ತುಮಕೂರು | ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

Date:

Advertisements

ಸಂವಿಧಾನವೇ ನಮಗೆ ಧರ್ಮ ಗ್ರಂಥ. ಈ ಗ್ರಂಥದ ಮೂಲಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಪ್ರಯತ್ನವನ್ನು ಸರ್ಕಾರಗಳು ಮಾಡಬೇಕು. ಇದೇ ಸರ್ಕಾರದ ಆಶಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ತುಮಕೂರು ನಗರದ ಸಿದ್ಧಗಂಗಾ ಮಠದಲ್ಲಿ ಭಾನುವಾರ ನಡೆದ ಡಾ. ಶಿವಕುಮಾರ ಮಹಾಶಿವಯೋಗಿಗಳ 5ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದಲ್ಲಿ ಸಮಾರಂಭ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“12ನೇ ಶತಮಾನದಲ್ಲಿ ಬಸವಾದಿ ಶರಣರು ಜಾತಿ, ವರ್ಗರಹಿತವಾದ ವೈಚಾರಿಕತೆಯಿಂದ ಕೂಡಿದ ಸಮಾಜ ನಿರ್ಮಾಣ ಮಾಡಲು ಈ ನಾಡಿನಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ. ಬಸವಣ್ಣನವರ ಅನೇಕ ಆದರ್ಶ ತತ್ವಗಳು ಎಂದೆಂದಿಗೂ ಪ್ರಸ್ತುತ. ಸಾಮಾಜಿಕ ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆಯನ್ನು ಬಸವಾದಿ ಶರಣರು ತಂದಿದ್ದು, ಇವರ ಹೋರಾಟದ ಆಶಯವನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದಾಗಿದೆ” ಎಂದು ತಿಳಿಸಿದರು.

Advertisements

“ಬಸವಾದಿ ಶರಣರ ಆದರ್ಶವನ್ನು ಕಾಯ, ವಾಚ, ಮನಸ ಮೈಗೂಡಿಸಿಕೊಂಡು ಅದರಂತೆ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಶಿವಕುಮಾರ ಸ್ವಾಮೀಜಿಯವರು ಮಾಡಿದ್ದಾರೆ. ಈ ಮೂಲಕ ನುಡಿದಂತೆ ನಡೆದಿದ್ದಾರೆ” ಎಂದರು.

“ಅಕ್ಷರ ಸಂಸ್ಕೃತಿಯಿಂದ ದೂರವಾದ ಜನರು ಸಮಾಜದಲ್ಲಿ ಶೋಷಣೆ, ದೌರ್ಜನಕ್ಕೆ ಒಳಗಾಗಿದ್ದಾರೆ. ಅಕ್ಷರ ಸಂಸ್ಕಾರ ಪಡೆದವರು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಸೇರಿದ್ದಾರೆ. ಈ ರೀತಿ ಅಕ್ಷರ ಜ್ಞಾನದ ಅಸಮಾನತೆಯಿಂದ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಉಂಟಾಗಿರುವುದನ್ನು ಇಂದಿಗೂ ನಾವು ಕಾಣಬಹುದಾಗಿದೆ” ಎಂದರು.

“ಮನುಷ್ಯ ಮನುಷ್ಯನನ್ನು ಗೌರವಿಸಬೇಕು, ಪ್ರೀತಿಸಬೇಕು. ದ್ವೇಷಿಸುವ ವಾತಾವರಣವಿರಬಾರದು. ಕಾಯಕ ಮತ್ತು ದಾಸೋಹ ಎರಡೂ ಸಹ ಜೀವನದ ಮೌಲ್ಯಗಳು‌. ಇದನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

“ಶಿಕ್ಷಣ ಎಲ್ಲರಿಗೂ ಸಿಗಬೇಕು. ಜ್ಞಾನವಿಕಾಸದಿಂದ ಮಾತ್ರ ನಾವು ಸಮಾಜದಲ್ಲಿ ಗೌರವದಿಂದ ಬದುಕಲು ಸಾಧ್ಯ ಎಂಬುದು ಶ್ರೀಗಳ ಅಭಿಮತವಾಗಿತ್ತು. ಅಂತೆಯೇ ಸಹಿಷ್ಣುತೆ, ಸಹಬಾಳ್ವೆಯನ್ನು ಜೊತೆಯಾಗಿಟ್ಟಕೊಂಡು ನಾವೆಲ್ಲರೂ ಬದುಕಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

“ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿಸಿ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆಯಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾನುವಳ್ಳಿ-ಚನ್ನಗಿರಿ ಗಲಾಟೆಯಲ್ಲಿ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ; ಆರೋಪ

“ನಾವು ಬಸವಾದಿ ಶರಣರ ಆದರ್ಶದ ಮೇಲೆ ನಂಬಿಕೆ ಇಟ್ಟವರು. ಆದುದರಿಂದಲೇ ಸಮಾಜದಲ್ಲಿನ ಜನರಿಗಾಗಿ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬಲಾಗುತ್ತಿದೆ. ಪ್ರಸ್ತುತ ವರ್ಷ ₹38,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಾಗಿ ಖರ್ಚು ಮಾಡಲಾಗುತ್ತಿದೆ. ಮುಂದಿನ ವರ್ಷ ₹68,000 ಕೋಟಿ ಖರ್ಚು ಮಾಡಲಾಗುವುದು” ಎಂದು ತಿಳಿಸಿದರು.

ಈ ವೇಳೆ ಸಚಿವರುಗಳಾದ ಡಾ ಜಿ ಪರಮೇಶ್ವರ್, ಕೆ ಎನ್ ರಾಜಣ್ಣ, ಎಂ ಬಿ ಪಾಟೀಲ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X