ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ನಗರದ ಹಲವೆಡೆ ಪ್ರತಿಭಟನೆ

Date:

Advertisements

ಕಲಬುರಗಿಯ ಲುಂಬಿಣಿ ಉದ್ಯಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಲಾಗಿದೆ. ಕೃತ್ಯವನ್ನು ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ನಗರದ ಹಲವೆಡೆ ದಲಿತ ಮುಖಂಡರು, ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.

ಸೋಮವಾರ ರಾತ್ರಿ ಕೃತ್ಯ ನಡೆದಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ನಗರದಲ್ಲಿ ಜಮಾಯಿಸಿರುವ ಹಲವಾರು ಸಂಘಟಕರು, ಕಾರ್ಯಕರ್ತರು ನಗರದ ರಾಮ ಮಂದಿರ ವೃತ್ತ, ನಾಗನಹಳ್ಳಿ ರಿಂಗ್ ರೋಡ್, ಲುಂಬಿಣಿ ಉದ್ಯಾನ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ.

“ಅಂಬೇಡ್ಕರ್‌ಗೆ ಅಪಮಾನ ಮಾಡಿರುವ ಕಿಡಿಗೇಡಿಗಳು ಪಟಾಕಿ ಸಿಡಿಸಿದ್ದಾರೆ. ಘಟನೆ ನಡೆದು ಹಲವಾರು ಗಂಟೆಗಳು ಕಳೆದಿವೆ. ಆದರೂ, ಆರೋಪಿಗಳನ್ನು ಬಂಧಿಸಲಾಗಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Advertisements

ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಭೇಟಿ ನೀಡಿದ್ದು, “ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರದಲ್ಲೇ ಬಂಧಿಸಿ, ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಅಲ್ಲದೆ, ಲುಂಬಿಣಿ ಉದ್ಯಾನಕ್ಕೆ ಬಂದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ್ದಾರೆ. “ಪ್ರಕರಣದ ತನಿಖೆ ಮುಗಿದ ಬಳಿಕ, ಹೊಸ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X