ಉಡುಪಿ | ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್-ಆಪ್ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು

Date:

Advertisements
  • ಅನುಮತಿ ಪಡೆಯದೇ ಬ್ಯಾನರ್‌ ಅಳವಡಿಕೆ
  • ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹಾಗೂ ಆಪ್‌ ಅಭ್ಯರ್ಥಿ ಪ್ರಭಾಕರ ಪೂಜಾರಿ ತೊಟ್ಟಂ ವಿರುದ್ಧ ದೂರು ದಾಖಲಾಗಿದೆ.

ಅನುಮತಿ ಪಡೆಯದೇ ಉಡುಪಿ ಜಿಲ್ಲೆ ಬ್ರಹ್ಮಗಿರಿ ಸಮೀಪದ ನಾಯರ್‌ಕೆರೆ ಬಳಿ ಇರುವ ಕಾಂಗ್ರೆಸ್‌ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಭಾವಚಿತ್ರವಿರುವ ಬ್ಯಾನರ್‌ ಹಾಗೂ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ಗಳ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು.

ಮತ್ತೊಂದು ಕಡೆ ಕಲ್ಸಂಕ ಜಂಕ್ಷನ್ ಬಳಿ ಇರುವ ಆಮ್‌ ಆದ್ಮಿ ಕಚೇರಿಯಲ್ಲಿ ಪೂರ್ವಾನುಮತಿ ಪಡೆಯದೆ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಕೇಜ್ರಿವಾಲ್ ಅವರ ಭಾವಚಿತ್ರ ಮತ್ತು ಪಕ್ಷದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? : ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

ಎರಡು ಕಡೆ ಇದ್ದ ಫ್ಲೆಕ್ಸ್ ಗಳನ್ನು ಅಳವಡಿಸಲು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಇದರ ಬಗ್ಗೆ ಗಮನ ಹರಿಸಿದ ಫ್ಲೈಯಿಂಗ್‌ ಸ್ಕ್ವಾಡ್ ತಂಡದ ಅಧಿಕಾರಿ ರೋಶನ್‌ ಕುಮಾರ್‌ ಚುನಾವಣಾಧಿಕಾರಿಗೆ ದೂರು ನೀಡಿದರು.

ಪ್ರಕರಣ ದಾಖಲಿಸಿಕೊಂಡ ಚುನಾವಣಾ ಕರ್ತವ್ಯನಿರತ ಅಧಿಕಾರಿಗಳು ಕಾಂಗ್ರೆಸ್ ಕಚೇರಿಗೆ ಹಾಗೂ ಆಪ್‌ ಕಚೇರಿಗೆ ಭೇಟಿ ನೀಡಿ ಫ್ಲೆಕ್ಸ್ ಹಾಗೂ ಕಟೌಟ್‌ಗಳನ್ನು ತೆರವುಗೊಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಉಡುಪಿ | ಕೆಂಪು ಕಲ್ಲು ಮರಳು ಸಮಸ್ಯೆ ಧರಣಿ ಅಂತ್ಯ, ಆಗಸ್ಟ್ 30 ಜಂಟಿ ಸಭೆ ನಿಗದಿ

ಕಟ್ಟಡ ಕಾರ್ಮಿಕರಿಗೆ ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಆಗಸ್ಟ್...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X