ಬೀದರ್‌ | ಅಂಬಿಗರ ಚೌಡಯ್ಯನವರ ಸಾಮಾಜಿಕ ಪ್ರಜ್ಞೆ ಸಮಾಜಕ್ಕೆ ಪ್ರಸ್ತುತ

Date:

Advertisements

ಬಸವಾದಿ ಕಾಲಘಟ್ಟದ ಶರಣ ಅಂಬಿಗರ ಚೌಡಯ್ಯನವರು ಸಮಾಜದಲ್ಲಿನ ಅನಾಚಾರ, ಅತ್ಯಾಚಾರ, ಡಂಭಾಚಾರವನ್ನು ನಿರ್ಭಯವಾಗಿ ಟೀಕಿಸಿ ವಚನ ಪರಂಪರೆಯ ಕೆಚ್ಚೆದೆ ಮೆರೆದವರು ಎಂದು ದಾಸ ಸಾಹಿತ್ಯ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಬಿ.ಎಂ ಅಮರವಾಡಿ ಅಭಿಪ್ರಾಯಪಟ್ಟರು.

ಔರಾದ ತಾಲೂಕು ಆಡಳಿತ ವತಿಯಿಂದ ಭಾನುವಾರ ತಹಸೀಲ್ ಸಭಾಂಗಣದಲ್ಲಿ ನಡೆದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಮಾತನಾಡಿದ ಅವರು, “ನೇರ ನಡೆ ನುಡಿಯ, ನ್ಯಾಯ ನಿಷ್ಠುರ ಶರಣರಾಗಿ ಶಿವಾನುಭವ ಪರವಾದ ವಚನಗಳು ಬರೆದಿದ್ದರೂ ಸಹ ಸಮಕಾಲೀನ ಸಾಮಾಜಿಕ ವಿಡಂಬನೆ ಮತ್ತು ಕಳವಳ ಅವರ ವಚನಗಳಲ್ಲಿ ಕಾಣುತ್ತದೆ” ಎಂದರು.

“ಪ್ರಸ್ತುತ ಕಾಲದಲ್ಲಿಯೂ ತಾಂಡವಾಡುತ್ತಿರುವ ಮೌಢ್ಯತೆ, ಜಾತಿಯತೆ ವಿರುದ್ಧವಾಗಿ ಹೋರಾಡಲು ಅವರ ವಚನಗಳು ನಮಗೆ ಬಹುಮುಖ್ಯ ಪ್ರೇರಕ ಶಕ್ತಿಯಾಗಿ ನಿಲ್ಲುತ್ತವೆ. ಅವರ ವಚನಗಳಲ್ಲಿ ಆಳವಾದ ಅನುಭವ ಮತ್ತು ಸಾಮಾಜಿಕ ಪ್ರಜ್ಞೆ ಅಡಗಿದ್ದು, ವೈಚಾರಿಕ ಬದುಕಿಗೆ ದಾರಿದೀಪವಾಗಿವೆ” ಎಂದು ನುಡಿದರು.

Advertisements

ಯುವ ಚಿಂತಕ, ಶಿಕ್ಷಕ ಅನೀಲಕುಮಾರ ಮಚ್ಕೂರಿ ಮಾತನಾಡಿ, “ಶರಣ ಅಂಬಿಗರ ಚೌಡಯ್ಯ ಅವರ ವಚನ ಸಂದೇಶಗಳು ನಾವು ಅಳವಡಿಸಿಕೊಳ್ಳಬೇಕು” ಎಂದರು.

ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ ಮಾತನಾಡಿ, “ಅಂಬಿಗರ ಚೌಡಯ್ಯ ಒಬ್ಬ ದಿಟ್ಟ ಹಾಗೂ ಧೀರ ವಚನಕಾರರಾಗಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿದ ಹಿಮಾಚಲ ಪ್ರದೇಶ ಸರ್ಕಾರ

ಈ ಸಂದರ್ಭದಲ್ಲಿ ಹಿರಿಯ ಮುಖಂಡ ರಾಮಣ್ಣ ವಡೆಯರ್, ಪಪಂ ಸದಸ್ಯ ದಯಾನಂದ ಘುಳೆ, ಪಪಂ ಮುಖ್ಯಾಧಿಕಾರಿ ಸ್ವಾಮಿದಾಸ, ತಾಪಂ ಸಹಾಯಕ ನಿರ್ದೇಶಕ ಸುದೇಶ, ಖಜಾನಾಧಿಕಾರಿ ಮಾಣಿಕ ನೇಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ವ್ಯವಸ್ಥಾಪಕ ಗುರುಸಿದ್ದಪ್ಪ, ಲಿಂಗಾಯತ ಸಮಾಜ ಯುವ ಸಂಘದ ಅಧ್ಯಕ್ಷ ವಿರೇಶ ಅಲಮಾಜೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X