಬೇರೆ ಮಾರ್ಗದಲ್ಲಿ ಹೋದೆವು. ಅಸ್ಸಾಂನಲ್ಲಿ ಮೊದಲ ದಿನದ ಯಾತ್ರೆಯ ಯಶಸ್ಸಿನಿಂದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಯಭೀತರಾಗಿದ್ದಾರೆ. ನಮ್ಮ ಯಾತ್ರೆಯ ದಿಕ್ಕು ತಪ್ಪಿಸಲು ಅವರು ಬಯಸಿದ್ದಾರೆ” ಎಂದು ಸೈಕಿಯಾ ಹೇಳಿದ್ದಾರೆ.

ಅಸ್ಸಾಂನಲ್ಲಿ ನಡೆದ ಮೊದಲ ದಿನದ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಅಸ್ಸಾಂನ ಬಿಜೆಪಿ ಸರ್ಕಾರವು ಬಹುಶಃ ಭಾರತದ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಯಾತ್ರೆಯಲ್ಲಿ ನಾವು ಅಸ್ಸಾಂನ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತೇವೆ” ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ?: ರಾಹುಲ್‌ ಗಾಂಧಿಯಿಂದ ‘ನ್ಯಾಯ’ದ ನಿರೀಕ್ಷೆಯಲ್ಲಿ ಅಸ್ಸಾಂ ಕಾಂಗ್ರೆಸ್‌ನಿಂದ ಅಮಾನತಾದ ನಾಯಕಿ

ರಾಹುಲ್‌ ಹೇಳಿಕೆ ವಿರುದ್ಧ ಪ್ರತ್ಯಾರೋಪ ಮಾಡಿದ್ದ ಮುಖ್ಯಮಂತ್ರಿ ಶರ್ಮಾ, “ಗಾಂಧಿ ಕುಟುಂಬವೇ ಅತ್ಯಂತ ಭ್ರಷ್ಟ ಕುಟುಂಬವಾಗಿದೆ. ಅವರ ಯಾತ್ರೆಯು ಅಸ್ಸಾಂನಲ್ಲಿ ವಾಸಿಸುವ ಬಂಗಾಲಿ ಮುಸ್ಲಿಮರಾದಿ ‘ಮಿಯಾಸ್‌’ಗಳಿಗಾಗಿ ಮಾತ್ರ. ಇದು ‘ನ್ಯಾಯ್ ಯಾತ್ರೆ’ಯಲ್ಲ, ‘ಮಿಯಾ ಯಾತ್ರೆ’. ಎಲ್ಲೆಲ್ಲಿ ಮುಸ್ಲಿಮರು ಇರುತ್ತಾರೋ ಆ ಸ್ಥಳಗಳಿಗೆ ಭೇಟಿ ನೀಡುತ್ತಾರೆ” ಎಂದು ಹೇಳಿದ್ದರು.

2024ರ ಲೋಕಸಭಾ ಚುನಾವಣೆಗೂ ಮುನ್ನ ರಾಹುಲ್‌ ಗಾಂಧಿ ಅವರುಭಾರತದ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯನ್ನು ನಡೆಸುತ್ತಿದ್ದಾರೆ. ಸುಮಾರು 6,700 ಕಿ.ಮೀ ದೂರ ಯಾತ್ರೆ ಕ್ರಮಿಸಲಿದೆ. ಯಾತ್ರೆಯು ಜನವರಿ 14ರಂದು ಮಣಿಪುರದ ತೌಬಲ್‌ನಲ್ಲಿ ಪ್ರಾರಂಭವಾಗಿದೆ. ಮಾರ್ಚ್ 20 ಅಥವಾ 21ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಯಾತ್ರೆ ಕೊನೆಗೊಳ್ಳಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X