ಯಾದಗಿರಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಕಲಬುರಗಿಯ ಕೊಟನೂರು ಮತ್ತು ಯಾದಗಿರಿಯ ತಡಿಬಿಡಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ  ಕೈಗೊಳ್ಳಬೇಕೆಂದು ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ ಶರಣು ಎಸ್. ನಟೇಕರ, “ದೇಶಕ್ಕೆ ಸಂವಿಧಾನ ಕೊಟ್ಟ ಜ್ಞಾನಿಗೆ ಇಲ್ಲಿನ ಅಜ್ಞಾನಿಗಳು ಅವಮಾನ ಮಾಡಿದ್ದಾರೆ. ಘಟನೆಯ ಅಕ್ಷಮ್ಯವಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ಗಡಿಪಾರು ಮಾಡಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಘಟನೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡಿದ್ದು, ಅವರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚನೆ ಮಾಡಬೇಕು” ಎಂದು ಇತ್ತಾಯಿಸಿದ್ದಾರೆ.

Advertisements

ಪ್ರತಿಭಟನೆಯಲ್ಲಿ ಭೀಮರಾಯ ಸಿಂಧಿಗೇರಿ, ಶಿವಶಂಕರ ವಾಡಿ, ಶಿವಶಂಕರ ಕಲ್ಬುರ್ಗಿ, ಭೀಮರಾಯ ಕರಣೆಗಿ, ಮಲ್ಲಪ್ಪ ಲಂಡನಕರ್,ಶರಣು ಆಲಳ್ಳಿ, ಸಿದ್ದರಾಮ ನಾಯ್ಕಲ್, ಮಲ್ಲಿಕಾರ್ಜುನ ತಾಳವಾರಗೇರಿ, ಪ್ರಭು ಕಚಕನೂರ,ಶರಣಪ್ಪ ಯರಗೋಳ, ಸೈಬಣ್ಣ ಯಂಪಾಡ, ಸಲಿಮ್ ಅಹ್ಮದ್, ಮೌನೇಶ ಮ್ಯಾಗೇರಿ, ಬಸವರಾಜ, ಬಸವರಾಜ ಕೆಂಭಾವಿ, ರಾಜು ಕೊಂಕಲ್, ನಿರ್ಮಲಾ ಅರಿಕೇರಿ, ಸುಶೀಲಮ್ಮ ಯಲ್ಲತ್ತಿ, ಚಂದಮ್ಮ, ದೇವಮ್ಮ,ನಿರ್ಮಲಾ ಎಸ್. ನಾಟೇಕರ್, ಹುಲುಗಮ್ಮ,ಭೀಮಾಶಂಕರ ಈಟೆ, ಆಂಜನೇಯ ಬುಡ್ಗಜಂಗಮ, ನಿರ್ಮಲಾ ಇನ್ನಿತರರು ಉಪಸ್ಥಿತರಿದ್ದರು..

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X