ವಿಜಯಪುರದಲ್ಲಿ ಲುಲು ಗ್ರೂಪ್ ನಿಂದ ₹300 ಕೋಟಿ ಹೂಡಿಕೆ: ಸಚಿವ ಎಂ ಬಿ ಪಾಟೀಲ್

Date:

Advertisements

ವಿಶ್ವ ಆರ್ಥಿಕ ವೇದಿಕೆಯ ದಾವೋಸ್‌ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ದಾವೋಸ್ ಪ್ರವಾಸದ ಫಲಶ್ರುತಿ ತಿಳಿಸುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೆಸ್ಲೆ, ಎಚ್‌ಪಿ, ಎಚ್‌ಸಿಎಲ್‌, ವೋಲ್ವೊ ಗ್ರೂಪ್‌, ಐಕಿಯಾ, ಸೋನಿ, ಮೈಕ್ರೊಸಾಫ್ಟ್‌, ಹಿಟಾಚಿ ಮತ್ತಿತರ ಜಾಗತಿಕ ಉದ್ಯಮಗಳ ಪ್ರಮುಖರ ಜೊತೆಗೆ ರಾಜ್ಯದ ನಿಯೋಗವು 50ಕ್ಕೂ ಹೆಚ್ಚಿನ ಸಭೆಗಳನ್ನು ನಡೆಸಿತು. ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥ್ಯದ ಬೃಹತ್‌ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವರ್ಕ್ಸ್ ಕಂಪನಿಯು ₹ 20,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ಪ್ರಕಟಿಸಿದೆ. ಇದರಿಂದ 1000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ” ಎಂದರು.

“ಡಿಜಿಟಲ್ ಕೌಶಲ ವೃದ್ಧಿ ಪ್ರಕ್ರಿಯೆ ಹಮ್ಮಿಕೊಳ್ಳಲು ಮೈಕ್ರೊಸಾಫ್ಟ್ ವಾಗ್ದಾನ ಮಾಡಿದೆ. ಗ್ರಾಮೀಣ ಪ್ರದೇಶ ಕೇಂದ್ರೀತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪನಿಯು ಎಂಒಯುಗೆ ಸಹಿ ಹಾಕಿದೆ. ಬೆಂಗಳೂರಿನ ಆಚೆಗೂ ಕೈಗಾರಿಕೆಗಳ ಅಭಿವೃದ್ಧಿಗೆ ಸಮಾನ ಕೊಡುಗೆ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮ ವಹಿವಾಟು ಆರಂಭಿಸಲು ಹಲವಾರು ಕಂಪನಿಗಳು ಆಸಕ್ತಿ ತೋರಿಸಿವೆ” ಎಂದು ಹೇಳಿದರು.

Advertisements

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ

ಲುಲು ಗ್ರೂಪ್‌, ಬಿಎಲ್‌ ಅಗ್ರೊ ವಿಜಯಪುರದಲ್ಲಿ ತಮ್ಮ ನೆಲೆ ವಿಸ್ತರಿಸಲಿವೆ. ವಿಜಯಪುರದಲ್ಲಿ ₹300 ಕೋಟಿ ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ. ಬಿಎಲ್‌ ಅಗ್ರೊ ಕಂಪನಿಯು ವಿಜಯಪುರದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕವನ್ನು ಆರಂಭಿಸಲಿದೆ. ದೇಶಿ ಮತ್ತು ರಫ್ತು ಮಾರುಕಟ್ಟೆಗಳಿಗೆ ಪೂರೈಸಲು ಸ್ಥಳೀಯ ಆಹಾರ ಉತ್ಪನ್ನಗಳನ್ನು ಖರೀದಿಸಿ ಅವುಗಳ ಶ್ರೇಣೀಕರಣ, ವಿಂಗಡಣೆ ಮತ್ತು ಪ್ಯಾಕೇಜಿಂಗ್‌ ಉದ್ದೇಶಕ್ಕೆ ಈ ಘಟಕ ನೆರವಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

“ಸ್ಮಾರ್ಟ್ ಸಿಟಿ ಮೂಲಸೌಲಭ್ಯ, ನವೀಕರಿಸಬಹುದಾದ ಇಂಧನ ಪರಿಹಾರಗಳು, ಡೇಟಾ ಕೇಂದ್ರಗಳು ಮತ್ತು ಸಂಬಂಧಿತ ವಲಯಗಳಲ್ಲಿ ವಿವಿಧ ಕಂಪನಿಗಳಿಂದ ಒಟ್ಟಾರೆ ₹3,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಳಹರಿವು ಕಂಡುಬಂದಿದೆ” ಎಂದು ಹೇಳಿದರು.

“ಎಬಿ ಇನ್‌ಬೇವ್‌ ಇಂಡಿಯಾ ಕಂಪನಿಯು ಕರ್ನಾಟಕದಲ್ಲಿ ತನ್ನ ಮದ್ಯ ತಯಾರಿಕಾ ಘಟಕಗಳ ತಯಾರಿಕಾ ಸಾಮರ್ಥ್ಯ ಹೆಚ್ಚಿಸಲು ₹ 400 ಕೋಟಿ ಮೊತ್ತದ ಬಂಡವಾಳ ತೊಡಗಿಸುವ ಇಂಗಿತ ವ್ಯಕ್ತಪಡಿಸಿದೆ” ಎಂದು ಸಚಿವರು ವಿವರ ನೀಡಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಎಸ್ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಶ್ರೀಮತಿ ಏಕ್ ರೂಪ್ ಕೌರ್‌, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಿಇಒ ಡಾ. ಮಹೇಶ್‌ ಮತ್ತಿತರ ಉನ್ನತ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X