ಪಿಎಸ್‍ಐ ಮರು ಪರೀಕ್ಷೆ | ಜ.23 ರಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Date:

Advertisements

ಜನವರಿ 23 ರಂದು 545 ಪಿಎಸ್​ಐ ನೇಮಕಾತಿ ಲಿಖಿತ ಮರು ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. ಪಿಎಸ್​ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

545 ಪಿಎಸ್​ಐ ಮರು ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದು, ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಲು ಸಜ್ಜಾಗಿದ್ದರು. ಈ ನಡುವೆ ಮತ್ತೆ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ಧರಾಮಯ್ಯ

ಈ ಆರೋಪಕ್ಕೆ ಸಂಬಂಧಿಸಿದಂತೆ, ಇಂಟೆಲಿಜೆನ್ಸ್ ವಿಭಾಗದ ಸಬ್​ ಇನ್ಸ್​ಪೆಕ್ಟರ್​ ಲಿಂಗಯ್ಯ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಲಿಂಗಯ್ಯ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಜತೆಗೆ, ಅವರು ವಾಟ್ಸ್‌ಆಪ್‌ನಲ್ಲಿ ಚಾಟ್‌ ಮಾಡಿದ ಸಂದೇಶಗಳು ವೈರಲ್‌ ಆಗಿವೆ. ಈ ಸಂಬಂಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X