ನಾನು ದೈವ ಭಕ್ತನಲ್ಲ, ಸಂವಿಧಾನದ ಭಕ್ತ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

“ನಾನು ಯಾವ ದೈವದ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ. ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣ ಗುರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ದಯೆಯೇ ಧರ್ಮ, ಮಾನವತೆಯೇ ಪರಮದೈವ ಎಂದು ನಂಬಿದವನು ನಾನು, ಸಂವಿಧಾನದಲ್ಲಿ ಆಸ್ತಿಕನಿಗೂ ನಾಸ್ತಿಕನಿಗೂ ಸಮಾನ ಅವಕಾಶವಿದೆ, ಸಮಾನ ಹಕ್ಕುಗಳಿವೆ.. ಇದನ್ನು ಬಿಜೆಪಿಯವರು ಅರಿತುಕೊಳ್ಳಬೇಕು” ಎಂದಿದ್ದಾರೆ.

“ಬಹುಶಃ ನಾನು ಪರಂಪರೆಯ ದೇವಾಲಯಗಳನ್ನು ಸಂದರ್ಶಿಸಿದಷ್ಟು ಬಿಜೆಪಿಯವರು ಹೋಗಿರಲಿಕ್ಕಿಲ್ಲ! ನಾನು ಕಾಶಿ, ಮಥುರಾ, ಬುದ್ಧಗಯಾ, ಅಜ್ಮಿರ್ ದರ್ಗಾ, ಚರ್ಚ್ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿದ್ದೇನೆ, ಭಕ್ತನಾಗಿ ಅಲ್ಲ, ಅಧ್ಯಯನಕಾರನಾಗಿ. ವಿವಿಧ ಕಲೆ, ಸಂಸ್ಕೃತಿ, ಆಚಾರ, ವಿಚಾರ, ಇತಿಹಾಸಗಳನ್ನು ಅಧ್ಯಯನ ಮಾಡುವುದು ನನ್ನ ಆಸಕ್ತಿ. ಮುಂದೆಯೂ ನನ್ನ ಈ ಅಧ್ಯಯನದ ಪ್ರವಾಸಗಳನ್ನು ಮಾಡುತ್ತಿರುತ್ತೇನೆ” ಎಂದರು.

Advertisements

 

“ಭಕ್ತಿ, ನಂಬಿಕೆಗಳನ್ನು ಬಲವಂತವಾಗಿ ಹೇರುವುದಕ್ಕೂ ಸಾಧ್ಯವಿಲ್ಲ, ಬಲವಂತವಾಗಿ ಕಿತ್ತು ಹಾಕಲೂ ಸಾಧ್ಯವಿಲ್ಲ ಎಂಬ ಸತ್ಯವನ್ನು ಟೀಕಿಸುವವರು ಅರ್ಥ ಮಾಡಿಕೊಂಡರೆ ಒಳಿತು. ನನ್ನ ಭಕ್ತಿ ಏನಿದ್ದರೂ ಸತ್ಯ, ಸಮಾನತೆಯೆಡೆಗೆ ಮಾತ್ರ. ಯಾರನ್ನೋ ಮೆಚ್ಚಿಸಲು ಡಾಂಬಿಕ ದೈವಭಕ್ತನಂತೆ ತೋರಿಸಿಕೊಳ್ಳುವುದು ನನ್ನ ಜಾಯಮಾನವಲ್ಲ. ಹಾಗೆಯೇ, ರಾಜಕಾರಿಣಿಯೊಬ್ಬನ ಮೌಲ್ಯಮಾಪನವನ್ನು ಆತನ ಕೆಲಸಗಳಿಂದ ಮಾಡಬೇಕೇ ಹೊರತು ಆತನ ಭಕ್ತಿಯಿಂದಲ್ಲ ಎಂಬ ವಾಸ್ತವವನ್ನು ಟೀಕಾಕಾರರು ಅರಿತುಕೊಳ್ಳಬೇಕು” ಎಂದು ಹೇಳಿದರು.

“ಕಣ್ಣಿನಲ್ಲಿ ಕಾಮ, ಮನದಲ್ಲಿ ಕ್ರೋಧ ಪ್ರಾಣದಲ್ಲಿ ಲೋಭ, ಬುದ್ಧಿಯಲ್ಲಿ ಮದ ವಿವೇಕದಲ್ಲಿ ಮತ್ಸರ ಅರುಹಿನಲ್ಲಿ ಮಾಯವುಳ್ಳನ್ನಕ್ಕರ ಎಂತು ಭಕ್ತನೆಂಬೆ?” ಎಂಬ ವಚನ ಉಲ್ಲೇಖಿಸಿ ಟೀಕಿಸುವರಿಗೆ ಅರ್ಪಿಸುತ್ತೇನೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X