ಜೆಡಿಎಸ್‌ಗೆ ವರವಾದ ರಾಷ್ಟ್ರೀಯ ಪಕ್ಷಗಳ ಬಂಡಾಯ : ಕಾಂಗ್ರೆಸ್‌ನ ರಘು ಆಚಾರ್ ಸೇರಿದಂತೆ ಹಲವರ ಸೇರ್ಪಡೆ

Date:

Advertisements
  • ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡ ಅನ್ಯ ಪಕ್ಷದ ಮುಖಂಡರು
  • ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿಸುವ ಶಪಥಗೈದ ನಾಯಕರು

ಮಾಜಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡ ರಘು ಆಚಾರ್, ಬಿಜೆಪಿಯ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಹಲವು ಮುಖಂಡರು ಜೆಡಿಎಸ್ ಸೇರ್ಪಡೆ ಗೊಂಡರು.

ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಅನ್ಯ ಪಕ್ಷದ ಮುಖಂಡರು ಜಾತ್ಯಾತೀತ ಜನತಾದಳ ಸೇರಿದರು.

ಇವರ ಜೊತೆಗೆ ಅಪಾರ ಸಂಖ್ಯೆಯ ಬೆಂಬಲಿಗರೂ ಜಾತ್ಯಾತೀತ ಜನತಾದಳದ ಕೈ ಹಿಡಿದರು. ಬಳಿಕ ಮಾತನಾಡಿದ ರಘು ಆಚಾರ್ ರಾಜಕಾರಣದಲ್ಲಿ ಸಾಮಾಜಿಕ ನ್ಯಾಯಕ್ಕೆ ಮನ್ನಣೆ ಮುಖ್ಯ, ಕಾಂಗ್ರೆಸ್ ಪಕ್ಷದಲ್ಲಿ ಅದಕ್ಕೆ ಅವಕಾಶ ಇಲ್ಲದಿದ್ದ ಕಾರಣ ನಾನು ಜಾತ್ಯಾತೀತ ಜನತಾದಳ ಸೇರಿದೆ ಎಂದರು.

Advertisements

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿಯೇ ತೀರುತ್ತೇವೆ. ನಿಮ್ಮೆಲ್ಲರ ಸಹಕಾರ ಮುಖ್ಯ, ಅಧಿಕಾರಕ್ಕಾಗಿ ನಾನು ಪಕ್ಷ ಸೇರಿಲ್ಲ. ದೇವೇಗೌಡ ಹಾಗೂ ಕುಮಾರಸ್ವಾಮಿಯವರ ಆಣತಿಯಂತೆ ಕೆಲಸ ಮಾಡುವೆ. ನನಗೆ ನನ್ನ ಕ್ಷೇತ್ರದ ಜನರೇ ದೊಡ್ಡವರು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ಬಿಜೆಪಿಗೆ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

ಬಿಜೆಪಿಯಿಂದ ಜಾತ್ಯಾತೀತ ಜನತಾದಳ ಸೇರಿದ ಗುರು ಪಾಟೀಲ್ ಮಾತನಾಡಿ, ಬಿಜೆಪಿಗೆ ನಾನು ನನ್ನೆಲ್ಲವನ್ನೂ ತ್ಯಾಗ ಮಾಡಿದೆ.ಆದರೆ ಆ ಪಕ್ಷದವರು ನನಗೆ ಮೋಸ ಮಾಡಿದರು. ಸಜ್ಜನನಾಗಿ ಪಕ್ಷಕ್ಕೆ ನಿಷ್ಠೆಯಿಂದ ನಡೆದುಕೊಂಡಿದ್ದಕ್ಕೆ ಅವರು ಮಾಡಿದ ಅಪಮಾನ ನನ್ನ ಕ್ಷೇತ್ರಕ್ಕೆ ಮಾಡಿದ ಅಪಮಾನ. ಶಹಾಪುರದಲ್ಲಿ ನಾನು ಜಾತ್ಯಾತೀತ ಜನತಾದಳ ಬೆಳೆಸುತ್ತೇವೆ. ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X