ವಿಜಯಪುರ | ಬಸವಣ್ಣ ʼಸಾಂಸ್ಕೃತಿಕ ನಾಯಕʼನೆಂಬ ಘೋಷಣೆ ಸ್ವಾಗತಾರ್ಹ: ರವಿಕುಮಾರ ಬಿರಾದಾರ

Date:

Advertisements

12ನೇ ಶತಮಾನದಲ್ಲೇ ಈ ನೆಲದಲ್ಲಿ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಬಸವ ಸೇನೆಯ ವಿಜಯಪುರ ಜಿಲ್ಲಾಧ್ಯಕ್ಷ ಡಾ ರವಿಕುಮಾರ ಬಿರಾದಾರ ಹೇಳಿದರು.

ಪತ್ರಿಕಾ ಪ್ರಕಟಣೆ ಬಿಡಗುಡೆ ಮಾಡಿರುವ ಅವರು, “ಸ್ತ್ರೀ ಸ್ವಾತಂತ್ರ್ಯ, ಜಾತಿ ಪದ್ಧತಿ ಹೋಗಲಾಡಿಸುವುದು, ಸಮಸಮಾಜದ ಕನಸು ಸೇರಿದಂತೆ ವಿಶ್ವಕ್ಕೆ ಮೊದಲ ಪ್ರಜಾಪ್ರಭುತ್ವ ಕೊಟ್ಟ ಹೆಮ್ಮೆ ನಮ್ಮ ಬಸವಣ್ಣನವರದ್ದು. ವಚನ ಸಾಹಿತ್ಯದ ಮೂಲಕ ರಾಜಕೀಯ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಸಮಾನತೆಯನ್ನು ಕಟ್ಟಕಡೆಯ ಮನುಷ್ಯನಿಗೂ ತಲುಪಿಸಿದ್ದು ಅಪ್ಪ ಬಸವಣ್ಣನವರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ: ಗೌತಮ್ ರೆಡ್ಡಿ

Advertisements

“ಸೂಳೆಯನ್ನು ಶರಣೆಯನ್ನಾಗಿ ಮಾಡಿದ್ದು, ಅಸ್ಪೃಶ್ಯರಿಗೆ ಕೈಗೆಟುಕದ ಗುಡಿಯಲ್ಲಿದ್ದ ದೇವರನ್ನು ಇಷ್ಟಲಿಂಗದ ಮೂಲಕ ಅಂಗೈಗೆ ತಂದಿಟ್ಟ ಮಹಾತ್ಮ ಬಸವಣ್ಣನವರು. ಬಸವಮಾರ್ಗದಲ್ಲಿ ರಾಜ್ಯವನ್ನು ಆಳುತ್ತಿರುವ ಸಿದ್ದರಾಮಯ್ಯನವರು ಈ ಘೋಷಣೆ ಮಾಡಿದ್ದು, ಇಡೀ ಕನ್ನಡಿಗರಿಗೆ ಹೆಮ್ಮೆ ಹಾಗೂ ಗೌರವ ತಂದು ಕೊಟ್ಟಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X