ಗದಗ | ಸರ್ಕಾರಿ ಶಾಲೆಗೆ ಬಿಇಒ ಆರ್.ಎನ್ ಹುರಳಿ ಭೇಟಿ, ಪರಿಶೀಲನೆ

Date:

Advertisements

ಗದಗ ಜಿಲ್ಲೆಯ ಗಜೇಂದ್ರಗಡದ‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ಕ್ಕೆ ರೋಣ ಬಿಇಒ ಆರ್‌.ಎನ್‌ ಹುರಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಶಾಲೆಯ ಆವರಣವು ಅವ್ಯವಸ್ಥಿತವಾಗಿದೆ ಎಂದು ಡಿವೈಎಫ್‌ಐ ಮುಖಂಡ ದಾವಲಸಾಬ ತಾಳಿಕೋಟಿ ಅವರು ದೂರು ನೀಡಿದ್ದರು. ದೂರು ಸ್ವೀಕರಿಸಿದ ಬಿಇಒ ಶಾಲೆಗೆ ಭೇಟಿ ನೀಡಿದ್ದಾರೆ.

ಶಾಲೆಯಲ್ಲಿ ಸಭೆ ನಡೆಸಿದ ಅವರು, “ಶಾಲೆಯಲ್ಲಿನ ಕೆಲ‌ ಶಿಕ್ಷಕಿಯರ ವರ್ಗಾವಣೆಗೆ ಮನವಿ ಬಂದಿದೆ. ಅದನ್ನು ಪರಿಶೀಲನೆ ನಡೆಸಿ, ಮುಂದಿನ‌ ಕ್ರಮ ಕೈಗೊಳ್ಳುತ್ತೇವೆ. ಅವ್ಯವಸ್ಥಿತೆಯನ್ನು ನಿರ್ವಹಿಸಿ, ಶೀಘ್ರದಲ್ಲಿಯೇ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇವೆ” ಎಂದು ಹೇಳಿದ್ದಾರೆ.

Advertisements

ಸಭೆಯಲ್ಲಿ ಮಾತನಾಡಿದ ದಾವಲಸಾಬ ತಾಳಿಕೋಟಿ, “ಶಾಲೆಯಲ್ಲಿನ ಕೆಲ ಶಿಕ್ಷಕಿಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡದೆ, ಶಾಲಾ ಅವಧಿಯಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಅಂತಹವರನ್ನು ವರ್ಗಾವಣೆ ಮಾಡಬೇಕು. ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X