ಯಾದಗಿರಿ | ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಟ ವೇತನ ನಿಗದಿ ಮಾಡಲು ಆಗ್ರಹ

Date:

Advertisements

ರೆಪ್ತಕೋಶ್‌ ಬ್ರೆಟ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನಿಗದಿ ಮಾಡಿದ್ದ ಮಾರ್ಗಸೂಚಿಗಲನ್ನು ಅನುಸರಿಸಿ ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ಗಮಧಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ ಆದೇಶವನ್ನು ಜಾರಿಗೊಳಿಸಿ, ಗ್ರಾಮ ಪಂಚಾಯತಿ ನೌಕರರಿಗೆ 31,000 ರೂ. ಕನಿಷ್ಠ ನಿಗದಿ ಮಾಡಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ ಒತ್ತಾಯಿಸಿದೆ.

ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರ, ಗುಮಾಸ್ತ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್. ಜವಾನ, ನೀರುಗಂಟಿ, ಸ್ವಚ್ಛತಾಗಾರರು ಇತ್ಯಾದಿ ನೌಕರರು ಗ್ರಾಮ ಪಂಚಾಯತಿಗಳು ಆರಂಭವಾದ ಕಾಲದಿಂದಲೂ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಅವರಿಗೆ ಬೇರಾವುದೇ ಸೌಲಭ್ಯಗಳೂ ಇಲ್ಲ. ಹೀಗಾಗಿ, ಅವರು ನಿವೃತ್ತಿಯಾದಾಗ ಇಳಿ ವಯಸ್ಸಿನಲ್ಲಿ ಜೀವನ ನಡೆಸುವುದಕ್ಕೆ ಬಹಳ ದುಃಸ್ವರವಾಗುತ್ತದೆ. ಅವರಿಗೆ ಪಿಂಚಣಿ ನೀಡಲು ಸರ್ಕಾರವೇ ಆಯೋಗ ರಚಿಸಿತ್ತು. ಆಯೋಗವು ತನ್ನ ವರದಿಯನ್ನು ಇಲಾಖೆಗೆ ಸಲ್ಲಿಸಿದೆ. ವರದಿಯ ಶಿಫಾರಸ್ಸಿನಲ್ಲಿ ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಸೇವಾ ಹಿರಿತನದ ವೇತನ ಹೆಚ್ಚಳ, ಆರೋಗ್ಯ ವಿಮೆ, ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರ ನೇಮಕ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.

Advertisements

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

1) ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರ ಪರವಾದ ನೀತಿಗಳನ್ನು ಜಾರಿಗೆ ತರಬೇಕು.

2) ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ರೈತ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಬೇಕು, ಖಾತರಿಪಡಿಸಬೇಕು, ರಸಗೊಬ್ಬರ ಒಳಗೊಂಡಂತೆ ಕೃಷಿ ಹಿಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು
ಕೈಬಿಡುವುದು.

3) ರೈಲ್ವೆ, ವಿದ್ಯುತ್ ಸೇರಿದಂತೆ ಎಲ್ಲಾ ಕ್ಷೇತ್ರವನ್ನು ಎಲ್ಲಾ ಸ್ವರೂಪದ ಖಾಸಗೀಕರಣವನ್ನು ಕೈಬಿಡಬೇಕು.

4) ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ರೂ. 31,000 ನಿಗಧಿಗಾಗಿ,

5) ಕನಿಷ್ಠ ಪಿಂಚಣಿ ರೂ. 6000 ಸಾವಿರ ನಿಗಧಿಗಾಗಿ

6) ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ನೇಮಿಸಬೇಕು.

7) ಸೇವಾ ಹಿರಿತನದ ಪರಿಶೀಲಿಸಿ ವೇತನ ಹೆಚ್ಚಳ ಮಾಡಬೇಕು.

8) ತೀವ್ರವಾದ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಭರಿಸಬೇಕು.

9) ಗುತ್ತಿಗೆ ಮತ್ತು ಹೊರಗುತ್ತಿಗೆ ನೇಮಕಾತಿ ರದ್ದತಿಗಾಗಿ

10) ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯವ್ರಹಿಸುವ ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು.

11) ನೀರುಗಂಟಿಗಳಿಗೆ ಮಲ್ಟಿಪರ್ಪಸ್ ಎಂದಿರುವುದನ್ನು ಕೈ ಬಿಟ್ಟು ನಿರ್ದಿಷ್ಟವಾದ ಕೆಲಸಗಳನ್ನು ನಿಗದಿಪಡಿಸಬೇಕು.

12) ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು.

ಪ್ರತಿಭಟನೆಯಲ್ಲಿ ಜೈಲಾಲ್ ತೋಟಮನಿ, ಮಲ್ಲಣ್ಣ ಬಿರೆದಾರ, ಅನೀತಾ ಹಿರೇಮಠ, ಮಲ್ಲಿಕಾರ್ಜುನ ಕೊಟಗಾರ, ಎಸ್.ಎಂ. ಸಾಗರ, ಮಲ್ಲಪ್ಪ ಬೆಳಗುಂದಿ, ದಾವಲಸಾಬ್ ನದಾಫ್, ಸಿದ್ರಾಮಪ್ಪ, ನಾಗಪ್ಪ ಜೋಗುಂಡಭಾವಿ, ಮಲ್ಲಿಕಾರ್ಜುನ ಬಂದಳ್ಳಿ, ಬಸವರಾಜ ಹೇಮನೂರ ಸುರಪುರ, ಯಲ್ಲಪ್ಪ ಸುರಪುರ, ಅಮರಪ್ಪ, ಮಲ್ಲಿಕಾರ್ಜುನ ಕಕ್ಕಸಗೇರಾ, ಮಹಾದೇವಪ್ಪ, ಮುನಿಯಪ್ಪಗೌಡ ಬಸವರಾಜ, ಎಲ್ ಮಲ್ಲಿಕಾರ್ಜುನ ಇನ್ನಿತರರು ಉಪಸ್ಥಿತರಿದ್ದರು.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X