ರಾಯಚೂರು | ವಿಶೇಷ ವರ್ಗವರನ್ನು ಗುರುತಿಸಿ ನಿವೇಶನ ನೀಡಲು ಒತ್ತಾಯಿಸಿ ಪ್ರತಿಭಟನೆ

Date:

Advertisements

ಹದಿನಾಲ್ಕು ವಿಶೇಷ ವರ್ಗದಲ್ಲಿ ಬರುವ ವಿಧವೆಯರು, ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರನ್ನು ಸಮೀಕ್ಷೆ ಮಾಡಿ, ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ನಗರದ ಸರ್ವೆ ನಂ. 1403, 1553, 802, 928 ಮತ್ತು ಇತರೇ ಸರ್ಕಾರಿ ಭೂಮಿ ಗುರುತಿಸಿ ವಸತಿಹೀನರಿಗೆ ನಿವೇಶನ ಮಂಜೂರು ಮಾಡಬೇಕು. ವಿಶೇಷ ವರ್ಗದಲ್ಲಿ ಬರುವವರು ತೀರಾ ಆರ್ಥಿಕವಾಗಿ ಹಿಂದುಳಿದಿದ್ದು, ಸ್ವಂತ ನಿವೇಶನ ಖರೀದಿ ಮಾಡಲು ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಸಮೀಕ್ಷೆ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಗರದಲ್ಲಿ ವಿಶೇಷ ವರ್ಗದಲ್ಲಿ ಬರುವವರು ಸುಮಾರು ಹತ್ತು ಸಾವಿರಕ್ಕೂ ಅಧಿಕ ಮಂದಿ ಇದ್ದು, ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಪ್ರತೀ ತಿಂಗಳು ಮನೆ ಬಾಡಿಗೆ ಕಟ್ಟಲು ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷ ವರ್ಗದವರ ಸಮೀಕ್ಷೆ ಮಾಡುವಂತೆ ಹಲವು ಭಾರಿ ಮನವಿ ಸಲ್ಲಿಸಿದರೂ ಸ್ಪಂಧಿಸಿಲ್ಲ ಎಂದು ದೂರಿದರು.

Advertisements

ಕೂಡಲೇ ವಿಶೇಷ ವರ್ಗದಲ್ಲಿ ಬರುವ ವಿಧವೆಯರು, ಬೀದಿ ವ್ಯಾಪಾರಿಗಳು, ಅಂಗವಿಕಲರ ಸಮೀಕ್ಷೆ ನಡೆಸಿ ನಿವೇಶನ ಇಲ್ಲದವರಿಗೆ ನಿವೇಶನ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಕಾರ್ಯದರ್ಶಿ ನೂರ್‌ಜಾನ್, ಮಾಧವರೆಡ್ಡಿ, ನಾಗರಾಜ, ವೆಂಕಟೇಶ ಭಂಡಾರಿ, ಜಿ.ರಾಜು, ಮಹೇಶ, ಹುಲಿಗೆಮ್ಮ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X