ರಜೆ ಘೋಷಿಸಿ ನಿರ್ಧಾರ ಬದಲಿಸಿದ ದೆಹಲಿಯ ಏಮ್ಸ್ ಆಸ್ಪತ್ರೆ

Date:

Advertisements

ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ ಆಸ್ಪತ್ರೆಯು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆಗಾಗಿ ಅರ್ಧ ದಿನ ರಜೆ ಘೋಷಿಸಿ ನಂತರ ತನ್ನ ನಿರ್ಧಾರ ಬದಲಿಸಿದೆ.

ಮೊದಲು ರಜೆ ಘೋಷಿಸಿದ್ದ ಆಸ್ಪತ್ರೆಯು ನಂತರ ತನ್ನ ನಿರ್ಧಾರ ಬದಲಿಸಿ ಪ್ರಕಟಣೆ ಹೊರಡಿಸಿದೆ. ಅನಾನುಕೂಲತೆ ತಡೆಗಟ್ಟುವ ಸಲುವಾಗಿ ರೋಗಿಗಳ ಆರೈಕೆಯನ್ನು ಸಲುಭಗೊಳಿಸಲು ಜನವರಿ 22ರ ದಿನದಂದು ಪೂರ್ವಾನುಮತಿ ಹೊಂದಿರುವ ರೋಗಿಗಳಿಗಾಗಿ ಆಸ್ಪತ್ರೆಯ ಹೊರ ರೋಗಿಯ ವಿಭಾಗವು ತೆರೆದಿರುತ್ತದೆ. ಇದರ ಜೊತೆ ಎಲ್ಲ ತುರ್ತು ಚಿಕಿತ್ಸಾ ಸೇವಾ ಕೇಂದ್ರಗಳು ಕೂಡ ಕಾರ್ಯಾಚರಣೆ ನಡೆಸುತ್ತವೆ ಎಂದು ತಿಳಿಸಲಾಗಿದೆ.

ಈ ಮೊದಲು ದೆಹಲಿಯ ಏಮ್ಸ್ ಆಸ್ಪತ್ರೆಯು ತನ್ನ ಸುತ್ತೋಲೆಯಲ್ಲಿ ಸರ್ಕಾರ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಯ ದಿನದ ಅಂಗವಾಗಿ ಸರ್ಕಾರ ರಜೆ ಘೋಷಿಸಿದ ಹಿನ್ನೆಲೆ ಆಸ್ಪತ್ರೆ ಸೇವೆ ಸ್ಥಗಿತಗೊಳಿಸುವುದಾಗಿ ತಿಳಿಸಿತ್ತು. ಆದಾಗ್ಯೂ ತುರ್ತು ಚಿಕಿತ್ಸಾ ಸೇವಾ ಕೇಂದ್ರಗಳು ಕಾರ್ಯಾಚರಣೆ ನಡೆಸಲಿವೆ ಎಂದು ತಿಳಿಸಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಏಮ್ಸ್‌ನ ಅರ್ಧ ದಿನದ ರಜೆ ನಿರ್ಧಾರವನ್ಬು ಹಲವು ವಿರೋಧ ಪಕ್ಷದ ನಾಯಕರು ಟೀಕಿಸಿದ್ದರು, ಈ ನಿರ್ಧಾರದಿಂದಾಗಿ “ಆರೋಗ್ಯ ಸೇವೆಗಳು” ಅಸ್ತವ್ಯಸ್ತಗೊಳ್ಳುತ್ತವೆ ಎಂದು ಹೇಳಿದ್ದರು.

ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ, , “ಏಮ್ಸ್‌ ದಯವಿಟ್ಟು ಜನವರಿ 22 ರಂದು ವೈದ್ಯಕೀಯ ಸೇವೆ ರದ್ದುಗೊಳಿಸಿ ತುರ್ತುಸ್ಥಿತಿಯನ್ನು ತಂದೊಡ್ಡಬೇಡಿ. ನೀವು ಮಧ್ಯಾಹ್ನ 2 ಗಂಟೆಯ ಸೇವೆಯನ್ನು ನಿಗದಿಪಡಿಸಿದರೆ ಆರೋಗ್ಯ ಸೇವೆಗಳಿಗೆ ಅಡ್ಡಿಯಾಗುತ್ತದೆ. ಭಗವಂತ ಇದನ್ನು ಒಪ್ಪುವುದಿಲ್ಲ” ಎಂದು ಟೀಕಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರು ನಿರ್ಧಾರವನ್ನು ಕಟುವಾಗಿ ಟೀಕಿಸಿದರು, “ಜನರು ಪೂರ್ವಾನುಮತಿಗಾಗಿ ಕಾಯುತ್ತಿದ್ದು, ಏಮ್ಸ್ ದ್ವಾರಗಳಲ್ಲಿ ಚಳಿಯಲ್ಲಿ ಹೊರಗೆ ಮಲಗಿದ್ದಾರೆ. ಬಡವರು ಮತ್ತು ಸಾಯುತ್ತಿರುವವರು ಕಾಯಬಹುದು. ಏಕೆಂದರೆ ಕ್ಯಾಮೆರಾಗಳು ಮತ್ತು ಪಿಆರ್‌ಗಳು ಮೋದಿಯವರ ಹತಾಶೆಗೆ ಆದ್ಯತೆ ನೀಡಲಾಗುತ್ತದೆ” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಆಸ್ಪತ್ರೆ ಸೇವೆಗಳನ್ನು ಸ್ಥಗಿತಗೊಳಿಸುವುದೇ ! ಏನಿದು ತಮಾಷೆ ?

    ಕರ್ತವ್ಯ ಮುಖ್ಯವೋ ? ದೇವರು ಮುಖ್ಯವೋ ?

    ಮೊದಲು ನಿಮ್ಮ – ನಿಮ್ಮ ಕರ್ತವ್ಯವನ್ನು ಮಾಡಿ.

    ಆಮೇಲೆ ಏನು ಬೇಕಾದರೂ ಮಾಡಿ ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X