ಚಿತ್ರದುರ್ಗ | ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಕೃಷಿ ಇಲಾಖೆ ನೌಕರ ಸಾವು

Date:

Advertisements

ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ.

ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್ (28) ಮೃತ ದುರ್ದೈವಿ. ಇವರು ಹೊಳಲ್ಕೆರೆಯ ಕೃಷಿ ಇಲಾಖೆಯಲ್ಲಿ ಟೆಕ್ನಿಕಲ್‌ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭಾನುವಾರ ಇವರ ಎಂಗೇಜ್ಮೆಂಟ್ ಕಾರ್ಯವಿತ್ತು. ಇಂದು ಶನಿವಾರದ ನಿಮಿತ್ತ ಹೊಳಲ್ಕೆರೆ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಚಿತ್ರದುರ್ಗದ ತಿರುಮಲ ಡಾಬಾದ ಬಳಿ ಬರುತ್ತಿದ್ದಂತೆ ಕಾರು ಮತ್ತು ಲಾರಿ ಮಧ್ಯೆ ಭೀಕರವಾದ ಅಪಘಾತ ಸಂಭವಿಸಿದೆ. ಪರಿಣಾಮ ವಿಶಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜ 25ರವರೆಗೆ ರೂಟ್ ಮಾರ್ಚ್

Advertisements

ಅಪಘಾತದಿಂದ ಲಾರಿ ನೆಲಕ್ಕೆ ಉರುಳಿ ಬಿದ್ದಿದ್ದರೇ, ಕಾರು ಕೆಲಸಕ್ಕೆ ಬಾರದ ರೀತಿ ಫುಲ್ ಜಖಂ ಆಗಿದೆ. ವಿಶಾಲ್​ಗೆ ಶಿವಮೊಗ್ಗದ ಸಾಗರ ಮೂಲದ ಯುವತಿಯೊಂದಿಗೆ ನಾಳೆ ಎಂಗೇಜ್ಮೆಂಟ್ ನಡೆಯಬೇಕಿತ್ತು. ಖುಷಿಯಲ್ಲಿ ಇರುವಾಗಲೇ ದುರ್ಘಟನೆ ಸಂಭವಿಸಿದೆ. ಇದು ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X