ಪಶ್ಚಿಮ ಬಂಗಾಳ | ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ ಎಂದು ಘೋಷಿಸಿದ ಮಮತಾ ಬ್ಯಾನರ್ಜಿ

Date:

Advertisements

ಮುಂದಿನ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಣೆಗೂ ಮುನ್ನವೇ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಏರ್ಪಟ್ಟಿದೆ.

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನೊಂದಿಗೆ ನಾವು ಮೈತ್ರಿ ಮಾಡುವುದಿಲ್ಲ. ಟಿಎಂಸಿಯು ಏಕಾಂಗಿಯಾಗಿಯೇ ಸ್ಪರ್ಧೆ ಮಾಡಲಿದೆ” ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಹಿರಂಗವಾಗಿಯೇ ಘೋಷಿಸಿದ್ದಾರೆ.

“ನಾವು ಬಂಗಾಳದಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸುತ್ತೇವೆ. ನಾವು ಸೀಟು ಹಂಚಿಕೆಯ ಪ್ರಸ್ತಾಪವನ್ನು ಮಾಡಿದ್ದೆವು. ಆದರೆ ಅವರು ತಿರಸ್ಕರಿಸಿದರು ಮತ್ತು ನಂತರ ಯಾವುದೇ ಮಾತುಕತೆ ನಡೆಯಲಿಲ್ಲ. ಬಂಗಾಳಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲ” ಎಂದು ತಿಳಿಸಿದ್ದಾರೆ.

Advertisements

“ಭಾರತ್ ಜೋಡೊ ನ್ಯಾಯ ಯಾತ್ರೆಗೆ ಆಹ್ವಾನಿಸುವಲ್ಲಿ ಅಥವಾ ಯಾತ್ರೆಯು ಬಂಗಾಳದಲ್ಲಿ ಸಾಗುವ ಬಗ್ಗೆ ತಿಳಿಸುವಲ್ಲಿ ನಮಗೆ ಯಾವುದೇ ಮಾಹಿತಿ ನೀಡುವ ಸೌಜನ್ಯ ಕೂಡ ನೀಡಲಿಲ್ಲ” ಎಂದು ಇದೇ ವೇಳೆ ದೀದಿ ಬೇಸರ ಹೊರಹಾಕಿದ್ದಾರೆ.

“ಇಂಡಿಯಾ ಮೈತ್ರಿಕೂಟದೊಂದಿಗಿನ ಸಂಬಂಧದ ಬಗ್ಗೆ ಏನು ಮಾಡಬೇಕೆಂಬುದನ್ನು ಚುನಾವಣೆಯ ನಂತರ ತಿಳಿಸುತ್ತೇವೆ. ನಾವು ಜಾತ್ಯತೀತ ಪಕ್ಷವಾಗಿದ್ದು, ಬಿಜೆಪಿಯನ್ನು ಸೋಲಿಸಲು ಎಲ್ಲ ಶ್ರಮವನ್ನು ಹಾಕುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದೇವೆ. ಬಂಗಾಳದಲ್ಲಿ ಸೀಟು ಹಂಚಿಕೆಯ ಮಾತುಕತೆ ನಡೆಯುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ ಒಂದು ದಿನದ ನಂತರ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ.

ಚುನಾವಣೆಗೆ ಸ್ಪರ್ಧಿಸಲು ಮಮತಾ ಬ್ಯಾನರ್ಜಿ ಸಹಾಯ ನಮಗೆ ಬೇಡ ಎಂದಿದ್ದ ಅಧೀರ್ ರಂಜನ್ ಚೌಧರಿ

ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಮುಖಂಡ ಅಧೀರ್ ರಂಜನ್ ಚೌಧರಿ, ಮಮತಾ ಅವರನ್ನು ಅವಕಾಶವಾದಿ ಎಂದು ಕರೆದಿದ್ದರು.

ಮಾಧ್ಯಮಗಳೊಂದಿಗೆ ನಿನ್ನೆ ಮಾತನಾಡಿದ್ದ ಅಧೀರ್ ರಂಜನ್ ಚೌಧರಿ, “ಮಮತಾ ಬ್ಯಾನರ್ಜಿ ಸಹಾಯದೊಂದಿಗೆ ನಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ತನ್ನ ಸ್ವಂತ ಬಲದೊಂದಿಗೆ ಹೇಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್‌ಗೆ ಗೊತ್ತಿದೆ. ಬಂಗಾಳದಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಟಿಎಂಸಿ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮಮತಾ ಬ್ಯಾನರ್ಜಿ ಅವರು ನೆನಪಿನಲ್ಲಿ ಇಟ್ಟುಕೊಳ್ಳಬೇಕು” ಎಂದಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಸೋಲಿಸುವ ನಿಟ್ಟಿನಲ್ಲಿ ವಿಪಕ್ಷಗಳೇ ಸೇರಿಕೊಂಡು ‘ಇಂಡಿಯಾ ಒಕ್ಕೂಟ’ವನ್ನು ರಚಿಸಿತ್ತು. ಇದರ ಸಂಚಾಲಕರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇತ್ತೀಚಿಗಷ್ಟೇ ಆಯ್ಕೆ ಮಾಡಲಾಗಿತ್ತು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ: ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದವರ ಅಂಗಡಿಗಳನ್ನು ಧ್ವಂಸಗೊಳಿಸಿದ ಪಾಲಿಕೆ

ಇದರ ನಡುವೆಯೇ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಏರ್ಪಟ್ಟಿದೆ. ಈ ನಡುವೆಯೇ ಮಮತಾ ಬ್ಯಾನರ್ಜಿಯವರ ಈ ಬಹಿರಂಗ ಘೋಷಣೆಯು ಮತ್ತಷ್ಟು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಲಿದೆ.

‘ಇಂಡಿಯಾ ಒಕ್ಕೂಟ’ದಲ್ಲಿ ಮಮತಾ ಬ್ಯಾನರ್ಜಿಯೇ ಮುಂಚೂಣಿಯಲ್ಲಿದ್ದ ನಾಯಕಿಯಾಗಿದ್ದರು. ಅಲ್ಲದೇ, ಮಲ್ಲಿಕಾರ್ಜುನ ಖರ್ಗೆ ಅವರೇ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ತಿಳಿಸಿದ್ದ ಪ್ರಮುಖರಲ್ಲೋರ್ವರಾಗಿದ್ದರು. ಇಂಡಿಯಾ ಒಕ್ಕೂಟವು ಈವರೆಗೆ ಒಟ್ಟು ಐದು ಸಭೆಗಳನ್ನು ನಡೆಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X