ರಾಯಚೂರು | ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು; ಕಾಂಗ್ರೆಸ್‌ ವಿರುದ್ಧ ಆರೋಪ

Date:

Advertisements

ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ರಾಜಕೀಯ ಲಾಭ ಪಡೆದು ಘೋರ ಅನ್ಯಾಯ ಮಾಡಲು ಹೊರಟಿದೆ ಎಂದು ಮಾದಿಗ ಸಮಾಜದ ಹಿರಿಯ ಮುಖಂಡ ಎಂ ವಿರೂಪಾಕ್ಷಿ ಆರೋಪಿಸಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಹಿಂದಿನ ಸರ್ಕಾರದ ಅವಧಿಯಲ್ಲಿ ಸಚಿವ ಸಂಪುಟ ಉಪಸಮಿತಿ ಮಾಧುಸ್ವಾಮಿ ನೇತೃತ್ವದಲ್ಲಿ ಕೇಂದ್ರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ವರದಿಯನ್ನು ಅಂಗೀಕರಿಸದೆ ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಮಾತ್ರ ಶಿಫಾರಸು ಮಾಡಿದೆ. ಆದರೆ ಈಗಾಗಲೇ ಸುಪ್ರಿಂಕೋರ್ಟಿನಲ್ಲಿ ಏಳು ನ್ಯಾಯಾಧೀಶರ ಪೀಠ ರಚಿಸಲಾಗಿದೆ. ಇದೇ ತಿಂಗಳಲ್ಲಿ ವಿಚಾರಣೆ ಪ್ರಾರಂಭವಾಗಲಿದೆ. ಕಾನೂನಾತ್ಮಕ ಸಮಸ್ಯೆಗಳು ಗೊತ್ತಿದ್ದರೂ, ನೆಪ ಮಾತ್ರಕ್ಕೆ ಶಿಫಾರಸು ಮಾಡಿದೆ” ಎಂದರು.

“2008ರಲ್ಲಿಯೇ ನ್ಯಾಯಮೂರ್ತಿ ಉಷಾ ಮೆಹರ್ ವರದಿಯಂತೆ 341 ತಿದ್ದುಪಡಿಗೆ ಶಿಫಾರಸು ಮಾಡಿದೆ. ಆದರೂ ರಾಜ್ಯ ಸರ್ಕಾರ ಮತ್ತೊಮ್ಮೆ ತಿದ್ದುಪಡಿ ಶಿಫಾರಸು ಮಾಡಿ ಗೊಂದಲ ಸೃಷ್ಟಿಸಲು ಹೊರಟಿದೆ. ಈ ಹಿಂದೆ ಬಾದಾಯಲ್ಲಿ ʼನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಅವೈಜ್ಞಾನಿಕವಾಗಿದೆ. ಅದಕ್ಕಾಗಿ ಜಾರಿಗೊಳಿಸಿಲ್ಲʼವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿದ್ದರು. ಕೇಂದ್ರ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ಆತಂಕದಿಂದ ಚರ್ಚೆ ಮಾಡದೇ ಕೇಂದ್ರಕ್ಕೆ ಶಿಫಾರಸು ಮಾಡಿರುವುದಾಗಿ ಹೇಳುತ್ತಿದೆ. ಭೋವಿ, ಬಂಜಾರ, ಕೊರವ, ಕೊರಚ ಸಮೂದಾಯಗಳನ್ನು ಹಾಗೇ ಉಳಿಸಿಕೊಂಡು ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಹೇಳುತ್ತಿದೆ” ಎಂದರು.

Advertisements

“ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗ ವರದಿಯಂತೆ ಶೇ.17 ರಷ್ಟು ಎಸ್‌ಸಿ ಹಾಗೂ ಶೇ.7 ರಷ್ಟು ಎಸ್‌ಟಿಗಳಿಗೆ ಮೀಸಲಾತಿ ಒದಗಿಸಲು ಶಿಫಾರಸು ಮಾಡಿದೆ. ಆದರೆ ರಾಜ್ಯದ ಸರ್ಕಾರ ಸಚಿವ ಸಂಪುಟದಲ್ಲಿ 341 ತಿದ್ದುಪಡಿ ಮಾಡಲು ಶಿಫಾರಸು ಎಂದಷ್ಟೇ ಹೇಳುತ್ತಿದೆ. ಸಮೂದಾಯದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಕೆಲ ಸಮಾಜ ಮುಖಂಡರುಗಳ ಕಾಂಗ್ರೆಸ್ ಗೊಂದಲ ಒಳಮರ್ಮ ಅರಿಯಬೇಕಿದೆ. ಚರ್ಚೆಗೆ ಬಂದರೆ ಚರ್ಚಿಸಲು ಸಿದ್ದ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಪರಿಶಿಷ್ಟರ ಮೇಲೆ ನಿಲ್ಲದ ಶೋಷಣೆ; ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳು ದಾಖಲು

ಈ ಸಂದರ್ಬದಲ್ಲಿ ರವೀಂದ್ರ ಜಲ್ದಾರ, ಸುಭಾಷ ಅಸ್ಕಿಹಾಳ, ಭೀಮಯ್ಯ ಮಂಚಾಲ ,ಶಂಶಾಲ, ಎನ್ ಕೆ ನಾಗರಾಜ, ಆರ್ ಅಂಜಿನೇಯ, ಚಂದ್ರು ಭಂಡಾರಿ, ರಾಘವೇಂದ್ರ ಬೋರೆಡ್ಡಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X