ಟೆಸ್ಟ್ ಕ್ರಿಕೆಟ್: ಕೆ ಎಲ್ ರಾಹುಲ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಿದ ದ್ರಾವಿಡ್

Date:

Advertisements

ಟೀಂ ಇಂಡಿಯಾ ಕ್ರಿಕೆಟ್‌ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಿಂದ ಪ್ರಮುಖ ಆಟಗಾರ ಕೆ ಎಲ್ ರಾಹುಲ್ ಅವರಿಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಾರೆ. ಟೆಸ್ಟ್ ಸರಣಿಯಲ್ಲಿ ಬ್ಯಾಟ್ಸ್‌ಮನ್‌ ಆಗಿ ಮಾತ್ರ ಕಣಕ್ಕಿಳಿಯಲಿದ್ದಾರೆ.

ಹೈದರಾಬಾದ್‌ನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ಈ ಸರಣಿಯಲ್ಲಿ ಕೆ ಎಲ್ ರಾಹುಲ್ ಅವರು ವಿಕೆಟ್ ಕೀಪರ್‌ ಆಗಿ ಆಡುವುದಿಲ್ಲ. ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿಯೇ ಈ ಬಗ್ಗೆ ನಿರ್ಧರಿಸಿದ್ದೆವು. ನಾವು ಇನ್ನಿಬ್ಬರು ವಿಕೆಟ್ ಕೀಪರ್‌ ಅವರನ್ನುಆಯ್ಕೆ ಮಾಡಿದ್ದೇವೆ. ನಿಸ್ಸಂಶಯವಾಗಿ  ರಾಹುಲ್ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಉತ್ತಮವಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ. ಸರಣಿ ಡ್ರಾ ಆಗಲು ಅವರ ಆಟ ನಮಗೆ ತುಂಬ ಸಹಾಯವಾಗಿದೆ. ಆದರೆ ಐದು ಪಂದ್ಯಗಳ ಈ ಸರಣಿಯನ್ನು ಪರಿಗಣಿಸಿದಾಗ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಇತರ ಇನ್ನಿಬ್ಬರು ಕೀಪರ್‌ಗಳು ನಿರ್ವಹಿಸಲಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಬದಲಿಗೆ ಕೆ ಎಸ್ ಭರತ್ ಹಾಗೂ ಧ್ರವ ಜುರೆಲ್ ವಿಕೇಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.

Advertisements

ತವರಿನ ಪಿಚ್‌ಗಳ ಬಗ್ಗೆ ಮಾತನಾಡಿದ ರಾಹುಲ್ ದ್ರಾವಿಡ್, ವೇಗಿಗಳಿಗೆ ಅನುಕೂಲ ತಂದುಕೊಡುವ ಬಗ್ಗೆ ನಮಗೆ ಖಚಿತವಿಲ್ಲ. ಆದರೆ ಸ್ಪಿನ್ನರ್‌ಗಳಿಗೆ ಸ್ಪಲ್ಪ ಅನುಕೂಲ ಸಾಧ್ಯತೆಯಿದೆ. ಆಟ ಪ್ರಾರಂಭವಾದ ನಂತರ ಇದರ ಬಗ್ಗೆ ತಿಳಿದುಕೊಳ್ಳುತ್ತೇವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ಮೊದಲ ಎರಡು ಟೆಸ್ಟ್‌ ಪಂದ್ಯಗಳಿಂದ ವಿರಾಟ್ ಕೊಹ್ಲಿ ಅಲಭ್ಯವಾಗುವ ಕಾರಣದಿಂದ ಯುವ ಆಟಗಾರ ಒಬ್ಬರು ಹೊರಹೊಮ್ಮಲು ಸಾಧ್ಯತೆಯಿದೆ ಎಂದು ದ್ರಾವಿಡ್ ತಿಳಿಸಿದ್ದಾರೆ.

ಕಳೆದ 9 ಇನಿಂಗ್ಸ್‌ಗಳಲ್ಲಿ ಶುಭ್‌ಮನ್‌ ಗಿಲ್ ಅವರ ನೀರಸ ಪ್ರದರ್ಶನದ ಬಗ್ಗೆ ಮಾತನಾಡಿದ ತಂಡದ ಮುಖ್ಯ ಕೋಚ್, ಗಿಲ್ ಅವರು ಉತ್ತಮ ಆಟಗಾರರಾಗಿದ್ದು, ಕ್ರಿಕೆಟಿಗನಾಗಿ ತಮ್ಮ ವೃತ್ತಿಯನ್ನು ಉತ್ತಮವಾಗಿ ಆರಂಭಿಸಿದ್ದಾರೆ. ಕೆಲವು ಸಂದರ್ಭದಲ್ಲಿ ನಾವು ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತೇವೆ. ಮತ್ತೆ ಕೆಲವು ಸಲ ಸಮಯ ತೆಗೆದುಕೊಳ್ಳಬೇಕಾಗುತ್ತದೆ. ಅವರು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉತ್ತಮವಾಗಿ ಆಟವಾಡಿದ್ದಾರೆ. ಗಿಲ್ ಕೂಡ ಹಲವು ಸವಾಲುಗಳ ನಡುವೆ ಉತ್ತಮ ಸಾಮರ್ಥ್ಯದೊಂದಿಗೆ ತಮ್ಮ ಆಟ ನಿರ್ವಹಿಸುತ್ತಿದ್ದಾರೆ. ಕಳೆದ ಋತುಗಳಲ್ಲಿ ನಮಗಾಗಿ ಶತಕಗಳನ್ನು ಸಿಡಿಸಿದ್ದರು. ಸದ್ಯ ಉತ್ತಮ ಲಯಕ್ಕೆ ಮರಳುತ್ತಿದ್ದಾರೆ” ಎಂದು ತಿಳಿಸಿದರು.

ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ನಾಳೆ (ಜ.25) ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X