ಹುಬ್ಬಳ್ಳಿ | ಉಪ್ಪು ತಿಂದ ಮನೆಗೆ ದ್ರೋಹ ಬಗೆದ ಜಗದೀಶ ಶೆಟ್ಟರ್: ಕೆಪಿಸಿಸಿ ವಕ್ತಾರ ಗಂಗಾಧರ

Date:

Advertisements

ಬಿಜೆಪಿಯಲ್ಲಿ ಮುಖಕ್ಕೆ ಮಂಗಳಾರತಿ ಮಾಡಿ ಮೂಲೆಗುಂಪು ಮಾಡಿದಾಗ ರತ್ನಗಂಬಳಿ ಹಾಸಿ ಸ್ವಾಗತಿಸಿ ರಾಜಕೀಯ ಜೀವದಾನ ನೀಡಿದ್ದ ಕಾಂಗ್ರೆಸ್‌ಗೆ ಜಗದೀಶ್‌ ಶೆಟ್ಟರ್ ದ್ರೋಹ ಬಗೆದಿದ್ದಾರೆ. ಅವರ ನಡೆ ಉಪ್ಪುತಿಂದ ಮನೆಗೆ ದ್ರೋಹ ಬಗೆದಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಕಿಡಿಕಾರಿದ್ದಾರೆ.

ಜಗದೀಶ್‌ ಶೆಟ್ಟರ್‌ ಮರಳಿ ಬಿಜೆಪಿ ಸೇರಿರುವ ಬಗ್ಗೆ ಪ್ರತಿಕ್ರಿಯಿಸಿ ದೊಡವಾಡ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. “ಯುದ್ಧದಲ್ಲಿದ್ದು ತಮ್ಮ ಸೈನ್ಯವನ್ನೇ ತಾವು ಸೋಲಿಸಲು ಕುತಂತ್ರ ಮಾಡಿದಂತೆ, ಜಗದೀಶ ಶೆಟ್ಟರ್ ಕಾಂಗ್ರೆಸ್ ಮಾಡಿದ ಉಪಕಾರಕ್ಕೆ ದ್ರೋಹ ಬಗೆದಿದ್ದಾರೆ. ಇಂಥವರು ಯಾವ ಪಕ್ಷದಲ್ಲಿದ್ದರೂ ದ್ರೋಹ ಬಗೆಯುವುದು ಖಚಿತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜಗದೀಶ್ ಶೆಟ್ಟರ್ ಸೋತರೂ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಕಾಂಗ್ರೆಸ್ ನೀಡಿತ್ತು. ರಾಜಕಾರಣಿಗಳು ಮುಂದಿನ ಪೀಳಿಗೆಗೆ ಉತ್ತಮ‌ ನಡೆಯನ್ನು ಉಳಿಸಿ ಹೋಗಬೇಕು. ಆದರೆ, ಶೆಟ್ಟರ್ ಅವರದ್ದು ಉತ್ತಮ‌ ರಾಜಕಾರಣಿಯ ನಡೆ ಅಲ್ಲ” ಎಂದು ಕಿಡಿಕಾರಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X